ಪ್ರಯಾಗ್ ರಾಜ್: 144 ವರ್ಷಗಳಿಗೊಮ್ಮೆ ನಡೆಯುವ ವಿಶ್ವದ ಅತಿದೊಡ್ಡ ಧಾರ್ಮಿಕ ಮೇಳವಾದ ಮಹಾ ಕುಂಭಮೇಳಕ್ಕೆ ಪ್ರಯಾಗ್ ರಾಜ್ನಲ್ಲಿ ವಿದ್ಯುಕ್ತ ಚಾಲನೆ ದೊರೆತಿದೆ.
ಇಂದಿನಿಂದ 44 ದಿನಗಳ ಕಾಲ ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ಮಹಾಕುಂಭ ಮೇಳ ಸಂಭ್ರಮ ನಡೆಯಲಿದೆ. ಮಹಾ ಕುಂಭಮೇಳಕ್ಕೆ ಇಂದು ಬೆಳಗಿನ ಜಾವ ಮೊದಲ ಶಾಹಿ ಸ್ನಾನ ಮಾಡುವ ಮೂಲಕ ವಿದ್ಯುಕ್ತ ಚಾಲನೆ ನೀಡಲಾಗಿದೆ. ಇಂದು ಲಕ್ಷಾಂತರ ಸಂಖ್ಯೆಯಲ್ಲಿ ನಾಗ ಸಾಧುಗಳು ಶಾಹಿ ಸ್ನಾನದಲ್ಲಿ ಭಾಗಿಯಾಗಿದ್ದಾರೆ.
ಮುಂದಿನ ತಿಂಗಳ ಫೆಬ್ರವರಿ.26ರ ಮಹಾ ಶಿವರಾತ್ರಿಯವರೆಗೂ ಮಹಾಕುಂಭ ಮೇಳ ನಡೆಯಲಿದೆ. 40 ಕೋಟಿಗೂ ಅಧಿಕ ಜನರು ಈ ಕುಂಭಮೇಳದಲ್ಲಿ ಭಾಗಿಯಾಗುವ ಸಾಧ್ಯತೆಯಿದ್ದು, ಗಂಗಾ, ಯಮುನಾ, ಸರಸ್ವತಿ ನದಿಗಳ ಸಂಗಮದಲ್ಲಿ ಪುಣ್ಯ ಸ್ನಾನ ನಡೆಯಲಿದ್ದು, ಉತ್ತರ ಪ್ರದೇಶ ಸರ್ಕಾರದಿಂದ ಸಂಪೂರ್ಣ ತಯಾರಿ ನಡೆದಿದೆ.
ಮಹಾಕುಂಭ ಮೇಳದಲ್ಲಿ ಆರು ಶಾಹಿ ಸ್ನಾನ ನಡೆಯಲಿದ್ದು, ಪುಣ್ಯಸ್ನಾನಕ್ಕೆ ಸರ್ಕಾರದಿಂದ ಸಕಲ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಯಾವುದೇ ರೀತಿಯ ಅಹಿತರಕ ಘಟನೆ ನಡೆಯದಂತೆ ಸರ್ಕಾರ ಎಚ್ಚರಿಕೆ ವಹಿಸಿದೆ.
ನದಿಯ ಉದ್ದಕ್ಕೂ 12 ಕಿ.ಮೀ ಘಾಟ್ಗಳನ್ನು ನಿರ್ಮಾಣ ಮಾಡಲಾಗಿದ್ದು, ಇದೇ ಮೊದಲ ಬಾರಿಗೆ ಎನ್ಡಿಆರ್ಎಫ್ ಪಡೆಯಿಂದ ನೀರಿನ ಮೇಲೆ ಆಂಬುಲೆನ್ಸ್ ನಿರ್ಮಾಣ ಮಾಡಲಾಗಿದೆ.
ಇನ್ನು ನದಿಯಲ್ಲಿ ಪುಣ್ಯಸ್ನಾನ ಮಾಡುವವರ ಸುರಕ್ಷತೆಗಾಗಿ 800 ಪ್ರಾದೇಶಿಕ ಸಶಸ್ತ್ರ ಕಾನ್ಸ್ಟೇಬಲ್, 150 ಎಸ್ಡಿಆರ್ಎಫ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…