ನವದೆಹಲಿ: ಉತ್ತರ ಪ್ರದೇಶದ ಪ್ರಯಾಗ್ ರಾಜ್ನಲ್ಲಿ ಸಂಭವಿಸಿದ ಕಾಲ್ತುಳಿತ ಅವಘಡಕ್ಕೆ ಕೇಂದ್ರ ಮತ್ತು ಉತ್ತರ ಪ್ರದೇಶ ಸರ್ಕಾರವೇ ಕಾರಣ ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಮಾತನಾಡಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಮಹಾಕುಂಭಮೇಳವನ್ನು ಉತ್ತಮವಾಗಿ ನಿರ್ವಹಿಸುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೇ ಕಾರಣ ಎಂದು ಆರೋಪಿಸಿದ್ದಾರೆ.
ಇಂದು ಮೌನಿ ಅಮಾವಾಸ್ಯೆ ದಿನವಾದ ಹಿನ್ನೆಲೆಯಲ್ಲಿ ಗಂಗಾ, ಯಮುನಾ ಹಾಗೂ ಸರಸ್ವತಿ ನದಿಗಳ ತ್ರಿವೇಣಿ ಸಂಗಮದಲ್ಲಿ ಲಕ್ಷಾಂತರ ಮಂದಿ ಪ್ರಯಾಗ್ ರಾಜ್ನಲ್ಲಿ ಜಮಾಯಿಸಿದ್ದಾರೆ.
ಈ ನಡುವೆ ಕಾಲ್ತುಳಿತ ಉಂಟಾಗಿ ಹಲವರು ಮೃತಪಟ್ಟಿರುವ ಹಾಗೂ ಅನೇಕರು ಗಾಯಗೊಂಡಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಲ್ಲಿಕಾರ್ಜುನ ಖರ್ಗೆ ಅವರು, ಈ ಘಟನೆ ನಡೆದಿರುವುದು ದುಃಖಕರ ಸಂಗತಿಯಾಗಿದೆ. ಮೃತರ ಕುಟುಂಬಕ್ಕೆ ನನ್ನ ಸಂತಾಪಗಳು. ಘಟನೆಯಲ್ಲಿ ಗಾಯಗೊಂಡಿರುವವರು ಆದಷ್ಟು ಬೇಗ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದರು.
ಇನ್ನೂ ಅನೇಕ ಪವಿತ್ರ ಸ್ನಾನ ಬಾಕಿಯಿವೆ. ಈಗಲಾದರೂ ಕೇಂದ್ರ ಹಾಗೂ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡು ಭವಿಷ್ಯದಲ್ಲಿ ಇಂತಹ ಅಹಿತಕರ ಘಟನೆಗಳು ನಡೆಯದಂತೆ ಸುಧಾರಣೆ ತರಬೇಕಿದೆ ಎಂದು ಆಗ್ರಹಿಸಿದರು.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…