ನವದೆಹಲಿ: ಪ್ರತಿ ವಿಷಯದಲ್ಲೂ ಆರೋಪಿಗಳ ಮನೆಗಳನ್ನು ಬುಲ್ಡೋಜರ್ ಮೂಲಕ ಹೊಡೆದು ಹಾಕುವ ಪ್ರವೃತ್ತಿ ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಕೊನೆಗೊಳ್ಳುತ್ತಿಲ್ಲ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಕಿಡಿಕಾರಿದ್ದಾರೆ.
ಮಧ್ಯಪ್ರದೇಶದ ಛತ್ತರ್ಪುರ ಘಟನೆಯ ನಂತರ, ಬುಲ್ಡೋಜರ್ ನ್ಯಾಯ ವಿರುದ್ಧ ಕಾಂಗ್ರೆಸ್ ಕಿಡಿಕಾರಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಿಯಾಂಕಾ ಗಾಂಧಿ ಇದು ನ್ಯಾಯವಲ್ಲ. ಅನಾಗರಿಕತೆಯ ಪರಮಾವಧಿ ಎಂದು ವಾಗ್ದಾಳಿ ನಡೆಸಿದ್ದಾರೆ.
ಯಾವುದೇ ಅಪರಾಧದ ಆರೋಪಿಯಾಗಿದ್ದರೆ, ಆತನ ಅಪರಾಧ ಹಾಗೂ ಶಿಕ್ಷೆಯನ್ನು ನ್ಯಾಯಾಲಯ ನಿರ್ಧಾರ ಮಾಡುತ್ತದೆ. ಆದರೆ ಆರೋಪ ಬಂದ ತಕ್ಷಣ ಆರೋಪಿಗಳ ಕುಟಂಬಕ್ಕೆ ಶಿಕ್ಷೆ ವಿಧಿಸುವುದು ಸರಿಯಲ್ಲ. ಇದು ಅನಾಗರಿಕತೆ ಮತ್ತು ಅನ್ಯಾಯದ ಪರಮಾವಧಿ ಎಂದು ಪ್ರಿಯಾಂಕಾ ಗಾಂಧಿ ಟ್ವೀಟ್ ಮಾಡಿ ಕಿಡಿಕಾರಿದ್ದಾರೆ.
ಇನ್ನು ಎರಡು ದಿನಗಳ ಹಿಂದೆ ಛತ್ತರ್ಪುರ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ನಡೆದಿದ್ದು, ಕೆಲ ಪೊಲೀಸರು ಗಾಯಗೊಂಡಿದ್ದರು. ಇದರಿಂದ ರೊಚ್ಚಿಗೆದ್ದ ಪೊಲೀಸರು ಮರುದಿನವೇ ಆರೋಪಿಯೊಬ್ಬನ ಮನೆಯನ್ನು ಕೆಡವಿದರು. ಅಷ್ಟೇ ಅಲ್ಲದೇ ಮೂರು ಐಷಾರಾಮಿ ಕಾರುಗಳನ್ನು ಸಹ ಬುಲ್ಡೋಜರ್ನಿಂದ ನಾಶಪಡಿಸಲಾಗಿದೆ.
ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…