ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಫಲಿತಾಂಶ: ಮಹಾವಿಕಾಸ್‌ ಆಘಾಡಿಗೆ ಮರ್ಮಾಘಾತ

ಮುಂಬೈ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಫಲಿತಾಂಶ ಇಂದು ಪ್ರಕಟಗೊಂಡಿದ್ದು, ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ಜಯಭೇರಿ ಬಾರಿಸಿದೆ. ಈ ಮೂಲಕ ಕಾಂಗ್ರೆಸ್‌ ನೇತೃತ್ವದ ಮಹಾವಿಕಾಸ್‌ ಆಘಾಡಿ ಮೈತ್ರಿಕೂಟಕ್ಕೆ ಮರ್ಮಾಘಾತ ತಂದುಕೊಟ್ಟಿದೆ.

ಹೀನಾಯ ಸೋಲು ಕಂಡಿರುವ ಮಹಾವಿಕಾಸ್‌ ಆಘಾಡಿಗೆ ಚುನಾವಣೆ ಫಲಿತಾಂಶದಿಂದ ತೀವ್ರ ಬೇಸರವಾಗಿದೆ. ಮಹಾ ವಿಕಾಸ್‌ ಆಘಾಡಿ ಯಾವುದೇ ಪಕ್ಷವೂ ಅಧಿಕೃತ ವಿಪಕ್ಷ ಸ್ಥಾನಮಾನ ಗಳಿಸುವಷ್ಟು ಸ್ಥಾನಗಳನ್ನು ಪಡೆದಿಲ್ಲ.

ಮಹಾರಾಷ್ಟ್ರ ವಿಧಾನಸಭೆ ಒಂದು ಪಕ್ಷಕ್ಕೆ ಅಧಿಕೃತ ವಿಪಕ್ಷ ಸ್ಥಾನ ಗಳಿಸಲು ಕನಿಷ್ಠ 29 ಸ್ಥಾನಗಳನ್ನು ಗೆದ್ದಿರಬೇಕು. ಇಂದಿನ ಪರಿಸ್ಥಿತಿಯಲ್ಲಿ ಉದ್ಧವ್‌ ಠಾಕ್ರೆ ಬಣ 21 ಸ್ಥಾನ, ಕಾಂಗ್ರೆಸ್‌ 21 ಸ್ಥಾನ ಮತ್ತು ಶರದ್‌ ಪವಾರ್‌ ಎನ್‌ಸಿಪಿ ಪಕ್ಷ 9 ಸ್ಥಾನಗಳನ್ನು ಮಾತ್ರ ಪಡೆದುಕೊಂಡಿದೆ. ಹೀಗಾಗಿ ಮಹಾ ವಿಕಾಸ್‌ ಆಘಾಡಿಯ ಯಾವುದೇ ಪಕ್ಷವೂ ಅಧಿಕೃತ ವಿಪಕ್ಷ ಸ್ಥಾನಕ್ಕೆ ಅರ್ಹತೆ ಪಡೆಯದೇ ಇರುವುದು ಮೈತ್ರಿಕೂಟಕ್ಕೆ ನುಂಗಲಾರದ ತುತ್ತಾಗಿದೆ.

ಇಷ್ಟು ಮಾತ್ರವಲ್ಲದೇ ಭಾರೀ ಪ್ರಮಾಣದಲ್ಲಿ ಸ್ಥಾನಗಳ ಕುಸಿತದಿಂದಾಗಿ ಮಹಾ ವಿಕಾಸ್‌ ಆಘಾಡಿ ಮೈತ್ರಿಕೂಟಕ್ಕೆ ಮುಂಬರುವ ರಾಜ್ಯಸಭೆ ಚುನಾವಣೆಯೂ ಕಬ್ಬಿಣದ ಕಡಲೆಯಾಗುವ ಎಲ್ಲಾ ಲಕ್ಷಣಗಳಿವೆ ಎನ್ನಲಾಗಿದೆ. ಪಕ್ಷಗಳು ತಮ್ಮ ತಮ್ಮ ರಾಜ್ಯಸಭೆ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳುವ ಸಾಮರ್ಥ್ಯವನ್ನು ಕೂಡ ಕಳೆದುಕೊಂಡಿವೆ ಎಂಬ ಮಾಹಿತಿ ಲಭ್ಯವಾಗಿದೆ.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ 07 ಶುಕ್ರವಾರ  

21 mins ago

ಟಿವಿಕೆ ಗೆಲುವು : ಹನೂರಲ್ಲಿ ಸಂಭ್ರಮಾಚರಣೆ

ಹನೂರು : ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿರುವುದಕ್ಕೆ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ…

11 hours ago

ಪ.ಬಂಗಾಳ | ವಿಟೋ ಅಧಿಕಾರ ಬಳಸಿ ಮಂತ್ರಿಮಂಡಳ ವಿಸರ್ಜಿಸಿದ ರಾಜ್ಯಪಾಲ ; ದೀದಿಗೆ ಹಿನ್ನೆಡೆ

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಬಹು ಮತ ಗಳಿಸದೇ ಸೋಲನ್ನು ಅನುಭವಿಸಿದರೂ ಮುಖ್ಯಮಂತ್ರಿ…

12 hours ago

ಹನೂರು | ಕಾಡು ಹಂದಿ ದಾಳಿ ; ರೈತನಿಗೆ ಗಂಭೀರ ಗಾಯ

ಹನೂರು : ತಾಲ್ಲೂಕಿನ ದಿನ್ನಳ್ಳಿ ರಸ್ತೆಯ ಸಮೀಪದ ಜಮೀನೊಂದರಲ್ಲಿ ಕಾಡು ಹಂದಿ ದಾಳಿ ನಡೆಸಿ ರೈತನಿಗೆ ಗಂಭೀರ ಗಾಯಗೊಳಿಸಿರುವ ಘಟನೆ…

12 hours ago

ಡಿಎಂಕೆ-ಎಐಎಡಿಎಂಕೆ ಮೈತ್ರಿ ವದಂತಿ ; ಸ್ಟಾಲಿನ್‌ ಹೇಳಿದ್ದೇನು?

ಚೆನ್ನೆ : ತಮಿಳುನಾಡಿನಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಸರ್ಕಾರ ರಚನೆಯ ಕಸರತ್ತು ಜೋರಾಗಿದೆ. 108 ಸ್ಥಾನಗಳೊಂದಿಗೆ ಅತಿ ದೊಡ್ಡ…

12 hours ago

ಮೇಲು-ಕೀಳು ಕಳೆಯಲಿ ; ಸರ್ವರೂ ಒಂದೇ ಎಂಬ ಮನೋಭಾವ ಮೂಡಲಿ : ಮೋಹನ್‌ ಭಾಗವತ್‌

ಮೈಸೂರು : ಮೇಲು-ಕೀಳು ಎಂಬ ಮನೋಭಾವ ಕಳೆದು ಸರ್ವರೂ ಒಂದೇ ಎಂಬ ಏಕ ಭಾವ ಭಾರತೀಯರಲ್ಲಿ ಮೂಡಬೇಕು ಎಂದು ರಾಷ್ಟ್ರೀಯ…

12 hours ago