ನವದೆಹಲಿ: ಮಹಾರಾಷ್ಟ್ರ ಚುನಾವಣಾ ಫಲಿತಾಂಶ ಹೊರ ಬಿದ್ದಿದ್ದು, ಮಹಾಯುತಿಯು ಅಭೂತಪೂರ್ವ ವಿಜಯವನ್ನು ದಾಖಲಿಸಿದೆ.
ಈ ಹಿನ್ನೆಲೆಯಲ್ಲಿ ದೆಹಲಿಯ ಬಿಜೆಪಿ ಕಚೇರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು, ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.
ಮಹಾರಾಷ್ಟ್ರ ಚುನಾವಣೆಯ ಗೆಲುವನ್ನು ಸತ್ಯ ಮತ್ತು ಸಾಮಾಜಿಕ ನ್ಯಾಯದ ಗೆಲುವು ಎಂದು ಬಣ್ಣಿಸಿ, ಗೆಲುವಿಗಾಗಿ ಶ್ರಮಿಸಿದ ಮಹಾಯುತಿ ನಾಯಕರನ್ನು ಶ್ಲಾಘಿಸಿದರು.
ಐತಿಹಾಸಿಕ ಗೆಲುವಿನಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಯು ಕಳೆದ 50 ವರ್ಷಗಳಲ್ಲಿ ಮಹಾರಾಷ್ಟ್ರದಲ್ಲಿ ತನ್ನ ಅತಿದೊಡ್ಡ ಗೆಲುವನ್ನು ಪಡೆದುಕೊಂಡಿದೆ. ಇದು ಬಿಜೆಪಿಗೆ ಸತತ ಮೂರನೇ ಬಾರಿಗೆ ದೊಡ್ಡ ಜಯವಾಗಿದೆ. ರಾಜ್ಯದಲ್ಲಿ ಪಕ್ಷವು ಅಭಿವೃದ್ಧಿ ಮತ್ತು ಉತ್ತಮ ಆಡಳಿತದ ಪಕ್ಷದ ದೃಷ್ಟಿಕೋನಕ್ಕೆ ಹೆಚ್ಚುತ್ತಿರುವ ಬೆಂಬಲಕ್ಕೆ ಸಾಕ್ಷಿಯಾಗಿದೆ. ಮಹಾರಾಷ್ಟ್ರವು ಎನ್ಡಿಎಗೆ ಸತತ ಮೂರನೇ ಅವಧಿಯನ್ನು ನೀಡುವ ಆರನೇ ರಾಜ್ಯವಾಗಿವೆ. ಇದು ದೇಶದಲ್ಲಿ ಮೈತ್ರಿಯ ಪ್ರಾಬಲ್ಯವನ್ನು ಮತ್ತಷ್ಟು ಗಟ್ಟಿಗೊಳಿಸಿದೆ ಎಂದರು.
ಮಹಾರಾಷ್ಟ್ರದ ಜನರು ಮಹಾ ವಿಕಾಸ್ ಆಘಾಡಿಯನ್ನು ಸೋಲಿಸುವ ಮೂಲಕ ನಕಾರಾತ್ಮಕ ರಾಜಕೀಯ ಹಾಗೂ ಪರಿವಾರ ವಾದವನ್ನು ಸೋಲಿಸಿದ್ದಾರೆ. ಅದರೊಂದಿಗೆ ಇಂದು ಮಹಾರಾಷ್ಟ್ರವು ಅಭಿವೃದ್ಧಿ ಹೊಂದಿದ ಭಾರತದ ಸಂಕಲ್ಪವನ್ನು ಬಲಪಡಿಸಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…