ದೇಶ- ವಿದೇಶ

ವಿಶ್ವದ ಅತಿದೊಡ್ಡ ಧಾರ್ಮಿಕ ಮೇಳ ಮಹಾಕುಂಭಮೇಳಕ್ಕೆ ವಿದ್ಯುಕ್ತ ಚಾಲನೆ

ಪ್ರಯಾಗ್‌ ರಾಜ್‌: 144 ವರ್ಷಗಳಿಗೊಮ್ಮೆ ನಡೆಯುವ ವಿಶ್ವದ ಅತಿದೊಡ್ಡ ಧಾರ್ಮಿಕ ಮೇಳವಾದ ಮಹಾ ಕುಂಭಮೇಳಕ್ಕೆ ಪ್ರಯಾಗ್‌ ರಾಜ್‌ನಲ್ಲಿ ವಿದ್ಯುಕ್ತ ಚಾಲನೆ ದೊರೆತಿದೆ.

ಇಂದಿನಿಂದ 44 ದಿನಗಳ ಕಾಲ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಮಹಾಕುಂಭ ಮೇಳ ಸಂಭ್ರಮ ನಡೆಯಲಿದೆ. ಮಹಾ ಕುಂಭಮೇಳಕ್ಕೆ ಇಂದು ಬೆಳಗಿನ ಜಾವ ಮೊದಲ ಶಾಹಿ ಸ್ನಾನ ಮಾಡುವ ಮೂಲಕ ವಿದ್ಯುಕ್ತ ಚಾಲನೆ ನೀಡಲಾಗಿದೆ. ಇಂದು ಲಕ್ಷಾಂತರ ಸಂಖ್ಯೆಯಲ್ಲಿ ನಾಗ ಸಾಧುಗಳು ಶಾಹಿ ಸ್ನಾನದಲ್ಲಿ ಭಾಗಿಯಾಗಿದ್ದಾರೆ.

ಮುಂದಿನ ತಿಂಗಳ ಫೆಬ್ರವರಿ.26ರ ಮಹಾ ಶಿವರಾತ್ರಿಯವರೆಗೂ ಮಹಾಕುಂಭ ಮೇಳ ನಡೆಯಲಿದೆ. 40 ಕೋಟಿಗೂ ಅಧಿಕ ಜನರು ಈ ಕುಂಭಮೇಳದಲ್ಲಿ ಭಾಗಿಯಾಗುವ ಸಾಧ್ಯತೆಯಿದ್ದು, ಗಂಗಾ, ಯಮುನಾ, ಸರಸ್ವತಿ ನದಿಗಳ ಸಂಗಮದಲ್ಲಿ ಪುಣ್ಯ ಸ್ನಾನ ನಡೆಯಲಿದ್ದು, ಉತ್ತರ ಪ್ರದೇಶ ಸರ್ಕಾರದಿಂದ ಸಂಪೂರ್ಣ ತಯಾರಿ ನಡೆದಿದೆ.

ಮಹಾಕುಂಭ ಮೇಳದಲ್ಲಿ ಆರು ಶಾಹಿ ಸ್ನಾನ ನಡೆಯಲಿದ್ದು, ಪುಣ್ಯಸ್ನಾನಕ್ಕೆ ಸರ್ಕಾರದಿಂದ ಸಕಲ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಯಾವುದೇ ರೀತಿಯ ಅಹಿತರಕ ಘಟನೆ ನಡೆಯದಂತೆ ಸರ್ಕಾರ ಎಚ್ಚರಿಕೆ ವಹಿಸಿದೆ.

ನದಿಯ ಉದ್ದಕ್ಕೂ 12 ಕಿ.ಮೀ ಘಾಟ್‌ಗಳನ್ನು ನಿರ್ಮಾಣ ಮಾಡಲಾಗಿದ್ದು, ಇದೇ ಮೊದಲ ಬಾರಿಗೆ ಎನ್‌ಡಿಆರ್‌ಎಫ್‌ ಪಡೆಯಿಂದ ನೀರಿನ ಮೇಲೆ ಆಂಬುಲೆನ್ಸ್‌ ನಿರ್ಮಾಣ ಮಾಡಲಾಗಿದೆ.

ಇನ್ನು ನದಿಯಲ್ಲಿ ಪುಣ್ಯಸ್ನಾನ ಮಾಡುವವರ ಸುರಕ್ಷತೆಗಾಗಿ 800 ಪ್ರಾದೇಶಿಕ ಸಶಸ್ತ್ರ ಕಾನ್ಸ್‌ಟೇಬಲ್‌, 150 ಎಸ್‌ಡಿಆರ್‌ಎಫ್‌ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್

ಬೆಳ್ಳಿ ಖಡ್ಗ, ದೇವಿಗೆ ರೇಷ್ಮೆ ಸೀರೆ ಅರ್ಪಿಸಿ ವಿಶೇಷ ಪೂಜೆ, ಪ್ರಾರ್ಥನೆ ಉಡುಪಿ : ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್…

12 hours ago

ವೈದ್ಯಕೀಯ ಕೋರ್ಸ್‌ಗಳ ಶುಲ್ಕ ಹೆಚ್ಚಳ ಇಲ್ಲ

ಹಿಂದಿನ ವರ್ಷದ ಶುಲ್ಕವೇ ಈ ವರ್ಷಕ್ಕೂ ಅನ್ವಯ   ಬೆಂಗಳೂರು :  ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವೈದ್ಯಕೀಯ, ದಂತ ವೈದ್ಯಕೀಯ,…

13 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಪ್ರೇಕ್ಷಕ ಚಿತ್ರಮಂದಿರದಿಂದ ವಿಮುಖನಾಗುತ್ತಿದ್ದಾನೆಯೇ?

ಸಾಮಾಜಿಕ ತಾಣಗಳಲ್ಲಿ, ನವ ಮಾಧ್ಯಮಗಳಲ್ಲಿ ಅವರವರ ಭಾವಕ್ಕೆ ಅವರವರ ಅನುಭವಕ್ಕೆ ತಕ್ಕಂತೆ ಜಿಜ್ಞಾಸೆ ನಡೆದಿದೆ. ಚಿತ್ರಮಂದಿರಗಳಿಂದ ಪ್ರೇಕ್ಷಕ ದೂರವಾಗುತ್ತಿದ್ದಾನೆ; ಅವನನ್ನು…

18 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 12 ಶುಕ್ರವಾರ

20 hours ago

ಮಳವಳ್ಳಿ | ಚಿರತೆ ಪ್ರತ್ಯಕ್ಷ ; ಆತಂಕ

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…

1 day ago

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

1 day ago