ಮಧ್ಯಪ್ರದೇಶ: ಹೆಂಡತಿಯನ್ನು ಚುಡಾಯಿಸಿದ ಎಂದು ಆರೋಪಿಸಿ ವೃದ್ಧ ದಲಿತ ದಂಪತಿಗಳ ಮೇಲೆ ಹಲ್ಲೆ ಮಾಡಿ, ಶೂಗಳ ಹಾರ ಹಾಕಿಸಿರುವ ಘಟನೆ ಮಧ್ಯಪ್ರದೇಶದ ಅಶೋಕನಗರದಲ್ಲಿ ನಡೆದಿದೆ.
ಮುಂಗೌಲಿ ಪೊಲೀಸ್ ಠಾಣಾ ವ್ಯಾಪ್ತಿಯ ಕಿಲೋರಾ ಹಳ್ಳಿಯಲ್ಲಿ ಶನಿವಾರ ಸಂಜೆ(ಮೇ.18) ಈ ಘಟನೆ ನಡೆದಿದ್ದು, ಈ ಬಗ್ಗೆ 10 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವೃದ್ದ ದಂಪತಿಯ ಮಗ ಆರೋಪಿಗಳಲ್ಲಿ ಒಬ್ಬನ ಹೆಂಡತಿಯನ್ನು ಚುಡಾಯಿಸಿದ್ದಾನೆ ಎಂದು ಆರೋಪಿಸಿ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದು, 65 ವರ್ಷದ ದಲಿತ ವ್ಯಕ್ತಿ ಮತ್ತು ಆತನ ಹೆಂಡತಿ 60 ವರ್ಷದ ಪತ್ನಿಯನ್ನು ಕಂಬಕ್ಕೆ ಕಟ್ಟಿ ಥಳಿಸಿದ್ದಾರೆ. ಘಟನೆ ಬಳಿಕ ದಲಿತ ಕುಟುಂಬ ಊರು ತೊರೆದಿದೆ ಎಂದು ಪೊಲೀಸರು ಹೇಳಿದ್ದಾರೆ.
ಸಂತ್ರಸ್ತ ಮಹಿಳೆ ನೀಡಿದ ದೂರಿನ ಮೇರೆಗೆ ಶನಿವಾರ(ಮೇ.18) ೧೦ ಮಂದಿ ವಿರುದ್ಧ ಐಪಿಸಿ ಸೆಕ್ಸನ್ ೧೪೭(ಗಲಭೆ) ಹಾಗೂ ಎಸ್ಪಿ, ಎಸ್ಟಿ ಪಂಗಡಗಳ ಮೇಲಿನ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಆರೋಪಿಗಳು ತಲೆಮರೆಸಿಕೊಂಡಿದ್ದು, ಪತ್ತೆ ಹಚ್ಚುವ ಕಾರ್ಯ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…
ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…
ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…
ಬೆಂಗಳೂರು: SIR ನೋಟಿಸ್ಗಳ ವಿಚಾರಣೆ ಅಧಿಕೃತವಾಗಿ ಆರಂಭವಾಗಿದೆ. ವಿಚಾರಣೆಗೆ ಹಾಜರಾಗುವ ವೇಳೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಕೊಂಡೊಯ್ಯುವುದು ಮುಖ್ಯವಾಗಿದೆ. ನಿಮ್ಮ…
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…