ನವದೆಹಲಿ: ಪ್ರತಿ ವಿಷಯದಲ್ಲೂ ಆರೋಪಿಗಳ ಮನೆಗಳನ್ನು ಬುಲ್ಡೋಜರ್ ಮೂಲಕ ಹೊಡೆದು ಹಾಕುವ ಪ್ರವೃತ್ತಿ ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಕೊನೆಗೊಳ್ಳುತ್ತಿಲ್ಲ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಕಿಡಿಕಾರಿದ್ದಾರೆ.
ಮಧ್ಯಪ್ರದೇಶದ ಛತ್ತರ್ಪುರ ಘಟನೆಯ ನಂತರ, ಬುಲ್ಡೋಜರ್ ನ್ಯಾಯ ವಿರುದ್ಧ ಕಾಂಗ್ರೆಸ್ ಕಿಡಿಕಾರಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಿಯಾಂಕಾ ಗಾಂಧಿ ಇದು ನ್ಯಾಯವಲ್ಲ. ಅನಾಗರಿಕತೆಯ ಪರಮಾವಧಿ ಎಂದು ವಾಗ್ದಾಳಿ ನಡೆಸಿದ್ದಾರೆ.
ಯಾವುದೇ ಅಪರಾಧದ ಆರೋಪಿಯಾಗಿದ್ದರೆ, ಆತನ ಅಪರಾಧ ಹಾಗೂ ಶಿಕ್ಷೆಯನ್ನು ನ್ಯಾಯಾಲಯ ನಿರ್ಧಾರ ಮಾಡುತ್ತದೆ. ಆದರೆ ಆರೋಪ ಬಂದ ತಕ್ಷಣ ಆರೋಪಿಗಳ ಕುಟಂಬಕ್ಕೆ ಶಿಕ್ಷೆ ವಿಧಿಸುವುದು ಸರಿಯಲ್ಲ. ಇದು ಅನಾಗರಿಕತೆ ಮತ್ತು ಅನ್ಯಾಯದ ಪರಮಾವಧಿ ಎಂದು ಪ್ರಿಯಾಂಕಾ ಗಾಂಧಿ ಟ್ವೀಟ್ ಮಾಡಿ ಕಿಡಿಕಾರಿದ್ದಾರೆ.
ಇನ್ನು ಎರಡು ದಿನಗಳ ಹಿಂದೆ ಛತ್ತರ್ಪುರ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ನಡೆದಿದ್ದು, ಕೆಲ ಪೊಲೀಸರು ಗಾಯಗೊಂಡಿದ್ದರು. ಇದರಿಂದ ರೊಚ್ಚಿಗೆದ್ದ ಪೊಲೀಸರು ಮರುದಿನವೇ ಆರೋಪಿಯೊಬ್ಬನ ಮನೆಯನ್ನು ಕೆಡವಿದರು. ಅಷ್ಟೇ ಅಲ್ಲದೇ ಮೂರು ಐಷಾರಾಮಿ ಕಾರುಗಳನ್ನು ಸಹ ಬುಲ್ಡೋಜರ್ನಿಂದ ನಾಶಪಡಿಸಲಾಗಿದೆ.
ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮಲಾಪುರ ಬಳಿ ಅನೇಕ ದಿನಗಳಿಂದ ರೈತರಿಗೆ ಉಪಟಳ ನೀಡಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿಯನ್ನು…
ಬೆಳ್ತಂಗಡಿ : ಧರ್ಮಸ್ಥಳ ವಿರುದ್ಧ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿಗೆ ಎರಡನೇ ಬಾರಿಗೆ ಗಡಿಪಾರು ಮಾಡಿ ಪುತ್ತೂರು ಎ.ಸಿ.ಆದೇಶ…
ಹೊಸದಿಲ್ಲಿ : ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಅಸ್ತಿತ್ವದಲ್ಲಿರುವ ‘ಮನ್ರೇಗಾ ಯೋಜನೆ’(ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ)ಯಿಂದ…
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ಸದಸ್ಯರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಈಗ ಎಂಡಿಎ)ದಿಂದ ಕಾನೂನು ಬಾಹಿರವಾಗಿ…
ಒಮಾನ್ : ಭಾರತ ಮತ್ತು ಒಮಾನ್ ನಡುವಿನ ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದ (ಸಿಇಪಿಎ) ದ್ವಿಪಕ್ಷೀಯ ಸಂಬಂಧಗಳಿಗೆ ಹೊಸ ವಿಶ್ವಾಸ…
ಬೆಳಗಾವಿ : ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿ ವಿಳಂಬ ಮತ್ತು ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗಳು ವಿಧಾನಸಭೆಯಲ್ಲಿ ಪ್ರತಿಧ್ವನಿಸಿದವು. ಪ್ರತಿಪಕ್ಷದ ನಾಯಕ ಆರ್.ಅಶೋಕ್…