ನವದೆಹಲಿ: ಪ್ರಯಾಗ್ ರಾಜ್ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಉಂಟಾದ ಕಾಲ್ತುಳಿತದಲ್ಲಿ 1000 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಹೊಸ ಬಾಂಬ್ ಸಿಡಿಸಿದ್ದಾರೆ.
ಈ ಬಗ್ಗೆ ರಾಜ್ಯಸಭೆಯಲ್ಲಿಂದು ರಾಷ್ಟ್ರಪತಿಗಳ ಭಾಷಣದ ವಂದನಾ ನಿರ್ಣಯದ ಮೇಲೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಅವರು, ಕಾಲ್ತುಳಿತ ಪ್ರಕರಣದಲ್ಲಿ 1000 ಜನ ಸಾವನ್ನಪ್ಪಿದ್ದಾರೆ ಎಂದು ನಾನು ಹೇಳಿದ್ದೇನೆ. ಒಂದು ವೇಳೆ ನಾನು ಹೇಳಿದ್ದು ತಪ್ಪು ಎನ್ನುವುದಾದರೆ, ಸಾವಿನ ಸಂಖ್ಯೆಯ ಬಗ್ಗೆ ನಿಖರವಾದ ವರದಿಯನ್ನು ಬಿಡುಗಡೆ ಮಾಡಲಿ ಎಂದು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಭಾಷಣಕ್ಕೂ ಮೊದಲಿಗೆ ಜನವರಿ.29ರಂದು ಮಹಾಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮಡಿದ ಸಾವಿರಾರು ಜನರಿಗೆ ಶ್ರದ್ಧಾಂಜಲಿ ಸಲ್ಲಿಸುವುದಾಗಿ ತಿಳಿಸಿದರು. ಈ ವೇಳೆ ಸಭಾಪತಿ ಜಗದೀಪ್ ಧನಕರ್ ಅವರು ಈ ಹೇಳಿಕೆಯನ್ನು ಹಿಂತೆಗೆದುಕೊಳ್ಳುವಂತೆ ಹೇಳಿದರು.
ಈ ವೇಳೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಅವರು, ಕಾಲ್ತುಳಿತ ಪ್ರಕರಣದಲ್ಲಿ ತುಂಬಾ ಜನರು ಸಾವನ್ನಪ್ಪಿದ್ದಾರೆ. ಒಂದು ಸಾವಿರ ಜನ ಸಾವನ್ನಪ್ಪಿದ್ದಾರೆ ಎಂದು ಹೇಳುತ್ತಿದ್ದೇವೆ. ನಾನು ಹೇಳುವುದು ತಪ್ಪಾದರೆ ಸಾವಿನ ಸಂಖ್ಯೆಯ ಬಗ್ಗೆ ನಿಖರವಾದ ವರದಿ ಬಿಡುಗಡೆ ಮಾಡಲಿ ಎಂದು ಒತ್ತಾಯಿಸಿದರು.
ಡಾ. ಪ್ರಮೀಳಾದೇವಿ ಬಿ.ಕೆ ೧೯೩೧-೩೨ರಲ್ಲಿ ಗಾಂಧಿಜಿಯವರು ಉಪ್ಪಿನ ಸತ್ಯಾಗ್ರಹದ ನಂತರ ರೌಂಡ್ ಟೇಬಲ್ ಮಾತುಕತೆಗಾಗಿ ಇಂಗ್ಲೆಂಡಿಗೆ ಹೋದರು. ಈ ವೇಳೆಗಾಗಲೆ…
ಚಾಮರಾಜನಗರ ಮೈಸೂರು ಜಿಯ ಒಂದು ಸಣ್ಣ ತಾಲ್ಲೂಕು ಕೇಂದ್ರವಾಗಿತ್ತು. ಸುಮಾರು ೯೦ ವರ್ಷಗಳ ಹಿಂದೆ ಸಣ್ಣ ಪಟ್ಟಣ. ೧೯೨೬ರಿಂದ ಇಲ್ಲಿಗೆ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಗೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭೇಟಿ ನೀಡುತ್ತಿದ್ದಾರೆ. ಸ್ವಾಮಿ ವಿವೇಕಾನಂದರ ಐತಿಹಾಸಿಕ…
ನೃತ್ಯ ಮುಂತಾದವುಗಳಲ್ಲಿ ನಾನು ನಡೆಸಿದ ಪ್ರಯೋಗಗಳಿಂದ ನಾನು ಉಚ್ಚೃಂಖಲ ಪ್ರವೃತ್ತಿಯುಳ್ಳವನಾಗಿದ್ದನೆಂದು ಯಾರೂ ತಿಳಿಯಬಾರದು. ಅದರಲ್ಲಿಯೂ ವಿವೇಕದ ಅಂಶ ಇದ್ದಿತೆಂಬುದು ವಾಚಕರಿಗೆ…
ಮೈಸೂರು: ಡಿ.ಕೆ.ಶಿವಕುಮಾರ್ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…
ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್ ಸರ್ಕಾರದ ಪರವಾಗಿ ನಮ್ರತೆಯ ಮನವಿ…