ಪ್ರಯಾಗ್ ರಾಜ್: 144 ವರ್ಷಗಳಿಗೊಮ್ಮೆ ನಡೆಯುವ ವಿಶ್ವದ ಅತಿದೊಡ್ಡ ಧಾರ್ಮಿಕ ಮೇಳವಾದ ಮಹಾ ಕುಂಭಮೇಳಕ್ಕೆ ಪ್ರಯಾಗ್ ರಾಜ್ನಲ್ಲಿ ವಿದ್ಯುಕ್ತ ಚಾಲನೆ ದೊರೆತಿದೆ.
ಇಂದಿನಿಂದ 44 ದಿನಗಳ ಕಾಲ ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ಮಹಾಕುಂಭ ಮೇಳ ಸಂಭ್ರಮ ನಡೆಯಲಿದೆ. ಮಹಾ ಕುಂಭಮೇಳಕ್ಕೆ ಇಂದು ಬೆಳಗಿನ ಜಾವ ಮೊದಲ ಶಾಹಿ ಸ್ನಾನ ಮಾಡುವ ಮೂಲಕ ವಿದ್ಯುಕ್ತ ಚಾಲನೆ ನೀಡಲಾಗಿದೆ. ಇಂದು ಲಕ್ಷಾಂತರ ಸಂಖ್ಯೆಯಲ್ಲಿ ನಾಗ ಸಾಧುಗಳು ಶಾಹಿ ಸ್ನಾನದಲ್ಲಿ ಭಾಗಿಯಾಗಿದ್ದಾರೆ.
ಮುಂದಿನ ತಿಂಗಳ ಫೆಬ್ರವರಿ.26ರ ಮಹಾ ಶಿವರಾತ್ರಿಯವರೆಗೂ ಮಹಾಕುಂಭ ಮೇಳ ನಡೆಯಲಿದೆ. 40 ಕೋಟಿಗೂ ಅಧಿಕ ಜನರು ಈ ಕುಂಭಮೇಳದಲ್ಲಿ ಭಾಗಿಯಾಗುವ ಸಾಧ್ಯತೆಯಿದ್ದು, ಗಂಗಾ, ಯಮುನಾ, ಸರಸ್ವತಿ ನದಿಗಳ ಸಂಗಮದಲ್ಲಿ ಪುಣ್ಯ ಸ್ನಾನ ನಡೆಯಲಿದ್ದು, ಉತ್ತರ ಪ್ರದೇಶ ಸರ್ಕಾರದಿಂದ ಸಂಪೂರ್ಣ ತಯಾರಿ ನಡೆದಿದೆ.
ಮಹಾಕುಂಭ ಮೇಳದಲ್ಲಿ ಆರು ಶಾಹಿ ಸ್ನಾನ ನಡೆಯಲಿದ್ದು, ಪುಣ್ಯಸ್ನಾನಕ್ಕೆ ಸರ್ಕಾರದಿಂದ ಸಕಲ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಯಾವುದೇ ರೀತಿಯ ಅಹಿತರಕ ಘಟನೆ ನಡೆಯದಂತೆ ಸರ್ಕಾರ ಎಚ್ಚರಿಕೆ ವಹಿಸಿದೆ.
ನದಿಯ ಉದ್ದಕ್ಕೂ 12 ಕಿ.ಮೀ ಘಾಟ್ಗಳನ್ನು ನಿರ್ಮಾಣ ಮಾಡಲಾಗಿದ್ದು, ಇದೇ ಮೊದಲ ಬಾರಿಗೆ ಎನ್ಡಿಆರ್ಎಫ್ ಪಡೆಯಿಂದ ನೀರಿನ ಮೇಲೆ ಆಂಬುಲೆನ್ಸ್ ನಿರ್ಮಾಣ ಮಾಡಲಾಗಿದೆ.
ಇನ್ನು ನದಿಯಲ್ಲಿ ಪುಣ್ಯಸ್ನಾನ ಮಾಡುವವರ ಸುರಕ್ಷತೆಗಾಗಿ 800 ಪ್ರಾದೇಶಿಕ ಸಶಸ್ತ್ರ ಕಾನ್ಸ್ಟೇಬಲ್, 150 ಎಸ್ಡಿಆರ್ಎಫ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.
ಇಸ್ಲಾಮಾಬಾದ್: ಮಧ್ಯಪ್ರಾಚ್ಯ ಹಾಗೂ ಕೊಲ್ಲಿ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧವನ್ನು ನಿಲ್ಲಿಸಲು ಇರಾನ್ ಮತ್ತು ಅಮೇರಿಕಾ ನಡುವೆ 2ನೇ ಸುತ್ತಿನ ಮಾತುಕತೆಗೆ…
ನವದೆಹಲಿ: ಇಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜನ್ಮ ಜಯಂತಿ. ಇದರ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ…
ನವದೆಹಲಿ: ಈ ವರ್ಷ ದೇಶದಲ್ಲಿ ವಾಡಿಕೆಗಿಂತ ಕಡಿಮೆ ಮುಂಗಾರು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.…
ಬೆಂಗಳೂರು: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಎಂಎಲ್ಸಿ ನಜೀರ್ ಅಹಮ್ಮದ್ ಅವರು ರಾಜೀನಾಮೆ ನೀಡಿದ್ದಾರೆ. ನಜೀರ್ ಅಹಮ್ಮದ್ ಅವರು ಸಿಎಂ…
ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಮೂಲಕ ಹರಿಯುವ ಲಕ್ಷ್ಮಣತೀರ್ಥ ನದಿ ಕಾವೇರಿ ನದಿಯ ಉಪನದಿಯಾಗಿದ್ದು, ಹುಣಸೂರು ಭಾಗದ ಬಹಳ ಮುಖ್ಯವಾದ…
ರೈಲ್ವೆ ನೇಮಕಾತಿ ಪರೀಕ್ಷೆಗಳನ್ನು ಕರ್ನಾಟಕದವರು ಇನ್ನು ಮುಂದೆ ಕನ್ನಡದಲ್ಲಿ ಬರೆಯಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಹಾಗೂ ರೈಲ್ವೆ ಇಲಾಖೆ…