ಮುಂಬೈ: ಮಹಾರಾಷ್ಟ್ರ ಚುನಾವಣಾ ಫಲಿತಾಂಶದ ಬಳಿಕ ಸಿಎಂ ಆಯ್ಕೆ ಕಗ್ಗಂಟು ಶುರುವಾಗಿದೆ.
288 ಸದಸ್ಯ ಬಲದ ಮಹಾರಾಷ್ಟ್ರದಲ್ಲಿ ಮಹಾಯುತಿ ಮೈತ್ರಿಕೂಟ 234 ಸ್ಥಾನ ಗಳಿಸಿ, ಭರ್ಜರಿ ಗೆಲುವು ಸಾಧಿಸಿದೆ.
ಬಿಜೆಪಿ ಪ್ರಚಂಡ ಗೆಲುವಿನಿಂದ ಏಕನಾಥ್ ಶಿಂಧೆ ಸಿಎಂ ಪಟ್ಟದ ಆಸೆಗೆ ತಣ್ಣೀರೆರಚಿದಂತಾಗಿದೆ. ಬೇರೆ ಪಕ್ಷದವರು ಸಿಎಂ ಆಗುವ ಸಾಧ್ಯತೆ ಕ್ಷೀಣಿಸಿದೆ.
ಸಿಂಗಲ್ ಪಕ್ಷವಾಗಿ ಬಹುಮತಕ್ಕೆ ಬಿಜೆಪಿಗೆ ಕೇವಲ 12 ಸ್ಥಾನಗಳ ಕೊರತೆಯಿದ್ದು, ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಮುಖ್ಯಮಂತ್ರಿ ರೇಸ್ನಲ್ಲಿ ಮೊದಲಿಗರಾಗಿದ್ದಾರೆ. ಅವರೇ ಬಹುತೇಕ ಮಹಾರಾಷ್ಟ್ರ ಸಿಎಂ ಆಗುವ ಸಾಧ್ಯತೆ ದಟ್ಟವಾಗಿದೆ.
ಇನ್ನು ಶಿವಸೇನೆಯ ಏಕನಾಥ್ ಶಿಂಧೆ ಅವರು ಕೂಡ ಮತ್ತೆ ಸಿಎಂ ಆಗುವ ಆಸೆಯನ್ನು ಬಿಚ್ಚಿಟ್ಟಿದ್ದು, ಹೆಚ್ಚು ಸ್ಥಾನ ಪಡೆದ ಪಕ್ಷದವರೇ ಸಿಎಂ ಆಗಬೇಕು ಎಂದೇನಿಲ್ಲ ಎಂದು ಹೇಳಿದ್ದಾರೆ.
ಬಹುತೇಕ ಇಂದೇ ಸಿಎಂ ಆಯ್ಕೆಯ ಬಗ್ಗೆ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದ್ದು, ದೇವೇಂದ್ರ ಫಡ್ನವೀಸ್ ಹೆಸರೇ ಅಂತಿಮವಾಗುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿವೆ.
ತುಮಕೂರು: 2023ರಲ್ಲಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ನೇತೃತ್ವದ ಸರ್ಕಾರ ಮೂರು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿ, 4ನೇ ವರ್ಷಕ್ಕೆ ಪಾದಾರ್ಪಣೆ…
ನವದೆಹಲಿ: ಬೀದಿ ನಾಯಿಗಳ ನಿಯಂತ್ರಣಕ್ಕೆ ಅವುಗಳನ್ನು ಆಶ್ರಯ ತಾಣಗಳಿಗೆ ಸ್ಥಳಾಂತರಿಸಲು ಆದೇಶಿಸಿದ್ದ ಸುಪ್ರೀಂಕೋರ್ಟ್ ತನ್ನ ಆದೇಶವನ್ನು ಹಿಂಪಡೆಯುವುದಿಲ್ಲ ಎಂದು ಹೇಳಿದೆ.…
ಕೊಡಗು: ಜಿಲ್ಲೆಯ ಕುಶಾಲನಗರದ ದುಬಾರೆ ಆನೆ ಶಿಬಿರದಲ್ಲಿ ಸ್ನಾನ ಮಾಡುವ ವೇಳೆ ಕಂಜನ್ ಆನೆ ದಾಳಿಯಿಂದ ತೀವ್ರವಾಗಿ ಗಾಯಗೊಂಡಿದ್ದ ಮಾರ್ತಾಂಡ…
ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದ ಸಾರಿಗೆ ಸಂಘಟನೆಗಳು ಮೇ.20ರಂದು ಕರೆ ನೀಡಿದ್ದ ಮುಷ್ಕರಕ್ಕೆ ಕರ್ನಾಟಕ ಹೈಕೋರ್ಟ್ ಅಂಕುಶ ಹಾಕಿದೆ.…
ಬೆಂಗಳೂರು: ಆನ್ಲೈನ್ ಮೂಲಕ ಔಷಧಿಗಳ ಖರೀದಿ ಮಾರಾಟ ನಿಲ್ಲಿಸುವಂತೆ ಆಗ್ರಹಿಸಿ ನಾಳೆ ರಾಜ್ಯದಾದ್ಯಂತ ಮೆಡಿಕಲ್ ಶಾಪ್ಗಳು ಬಂದ್ ಆಗಲಿವೆ. ಅಖಿಲ…
ನೀಟು.... ಘಾಟು ! ಆಗ, ಎಷ್ಟೊಂದು ಶಿಸ್ತು, ಕ್ರಮವಾಗಿ ನಡೆಯುತ್ತಿತ್ತು? ಪರೀಕ್ಷೆ “ ನೀಟ್ “! ಈಗ, ಇದಕ್ಕೂ ಅಂಟಿಬಿಟ್ಟಿತಲ್ಲ…