ಮುಂಬೈ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಫಲಿತಾಂಶ ಇಂದು ಪ್ರಕಟಗೊಂಡಿದ್ದು, ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ಜಯಭೇರಿ ಬಾರಿಸಿದೆ. ಈ ಮೂಲಕ ಕಾಂಗ್ರೆಸ್ ನೇತೃತ್ವದ ಮಹಾವಿಕಾಸ್ ಆಘಾಡಿ ಮೈತ್ರಿಕೂಟಕ್ಕೆ ಮರ್ಮಾಘಾತ ತಂದುಕೊಟ್ಟಿದೆ.
ಹೀನಾಯ ಸೋಲು ಕಂಡಿರುವ ಮಹಾವಿಕಾಸ್ ಆಘಾಡಿಗೆ ಚುನಾವಣೆ ಫಲಿತಾಂಶದಿಂದ ತೀವ್ರ ಬೇಸರವಾಗಿದೆ. ಮಹಾ ವಿಕಾಸ್ ಆಘಾಡಿ ಯಾವುದೇ ಪಕ್ಷವೂ ಅಧಿಕೃತ ವಿಪಕ್ಷ ಸ್ಥಾನಮಾನ ಗಳಿಸುವಷ್ಟು ಸ್ಥಾನಗಳನ್ನು ಪಡೆದಿಲ್ಲ.
ಮಹಾರಾಷ್ಟ್ರ ವಿಧಾನಸಭೆ ಒಂದು ಪಕ್ಷಕ್ಕೆ ಅಧಿಕೃತ ವಿಪಕ್ಷ ಸ್ಥಾನ ಗಳಿಸಲು ಕನಿಷ್ಠ 29 ಸ್ಥಾನಗಳನ್ನು ಗೆದ್ದಿರಬೇಕು. ಇಂದಿನ ಪರಿಸ್ಥಿತಿಯಲ್ಲಿ ಉದ್ಧವ್ ಠಾಕ್ರೆ ಬಣ 21 ಸ್ಥಾನ, ಕಾಂಗ್ರೆಸ್ 21 ಸ್ಥಾನ ಮತ್ತು ಶರದ್ ಪವಾರ್ ಎನ್ಸಿಪಿ ಪಕ್ಷ 9 ಸ್ಥಾನಗಳನ್ನು ಮಾತ್ರ ಪಡೆದುಕೊಂಡಿದೆ. ಹೀಗಾಗಿ ಮಹಾ ವಿಕಾಸ್ ಆಘಾಡಿಯ ಯಾವುದೇ ಪಕ್ಷವೂ ಅಧಿಕೃತ ವಿಪಕ್ಷ ಸ್ಥಾನಕ್ಕೆ ಅರ್ಹತೆ ಪಡೆಯದೇ ಇರುವುದು ಮೈತ್ರಿಕೂಟಕ್ಕೆ ನುಂಗಲಾರದ ತುತ್ತಾಗಿದೆ.
ಇಷ್ಟು ಮಾತ್ರವಲ್ಲದೇ ಭಾರೀ ಪ್ರಮಾಣದಲ್ಲಿ ಸ್ಥಾನಗಳ ಕುಸಿತದಿಂದಾಗಿ ಮಹಾ ವಿಕಾಸ್ ಆಘಾಡಿ ಮೈತ್ರಿಕೂಟಕ್ಕೆ ಮುಂಬರುವ ರಾಜ್ಯಸಭೆ ಚುನಾವಣೆಯೂ ಕಬ್ಬಿಣದ ಕಡಲೆಯಾಗುವ ಎಲ್ಲಾ ಲಕ್ಷಣಗಳಿವೆ ಎನ್ನಲಾಗಿದೆ. ಪಕ್ಷಗಳು ತಮ್ಮ ತಮ್ಮ ರಾಜ್ಯಸಭೆ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳುವ ಸಾಮರ್ಥ್ಯವನ್ನು ಕೂಡ ಕಳೆದುಕೊಂಡಿವೆ ಎಂಬ ಮಾಹಿತಿ ಲಭ್ಯವಾಗಿದೆ.
ಮಹೇಂದ್ರ ಹಸಗೂಲಿ, ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಪಟ್ಟಣದ ಜನತಾ ಕಾಲೋನಿಯ ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿ ವೇಶ್ಯಾವಾಟಿಕೆ…
ನವದೆಹಲಿ: ಮದರ್ ಆಫ್ ಆಲ್ ಡೀಲ್ಸ್ ಎಂದೇ ಕರೆಯಲ್ಪಡುವ ಭಾರತ-ಯುರೋಪ್ ಒಕ್ಕೂಟವು ಮುಕಕ್ತ ವ್ಯಾಪಾರ ಒಪ್ಪಂದಕ್ಕೆ ಇಂದು ಅಧಿಕೃತವಾಗಿ ಸಹಿ…
ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ಗೌಡನನ್ನು ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ…
ಪಿರಿಯಾಪಟ್ಟಣ: ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ಪಿರಿಯಾಪಟ್ಟಣ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ…
ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…