ಮುಂಬೈ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಫಲಿತಾಂಶ ಇಂದು ಪ್ರಕಟಗೊಂಡಿದ್ದು, ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ಜಯಭೇರಿ ಬಾರಿಸಿದೆ. ಈ ಮೂಲಕ ಕಾಂಗ್ರೆಸ್ ನೇತೃತ್ವದ ಮಹಾವಿಕಾಸ್ ಆಘಾಡಿ ಮೈತ್ರಿಕೂಟಕ್ಕೆ ಮರ್ಮಾಘಾತ ತಂದುಕೊಟ್ಟಿದೆ.
ಹೀನಾಯ ಸೋಲು ಕಂಡಿರುವ ಮಹಾವಿಕಾಸ್ ಆಘಾಡಿಗೆ ಚುನಾವಣೆ ಫಲಿತಾಂಶದಿಂದ ತೀವ್ರ ಬೇಸರವಾಗಿದೆ. ಮಹಾ ವಿಕಾಸ್ ಆಘಾಡಿ ಯಾವುದೇ ಪಕ್ಷವೂ ಅಧಿಕೃತ ವಿಪಕ್ಷ ಸ್ಥಾನಮಾನ ಗಳಿಸುವಷ್ಟು ಸ್ಥಾನಗಳನ್ನು ಪಡೆದಿಲ್ಲ.
ಮಹಾರಾಷ್ಟ್ರ ವಿಧಾನಸಭೆ ಒಂದು ಪಕ್ಷಕ್ಕೆ ಅಧಿಕೃತ ವಿಪಕ್ಷ ಸ್ಥಾನ ಗಳಿಸಲು ಕನಿಷ್ಠ 29 ಸ್ಥಾನಗಳನ್ನು ಗೆದ್ದಿರಬೇಕು. ಇಂದಿನ ಪರಿಸ್ಥಿತಿಯಲ್ಲಿ ಉದ್ಧವ್ ಠಾಕ್ರೆ ಬಣ 21 ಸ್ಥಾನ, ಕಾಂಗ್ರೆಸ್ 21 ಸ್ಥಾನ ಮತ್ತು ಶರದ್ ಪವಾರ್ ಎನ್ಸಿಪಿ ಪಕ್ಷ 9 ಸ್ಥಾನಗಳನ್ನು ಮಾತ್ರ ಪಡೆದುಕೊಂಡಿದೆ. ಹೀಗಾಗಿ ಮಹಾ ವಿಕಾಸ್ ಆಘಾಡಿಯ ಯಾವುದೇ ಪಕ್ಷವೂ ಅಧಿಕೃತ ವಿಪಕ್ಷ ಸ್ಥಾನಕ್ಕೆ ಅರ್ಹತೆ ಪಡೆಯದೇ ಇರುವುದು ಮೈತ್ರಿಕೂಟಕ್ಕೆ ನುಂಗಲಾರದ ತುತ್ತಾಗಿದೆ.
ಇಷ್ಟು ಮಾತ್ರವಲ್ಲದೇ ಭಾರೀ ಪ್ರಮಾಣದಲ್ಲಿ ಸ್ಥಾನಗಳ ಕುಸಿತದಿಂದಾಗಿ ಮಹಾ ವಿಕಾಸ್ ಆಘಾಡಿ ಮೈತ್ರಿಕೂಟಕ್ಕೆ ಮುಂಬರುವ ರಾಜ್ಯಸಭೆ ಚುನಾವಣೆಯೂ ಕಬ್ಬಿಣದ ಕಡಲೆಯಾಗುವ ಎಲ್ಲಾ ಲಕ್ಷಣಗಳಿವೆ ಎನ್ನಲಾಗಿದೆ. ಪಕ್ಷಗಳು ತಮ್ಮ ತಮ್ಮ ರಾಜ್ಯಸಭೆ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳುವ ಸಾಮರ್ಥ್ಯವನ್ನು ಕೂಡ ಕಳೆದುಕೊಂಡಿವೆ ಎಂಬ ಮಾಹಿತಿ ಲಭ್ಯವಾಗಿದೆ.
ಲಖನೌ: ಉತ್ತರ ಪ್ರದೇಶದ ಅಲಿಗಂಜ್ನಲ್ಲಿರುವ ಮೂರು ಅಂತಸ್ತಿನ ವಾಣಿಜ್ಯ ಕಟ್ಟಡವೊಂದರಲ್ಲಿ ಭಾರೀ ಅಗ್ನಿ ದುರಂತ ಸಂಭವಿಸಿದ್ದು, ಕನಿಷ್ಠ 15 ವಿದ್ಯಾರ್ಥಿಗಳು…
ಕೀನ್ಯಾ: ಕಾಂಗೋದಲ್ಲಿ ಎಬೋಲಾ ವೈರಸ್ನ ಅಟ್ಟಹಾಸ ಮುಂದುವರಿದಿದ್ದು, ದೇಶದಲ್ಲಿ ದೃಢಪಟ್ಟ ಒಟ್ಟು ಪ್ರಕರಣಗಳ ಸಂಖ್ಯೆ 1003ಕ್ಕೆ ಏರಿಕೆಯಾಗಿದೆ ಎಂದು ಸರ್ಕಾರ…
ಹಲಗೂರು: ಇಲ್ಲಿಗೆ ಸಮೀಪದ ಗಾಣಾಳು ಜಲಪಾತದಲ್ಲಿ ಈಜಲು ಇಳಿದಿದ್ದ ಯುವಕನೊಬ್ಬ ನೀರಿನಲ್ಲಿ ಸಿಲುಕಿ ಮೃತಪಟ್ಟಿರುವ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ.…
ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ಬೆಂಗಳೂರು: ದಿನದಿಂದ ದಿನಕ್ಕೆ ಸಾರಿಗೆ ನಿಗಮಗಳು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಕಾರಣ ಶೀಘ್ರದಲ್ಲೇ ರಾಜ್ಯ ಸರ್ಕಾರ ಬಸ್ ಪ್ರಯಾಣ…
ಲಂಡನ್: ನಿರೀಕ್ಷೆಯಂತೆ ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆಡಳಿತಾರೂಢ ಲೇಬರ್ ಪಕ್ಷದೊಳಗೆ…