ದೇಶ- ವಿದೇಶ

ಮಹಾರಾಷ್ಟ್ರ: ಮುಖ್ಯಮಂತ್ರಿಯಾಗಿ ದೇವೇಂದ್ರ ಪಡ್ನವೀಸ್‌ ನಾಳೆ ಪ್ರಮಾಣ ವಚನ ಸ್ವೀಕಾರ

ಮುಂಬೈ: ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಹಿರಿಯ ಬಿಜೆಪಿ ನಾಯಕ ದೇವೇಂದ್ರ ಪಡ್ನವೀಸ್‌ ಅವರು ನಾಳೆ(ಡಿ.5) ಅಧಿಕೃತವಾಗಿ ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರಿಸಿ ಅಧಿಕಾರ ನಿರ್ವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ಇಂದು(ಡಿ.4) ನಡೆದ ಬಿಜೆಪಿ ಕೋರ್‌ ಕಮಿಟಿ ಸಭೆಯಲ್ಲಿ ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್‌ ಹಾಗೂ ಗುಜರಾತ್‌ನ ಮಾಜಿ ಮುಖ್ಯಮಂತ್ರಿ ವಿಜಯ್‌ ರೂಪಾನಿ ಅವರು ದೇವೇಂದ್ರ ಪಡ್ನವೀಸ್‌ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಗುರುವಾರ(ಡಿ.5) ದೇವೇಂದ್ರ ಪಡ್ನವೀಸ್‌ ಅವರು ಮಹಾರಾಷ್ಟ್ರ ರಾಜ್ಯದ ಮುಖ್ಯಮಂತ್ರಿಯಾಗಿ 2ನೇ ಬಾರಿಗೆ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.

ಮಹಾರಾಷ್ಟ್ರದ ಶಾಸಕಾಂಗ ಪಕ್ಷದ ಸಭೆ ಇಂದು ನಡೆದಿದ್ದು, ಶಾಸಕಾಂಗ ಪಕ್ಷದ ನಾಯಕನನ್ನು ನೇಮಿಸಲು ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್‌ ಹಾಗು ಗುಜರಾತ್ನ ಮಾಜಿ ಸಿಎಂ ರೂಪಾನಿ ಅವರನ್ನು ಕೇಂದ್ರ ವೀಕ್ಷಕರನ್ನಾಗಿ ನೇಮಿಸಿತ್ತು. ಹೀಗಾಗಿ ಮಹಾರಾಷ್ಟ್ರದಲ್ಲಿ ಚುನಾವಣೆ ಫಲಿತಾಂಸ ಬಂದ 12 ದಿನಗಳ ನಂತರ ದೇವೇಂದ್ರ ಅವರನ್ನು ಸಿಎಂ ಆಗಿ ಆಯ್ಕೆ ಮಾಡಿದ್ದಾರೆ.

ಈ ಹಿನ್ನೆಲೆ ಇಂದು ಮಧ್ಯಾಹ್ನ 3.30 ಗಂಟೆ ವೇಳೆಗೆ ರಾಜ್ಯಪಾಲ ಸಿ.ಪಿ.ರಾಧಾಕೃಷ್ಣನ್‌ ಅವರನ್ನು ಭೇಟಿ ಮಾಡಿ ಮಹಾಯುತಿ ಮೈತ್ರಿಕೂಟವು ಸರ್ಖಾರ ರಚಿಸಲು ಹಕ್ಕು ಮಂಡಿಸಲಿದ್ದಾರೆ ಎಂದು ಬಿಜೆಪಿ ನಾಯಕ ಸುಧೀರ್‌ ಮುಂಗಂಟಿವಾರ್‌ ಹೇಳಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಆರ್‌ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ಕೆಎಸ್‌ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್

ಮೈಸೂರು: ಆರ್‌ಸಿಬಿ ಅಭಿಮಾನಿಗಳಿಗೆ ಕೆಎಸ್‌ಸಿಎ ಅಧ್ಯಕ್ಷ ವೆಂಕಟೇಶ್‌ ಪ್ರಸಾದ್‌ ಗುಡ್‌ನ್ಯೂಸ್‌ ನೀಡಿದ್ದು, ಈ ಬಾರಿಯ ಐಪಿಎಲ್‌ ಉದ್ಘಾಟನಾ ಪಂದ್ಯ ಬೆಂಗಳೂರಿನಲ್ಲಿ…

2 mins ago

ಮಗಳಿಗಾಗಿ ಕಿರುತೆರೆ ಪತ್ನಿಯನ್ನೇ ಕಿಡ್ನ್ಯಾಪ್‌ ಮಾಡಿದ ಸ್ಯಾಂಡಲ್‌ವುಡ್‌ ನಿರ್ಮಾಪಕ

ಬೆಂಗಳೂರು: ಮಗಳಿಗಾಗಿ ಪತ್ನಿ ಹಾಗೂ ನಟಿ ಚೈತ್ರಾರಾಮ್‌ ಅವರನ್ನು ನಿರ್ಮಾಪಕ ಹರ್ಷವರ್ಧನ್‌ ಕಿಡ್ನ್ಯಾಪ್‌ ಮಾಡಿದ ಘಟನೆ ನಡೆದಿದ್ದು, ಪ್ರಕರಣ ಸುಖಾಂತ್ಯವಾಗಿದೆ.…

15 mins ago

ಸಹಕಾರಿ ರಂಗಕ್ಕೆ ಅನುದಾನ ನೀಡಿಕೆಯಲ್ಲಿ ತಾರತಮ್ಯವಾದಲ್ಲಿ ಕ್ರಮ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಕುಣಿಗಲ್ ತಾಲ್ಲೂಕಿನ ಸಹಕಾರಿ ರಂಗಕ್ಕೆ ಅನುದಾನ ನೀಡಿಕೆಯಲ್ಲಿ ತಾರತಮ್ಯವಾಗಿದ್ದಲ್ಲಿ, ಮುಂದಿನ ವರ್ಷದಿಂದ ನಿವಾರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.…

23 mins ago

2023ರಂತೆ 2028ರಲ್ಲಿಯೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: 2023ರಂತೆ 2028ರಲ್ಲಿಯೂ ಜನಾರ್ಶೀವಾದದೊಂದಿಗೆ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದ್ದು, ಬಿಜೆಪಿಯವರು ಸದಾ ವಿರೋಧಪಕ್ಷದ ಸ್ಥಾನದಲ್ಲಿಯೇ ಇರಲಿದ್ದಾರೆ ಎಂದು ಮುಖ್ಯಮಂತ್ರಿ…

1 hour ago

ಹಾಸನ | ವಿದ್ಯುತ್‌ ಶಾಕ್‌ಗೆ ಕಂಬದಿಂದ ಬಿದ್ದ ಕಾರ್ಮಿಕರು: ಓರ್ವ ಸಾವು

ಹಾಸನ: ಕಂಬ ಏರಿ ವಿದ್ಯುತ್‌ ತಂತಿ ದುರಸ್ತಿ ಮಾಡುವಾಗ ವಿದ್ಯುತ್‌ ಪ್ರವಹಿಸಿ ಕಾರ್ಮಿಕನೊಬ್ಬ ಸಾವನ್ನಪ್ಪಿರುವ ಘಟನೆ ಹಾಸನದ ಕಾಟೀಹಳ್ಳಿಯ ಟೀಚರ್ಸ್‌…

2 hours ago

ನಟ ಶಿವರಾಜ್‌ ಕುಮಾರ್‌-ಉಪೇಂದ್ರ ಅಭಿನಯದ 45 ಚಿತ್ರದ ಟ್ರೇಲರ್‌ ರಿಲೀಸ್‌

ಬೆಂಗಳೂರು: ನಟ ಶಿವರಾಜ್‌ ಕುಮಾರ್‌-ಉಪೇಂದ್ರ ಅಭಿನಯದ ಬಹು ನಿರೀಕ್ಷಿತ 45 ಚಿತ್ರದ ಟ್ರೇಲರ್‌ ರಿಲೀಸ್‌ ಆಗಿದೆ. ಖ್ಯಾತ ಸಂಗೀತ ನಿರ್ದೇಶಕ…

2 hours ago