ಮುಂಬೈ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಫಲಿತಾಂಶ ಇಂದು ಪ್ರಕಟಗೊಂಡಿದ್ದು, ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ಜಯಭೇರಿ ಬಾರಿಸಿದೆ. ಈ ಮೂಲಕ ಕಾಂಗ್ರೆಸ್ ನೇತೃತ್ವದ ಮಹಾವಿಕಾಸ್ ಆಘಾಡಿ ಮೈತ್ರಿಕೂಟಕ್ಕೆ ಮರ್ಮಾಘಾತ ತಂದುಕೊಟ್ಟಿದೆ.
ಹೀನಾಯ ಸೋಲು ಕಂಡಿರುವ ಮಹಾವಿಕಾಸ್ ಆಘಾಡಿಗೆ ಚುನಾವಣೆ ಫಲಿತಾಂಶದಿಂದ ತೀವ್ರ ಬೇಸರವಾಗಿದೆ. ಮಹಾ ವಿಕಾಸ್ ಆಘಾಡಿ ಯಾವುದೇ ಪಕ್ಷವೂ ಅಧಿಕೃತ ವಿಪಕ್ಷ ಸ್ಥಾನಮಾನ ಗಳಿಸುವಷ್ಟು ಸ್ಥಾನಗಳನ್ನು ಪಡೆದಿಲ್ಲ.
ಮಹಾರಾಷ್ಟ್ರ ವಿಧಾನಸಭೆ ಒಂದು ಪಕ್ಷಕ್ಕೆ ಅಧಿಕೃತ ವಿಪಕ್ಷ ಸ್ಥಾನ ಗಳಿಸಲು ಕನಿಷ್ಠ 29 ಸ್ಥಾನಗಳನ್ನು ಗೆದ್ದಿರಬೇಕು. ಇಂದಿನ ಪರಿಸ್ಥಿತಿಯಲ್ಲಿ ಉದ್ಧವ್ ಠಾಕ್ರೆ ಬಣ 21 ಸ್ಥಾನ, ಕಾಂಗ್ರೆಸ್ 21 ಸ್ಥಾನ ಮತ್ತು ಶರದ್ ಪವಾರ್ ಎನ್ಸಿಪಿ ಪಕ್ಷ 9 ಸ್ಥಾನಗಳನ್ನು ಮಾತ್ರ ಪಡೆದುಕೊಂಡಿದೆ. ಹೀಗಾಗಿ ಮಹಾ ವಿಕಾಸ್ ಆಘಾಡಿಯ ಯಾವುದೇ ಪಕ್ಷವೂ ಅಧಿಕೃತ ವಿಪಕ್ಷ ಸ್ಥಾನಕ್ಕೆ ಅರ್ಹತೆ ಪಡೆಯದೇ ಇರುವುದು ಮೈತ್ರಿಕೂಟಕ್ಕೆ ನುಂಗಲಾರದ ತುತ್ತಾಗಿದೆ.
ಇಷ್ಟು ಮಾತ್ರವಲ್ಲದೇ ಭಾರೀ ಪ್ರಮಾಣದಲ್ಲಿ ಸ್ಥಾನಗಳ ಕುಸಿತದಿಂದಾಗಿ ಮಹಾ ವಿಕಾಸ್ ಆಘಾಡಿ ಮೈತ್ರಿಕೂಟಕ್ಕೆ ಮುಂಬರುವ ರಾಜ್ಯಸಭೆ ಚುನಾವಣೆಯೂ ಕಬ್ಬಿಣದ ಕಡಲೆಯಾಗುವ ಎಲ್ಲಾ ಲಕ್ಷಣಗಳಿವೆ ಎನ್ನಲಾಗಿದೆ. ಪಕ್ಷಗಳು ತಮ್ಮ ತಮ್ಮ ರಾಜ್ಯಸಭೆ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳುವ ಸಾಮರ್ಥ್ಯವನ್ನು ಕೂಡ ಕಳೆದುಕೊಂಡಿವೆ ಎಂಬ ಮಾಹಿತಿ ಲಭ್ಯವಾಗಿದೆ.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…