ದೇಶ- ವಿದೇಶ

ಮಹಾರಾಷ್ಟ್ರ: ಮುಖ್ಯಮಂತ್ರಿಯಾಗಿ ದೇವೇಂದ್ರ ಪಡ್ನವೀಸ್‌ ನಾಳೆ ಪ್ರಮಾಣ ವಚನ ಸ್ವೀಕಾರ

ಮುಂಬೈ: ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಹಿರಿಯ ಬಿಜೆಪಿ ನಾಯಕ ದೇವೇಂದ್ರ ಪಡ್ನವೀಸ್‌ ಅವರು ನಾಳೆ(ಡಿ.5) ಅಧಿಕೃತವಾಗಿ ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರಿಸಿ ಅಧಿಕಾರ ನಿರ್ವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ಇಂದು(ಡಿ.4) ನಡೆದ ಬಿಜೆಪಿ ಕೋರ್‌ ಕಮಿಟಿ ಸಭೆಯಲ್ಲಿ ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್‌ ಹಾಗೂ ಗುಜರಾತ್‌ನ ಮಾಜಿ ಮುಖ್ಯಮಂತ್ರಿ ವಿಜಯ್‌ ರೂಪಾನಿ ಅವರು ದೇವೇಂದ್ರ ಪಡ್ನವೀಸ್‌ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಗುರುವಾರ(ಡಿ.5) ದೇವೇಂದ್ರ ಪಡ್ನವೀಸ್‌ ಅವರು ಮಹಾರಾಷ್ಟ್ರ ರಾಜ್ಯದ ಮುಖ್ಯಮಂತ್ರಿಯಾಗಿ 2ನೇ ಬಾರಿಗೆ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.

ಮಹಾರಾಷ್ಟ್ರದ ಶಾಸಕಾಂಗ ಪಕ್ಷದ ಸಭೆ ಇಂದು ನಡೆದಿದ್ದು, ಶಾಸಕಾಂಗ ಪಕ್ಷದ ನಾಯಕನನ್ನು ನೇಮಿಸಲು ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್‌ ಹಾಗು ಗುಜರಾತ್ನ ಮಾಜಿ ಸಿಎಂ ರೂಪಾನಿ ಅವರನ್ನು ಕೇಂದ್ರ ವೀಕ್ಷಕರನ್ನಾಗಿ ನೇಮಿಸಿತ್ತು. ಹೀಗಾಗಿ ಮಹಾರಾಷ್ಟ್ರದಲ್ಲಿ ಚುನಾವಣೆ ಫಲಿತಾಂಸ ಬಂದ 12 ದಿನಗಳ ನಂತರ ದೇವೇಂದ್ರ ಅವರನ್ನು ಸಿಎಂ ಆಗಿ ಆಯ್ಕೆ ಮಾಡಿದ್ದಾರೆ.

ಈ ಹಿನ್ನೆಲೆ ಇಂದು ಮಧ್ಯಾಹ್ನ 3.30 ಗಂಟೆ ವೇಳೆಗೆ ರಾಜ್ಯಪಾಲ ಸಿ.ಪಿ.ರಾಧಾಕೃಷ್ಣನ್‌ ಅವರನ್ನು ಭೇಟಿ ಮಾಡಿ ಮಹಾಯುತಿ ಮೈತ್ರಿಕೂಟವು ಸರ್ಖಾರ ರಚಿಸಲು ಹಕ್ಕು ಮಂಡಿಸಲಿದ್ದಾರೆ ಎಂದು ಬಿಜೆಪಿ ನಾಯಕ ಸುಧೀರ್‌ ಮುಂಗಂಟಿವಾರ್‌ ಹೇಳಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

13 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

14 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

15 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

16 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

20 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

20 hours ago