ಪ್ರಯಾಗ್ ರಾಜ್: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದು ಉತ್ತರ ಪ್ರದೇಶದ ಪ್ರಯಾಗ್ ರಾಜ್ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳಕ್ಕೆ ಭೇಟಿ ನೀಡಿ ಗಂಗಾ, ಯಮುನಾ ಹಾಗೂ ಸರಸ್ವತಿ ನದಿಗಳ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದರು.
ಇಂದು ಪ್ರಯಾಗ್ ರಾಜ್ಗೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ರಾಜ್ಯಪಾಲೆ ಆನಂದಿಬೆಲ್ ಪಟೇಲ್ ಹಾಗೂ ಸಿಎಂ ಯೋಗಿ ಆದಿತ್ಯನಾಥ್ ಅವರು ಸ್ವಾಗತಿಸಿದರು.
ಬಳಿಕ ಪ್ರಯಾಗ್ ರಾಜ್ನ ತ್ರಿವೇಣಿ ಸಂಗಮಕ್ಕೆ ತೆರಳಿದ ಮುರ್ಮು ಅವರು, ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದರು. ಸ್ನಾನದ ಬಳಿಕ ಅಕ್ಷಯವತ್ ಮತ್ತು ಬಡೇ ಹನುಮಾನ್ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಈ ವೇಳೆ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಸಹ ಇದ್ದರು.
ಇನ್ನು ಜನವರಿ.13ರಿಂದ ಆರಂಭವಾಗಿರುವ ಮಹಾಕುಂಭಮೇಳವು ಶಿವರಾತ್ರಿವರೆಗೂ ನಡೆಯಲಿದೆ. ಇಲ್ಲಿಯವರೆಗೆ 50 ಕೋಟಿಗೂ ಅಧಿಕ ಜನರು ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದ್ದು, ಮಹಾಕುಂಭಮೇಳ ನಡೆಯುವ ತನಕ ಇನ್ನೂ ಕೋಟ್ಯಾಂತರ ಜನರು ಪವಿತ್ರ ಸ್ನಾನ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ.
ಮಹಾಕುಂಭಮೇಳವು ವಿಶ್ವದ ಅತಿದೊಡ್ಡ ಆಧ್ಮಾತ್ಮಿಕ ಮತ್ತು ಸಾಂಸ್ಕೃತಿಕ ಸಭೆಯಾಗಿದ್ದು, ಜಗತ್ತಿನಾದ್ಯಂತ ಕೋಟ್ಯಾಂತರ ಜನರನ್ನು ತನ್ನತ್ತ ಆಕರ್ಷಿಸುತ್ತಿದೆ.
ಬೆಂಗಳೂರು: ಸುಮಾರು 1ಕೋಟಿ ರೂ. ವರೆಗಿನ ಸರ್ಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಂರಿಗೆ ಮೀಸಲಾತಿ ನೀಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.…
ಬೆಂಗಳೂರು: ಬೇಲೂರು ತಾಲೂಕಿನ ಕೋಗೋಡು ಗ್ರಾಮದಲ್ಲಿ 45 ವರ್ಷದ ಮಹಿಳೆಯೊಬ್ಬರು ಕಾಡಾನೆ ದಾಳಿಯಿಂದ ಮೃತಪಟ್ಟಿರುವುದು ಅತ್ಯಂತ ನೋವಿನ ಸಂಗತಿ, ಈ…
ಬೆಂಗಳೂರು: ಜಲ ಸಂರಕ್ಷಣೆ ವಿಚಾರವಾಗಿ ರಾಜ್ಯದಲ್ಲಿ ಒಂದು ತಿಂಗಳುಗಳ ಕಾಲ ʼಜಲ ಸಂರಕ್ಷಣಾ ಅಭಿಯಾನʼ ಹಮ್ಮಿಕೊಳ್ಳಲಾಗಿದೆ ಎಂದು ಡಿಸಿಎಂ ಡಿಕೆ…
ಬೆಂಗಳೂರು: ಸರ್ವಜ್ಞ ನಗರದಲ್ಲಿ ನಿರ್ಮಾಣಗೊಳ್ಳುತ್ತಿರುವ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಕಾಮಗಾರಿಯನ್ನು ಕ್ಷೇತ್ರದ ಶಾಸಕರಾದ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಪರಿಶೀಲನೆ ನಡೆಸಿದರು.…
ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ ಸ್ಥಾಪನೆಯಾಗಿರುವ 7 ವಿಶ್ವವಿದ್ಯಾಲಯಗಳನ್ನು ಮುಚ್ಚುವುದಾಗಿ ನಾವು ಎಲ್ಲಿಯೂ ಹೇಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾಸಭೆಯಲ್ಲಿ…
ಬೆಂಗಳೂರು: ವೈದ್ಯಕೀಯ ಶಿಕ್ಷಣ ಮತ್ತು ತರಬೇತಿ ಪಡೆದು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸಿತ್ತಿರುವ ತಜ್ಞ ವೈದ್ಯರ ನಿವೃತ್ತಿ ವಯಸ್ಸನ್ನು…