ದೇಶ- ವಿದೇಶ

ವಿಶ್ವದ ಅತಿದೊಡ್ಡ ಧಾರ್ಮಿಕ ಮೇಳ ಮಹಾಕುಂಭಮೇಳಕ್ಕೆ ವಿದ್ಯುಕ್ತ ಚಾಲನೆ

ಪ್ರಯಾಗ್‌ ರಾಜ್‌: 144 ವರ್ಷಗಳಿಗೊಮ್ಮೆ ನಡೆಯುವ ವಿಶ್ವದ ಅತಿದೊಡ್ಡ ಧಾರ್ಮಿಕ ಮೇಳವಾದ ಮಹಾ ಕುಂಭಮೇಳಕ್ಕೆ ಪ್ರಯಾಗ್‌ ರಾಜ್‌ನಲ್ಲಿ ವಿದ್ಯುಕ್ತ ಚಾಲನೆ ದೊರೆತಿದೆ.

ಇಂದಿನಿಂದ 44 ದಿನಗಳ ಕಾಲ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಮಹಾಕುಂಭ ಮೇಳ ಸಂಭ್ರಮ ನಡೆಯಲಿದೆ. ಮಹಾ ಕುಂಭಮೇಳಕ್ಕೆ ಇಂದು ಬೆಳಗಿನ ಜಾವ ಮೊದಲ ಶಾಹಿ ಸ್ನಾನ ಮಾಡುವ ಮೂಲಕ ವಿದ್ಯುಕ್ತ ಚಾಲನೆ ನೀಡಲಾಗಿದೆ. ಇಂದು ಲಕ್ಷಾಂತರ ಸಂಖ್ಯೆಯಲ್ಲಿ ನಾಗ ಸಾಧುಗಳು ಶಾಹಿ ಸ್ನಾನದಲ್ಲಿ ಭಾಗಿಯಾಗಿದ್ದಾರೆ.

ಮುಂದಿನ ತಿಂಗಳ ಫೆಬ್ರವರಿ.26ರ ಮಹಾ ಶಿವರಾತ್ರಿಯವರೆಗೂ ಮಹಾಕುಂಭ ಮೇಳ ನಡೆಯಲಿದೆ. 40 ಕೋಟಿಗೂ ಅಧಿಕ ಜನರು ಈ ಕುಂಭಮೇಳದಲ್ಲಿ ಭಾಗಿಯಾಗುವ ಸಾಧ್ಯತೆಯಿದ್ದು, ಗಂಗಾ, ಯಮುನಾ, ಸರಸ್ವತಿ ನದಿಗಳ ಸಂಗಮದಲ್ಲಿ ಪುಣ್ಯ ಸ್ನಾನ ನಡೆಯಲಿದ್ದು, ಉತ್ತರ ಪ್ರದೇಶ ಸರ್ಕಾರದಿಂದ ಸಂಪೂರ್ಣ ತಯಾರಿ ನಡೆದಿದೆ.

ಮಹಾಕುಂಭ ಮೇಳದಲ್ಲಿ ಆರು ಶಾಹಿ ಸ್ನಾನ ನಡೆಯಲಿದ್ದು, ಪುಣ್ಯಸ್ನಾನಕ್ಕೆ ಸರ್ಕಾರದಿಂದ ಸಕಲ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಯಾವುದೇ ರೀತಿಯ ಅಹಿತರಕ ಘಟನೆ ನಡೆಯದಂತೆ ಸರ್ಕಾರ ಎಚ್ಚರಿಕೆ ವಹಿಸಿದೆ.

ನದಿಯ ಉದ್ದಕ್ಕೂ 12 ಕಿ.ಮೀ ಘಾಟ್‌ಗಳನ್ನು ನಿರ್ಮಾಣ ಮಾಡಲಾಗಿದ್ದು, ಇದೇ ಮೊದಲ ಬಾರಿಗೆ ಎನ್‌ಡಿಆರ್‌ಎಫ್‌ ಪಡೆಯಿಂದ ನೀರಿನ ಮೇಲೆ ಆಂಬುಲೆನ್ಸ್‌ ನಿರ್ಮಾಣ ಮಾಡಲಾಗಿದೆ.

ಇನ್ನು ನದಿಯಲ್ಲಿ ಪುಣ್ಯಸ್ನಾನ ಮಾಡುವವರ ಸುರಕ್ಷತೆಗಾಗಿ 800 ಪ್ರಾದೇಶಿಕ ಸಶಸ್ತ್ರ ಕಾನ್ಸ್‌ಟೇಬಲ್‌, 150 ಎಸ್‌ಡಿಆರ್‌ಎಫ್‌ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮೇಕೆದಾಟು ಯೋಜನೆಗೆ ಶೀಘ್ರದಲ್ಲೇ ಕೇಂದ್ರದಿಂದ ಅನುಮತಿ ಸಿಗುವ ಸಾಧ್ಯತೆ: ಸಚಿವ ರಾಮಲಿಂಗಾರೆಡ್ಡಿ

ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…

55 mins ago

ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

1 hour ago

ಅಪ್ರಾಪ್ತರನ್ನು ಬಿಡುಗಡೆ ಮಾಡಿ, ಕ್ರಿಮಿನಲ್‌ಗಳ ವಿರುದ್ಧ ತನಿಖೆ ನಡೆಸಿ: ಸುಪ್ರೀಂಕೋರ್ಟ್‌

ನವದೆಹಲಿ: ಜಂತರ್‌ ಮಂತರ್‌ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…

1 hour ago

ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ಸ್‌ ನೀರು ಬಿಡಲು CWRC ಆದೇಶ: ಮಂಡ್ಯದಲ್ಲಿ ಭುಗಿಲೆದ್ದ ಆಕ್ರೋಶ

ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್‌ನಂತೆ 15…

2 hours ago

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

11 hours ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

11 hours ago