ದೇಶ- ವಿದೇಶ

ಮಹಾಕುಂಭಮೇಳಕ್ಕೆ ವಿದ್ಯುಕ್ತ ಚಾಲನೆ: ಪ್ರಧಾನಿ ನರೇಂದ್ರ ಮೋದಿ ಸಂತಸ

ನವದೆಹಲಿ: ಭಾರತೀಯ ಮೌಲ್ಯಗಳು ಹಾಗೂ ಸಂಸ್ಕೃತಿಯನ್ನು ಪಾಲಿಸುವವರಿಗೆ ಇದು ಬಹಳ ವಿಶೇಷವಾದ ದಿನ ಎಂದು ಪ್ರಧಾನಿ ನರೇಂದ್ರ ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ.

144 ವರ್ಷಗಳಿಗೊಮ್ಮೆ ನಡೆಯುವ ವಿಶ್ವದ ಅತಿದೊಡ್ಡ ಧಾರ್ಮಿಕ ಮೇಳ ಮಹಾ ಕುಂಭಮೇಳಕ್ಕೆ ಪ್ರಯಾಗ್‌ರಾಜ್‌ನಲ್ಲಿ ವಿದ್ಯುಕ್ತ ಚಾಲನೆ ದೊರೆತಿದೆ. ಲಕ್ಷಾಂತರ ನಾಗ ಸಾಧುಗಳು ಶಾಹಿ ಸ್ನಾನ ಮಾಡುವ ಮೂಲಕ ಕುಂಭಮೇಳಕ್ಕೆ ಚಾಲನೆ ನೀಡಿದ್ದಾರೆ.

ಮುಂದಿನ ತಿಂಗಳ ಫೆಬ್ರವರಿ.26ರವರೆಗೂ ಮಹಾಕುಂಭ ಮೇಳೆ ನಡೆಯಲಿದ್ದು, 40 ಕೋಟಿಗೂ ಅಧಿಕ ಜನರು ಭಾಗಿಯಾಗುವ ನಿರೀಕ್ಷೆಯಿದೆ.

ಗಂಗಾ, ಯಮುನಾ, ಸರಸ್ವತಿ ನದಿಗಳ ಸಂಗಮದಲ್ಲಿ ಪುಣ್ಯಸ್ನಾನ ನಡೆಯಲಿದ್ದು, ಇದಕ್ಕಾಗಿ ಉತ್ತರ ಪ್ರದೇಶ ಸರ್ಕಾರದಿಂದ ಸಂಪೂರ್ಣ ತಯಾರಿ ನಡೆದಿದೆ.

ಈ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಭಾರತೀಯ ಮೌಲ್ಯಗಳು ಮತ್ತು ಸಂಸ್ಕೃತಿಯನ್ನು ಪಾಲಿಸುವ ಕೋಟ್ಯಾಂತರ ಜನರಿಗೆ ಇದು ಬಹಳ ವಿಶೇಷವಾದ ದಿನ. ಮಹಾಕುಂಭ ಮೇಳ ಪ್ರಯಾಗ್‌ರಾಜ್‌ನಲ್ಲಿ ಪ್ರಾರಂಭವಾಗಿದ್ದು, ನಂಬಿಕೆ, ಭಕ್ತಿ ಮತ್ತು ಸಂಸ್ಕೃತಿಯ ಪವಿತ್ರ ಸಂಗಮದಲ್ಲಿ ಅಸಂಖ್ಯಾತ ಜನರನ್ನು ಒಟ್ಟುಗೂಡಿಸುತ್ತದೆ. ಮಹಾಕುಂಭವು ಭಾರತದ ಕಾಲಾತೀತ ಆಧ್ಯಾತ್ಮಿಕ ಪರಂಪರೆಯನ್ನು ಸಾಕಾರಗೊಳಿಸುತ್ತದೆ. ನಂಬಿಕೆ ಮತ್ಯು ಸಾಮರಸ್ಯವನ್ನು ಎತ್ತಿ ಹಿಡಿಯುತ್ತದೆ ಎಂದು ಹೇಳಿದ್ದಾರೆ.

ಮತ್ತೊಂದು ಪೋಸ್ಟ್‌ ಮಾಡಿರುವ ಅವರು ಪವಿತ್ರ ಸ್ನಾನ ಮಾಡಿ ಆಶೀರ್ವಾದ ಪಡೆಯಲು ಅಸಂಖ್ಯಾತ ಜನರು ಪ್ರಯಾಗ್‌ರಾಜ್‌ಗೆ ಬರುತ್ತಿರುವುದನ್ನು ನೋಡಿ ನನಗರ ಸಂತೋಷವಾಗಿದೆ. ಎಲ್ಲಾ ಯಾತ್ರಿಕರು ಮತ್ತು ಪ್ರವಾಸಿಗರಿಗೆ ಶುಭ ಹಾರೈಸುತ್ತೇನೆ ಎಂದು ತಿಳಿಸಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮಾದಕ ವಸ್ತು ಮಾರಾಟ, ಬಳಕೆ ವಿರುದ್ಧ ಕಾರ್ಯಾಚರಣೆ

ನವೀನ್ ಡಿಸೋಜ ೩ ತಿಂಗಳಲ್ಲಿ ೧೩೮ ಎನ್‌ಡಿಪಿಎಸ್ ಪ್ರಕರಣ ದಾಖಲು; ೬ ಕೆ.ಜಿ. ೬೬೪ ಗ್ರಾಂ ಗಾಂಜಾ, ೩೫.೬೬ ಗ್ರಾಂ…

2 hours ago

ಹಾಳಾಗಿ ವರ್ಷಗಳೇ ಕಳೆದರೂ ದುರಸ್ತಿಯಾಗದ ಶುದ್ಧ ನೀರಿನ ಘಟಕಗಳು

ಮಹಾದೇಶ್ ಎಂ.ಗೌಡ ಹನೂರು: ತಾಲ್ಲೂಕಿನ ೨೫ ಗ್ರಾಮ ಪಂಚಾಯಿತಿಗಳ ಪೈಕಿ ೨೧ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ೪೭ ಶುದ್ಧ ಕುಡಿಯುವ ನೀರಿನ…

3 hours ago

ಅವೈಜ್ಞಾನಿಕ ರಸ್ತೆ ಕಾಮಗಾರಿಯಿಂದ ಅಪಘಾತಗಳಿಗೆ ಆಹ್ವಾನ

ಎಸ್.ನಾಗಸುಂದರ್ ರೈತನಿಗೆ ಕೈಮೂಳೆ ಮುರಿತ: ಪಾಂಡವಪುರದಲ್ಲಿ ಅವಗಢ, ಸಾರ್ವಜನಿಕರ ಆಕ್ರೋಶ ಪಾಂಡವಪುರ: ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿ ಅವೈಜ್ಞಾನಿಕವಾಗಿ ಮತ್ತು…

3 hours ago

ಅರ್ಜುನಹಳ್ಳಿ ಗ್ರಾಪಂಗೆ ಗಾಂಧಿ ಗ್ರಾಮ ಪುರಸ್ಕಾರ

ಎರಡನೇ ಬಾರಿ ಪ್ರಶಸ್ತಿ ಪಡೆದು ಗಮನಸೆಳೆದ ಪಂಚಾಯಿತಿ ಭೇರ್ಯ ಮಹೇಶ್ ಕೆ.ಆರ್.ನಗರ : ತಾಲೂಕಿನ ಅರ್ಜುನಹಳ್ಳಿ ಗ್ರಾಮ ಪಂಚಾಯಿತಿ ಗ್ರಾಮೀಣಾಭಿವೃದ್ಧಿ…

3 hours ago

ಊರ ಜಾತ್ರೆ ಒಂದು ನೆನಪು…

ನಂಜನಗೂಡಿನ ಜಾತ್ರೆ ಅಂದು ಹೇಗಿತ್ತೋ ಇಂದೂ ಹಾಗೆ ತನ್ನ ಆಚರಣೆಯ ಮುಗ್ಧತೆ ಉಳಿಸಿಕೊಂಡಿದೆ  ಡಾ.ಹೆಚ್.ಸಿ.ಮಹದೇವಪ್ಪ, ಸಚಿವರು ನಂಜನಗೂಡಿನಿಂದ ಕೆಲವೇ ಮೈಲಿಗಳ…

3 hours ago

ಯುದ್ಧ: ಕಟ್ಟಡ ನಿರ್ಮಾಣ ವಲಯಕ್ಕೆ ಬೆಲೆ ಏರಿಕೆಯ ಬಿಸಿ

ಚಿರಂಜೀವಿ ಸಿ.ಹುಲ್ಲಹಳ್ಳಿ ಮೈಸೂರು: ಮಧ್ಯಪ್ರಾಚ್ಯ ದೇಶದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ಜನಸಾಮಾನ್ಯರಿಗೆ ನಿತ್ಯ ಒಂದಲ್ಲಾ ಒಂದು ಬಿಸಿ ತಟ್ಟುತ್ತಿದೆ. ಕಟ್ಟಡ…

3 hours ago