ಮುಂಬೈ: ಲೋಕಸಭಾ ಚುನಾವಣೆಯಲ್ಲಿ ಮಹಾರಾಷ್ಟ್ರದಲ್ಲಿ ಭಾರೀ ಹಿನ್ನಡೆ ಕಂಡಿದ್ದ ಎನ್ಡಿಎ ಮೈತ್ರಿಕೂಟ ಸರ್ಕಾರ ಈ ಬಾರಿಯ ರಾಜ್ಯ ಬಜೆಟ್ನಲ್ಲಿ ಜನಪ್ರಿಯ ಸ್ಕೀಮ್ಗಳಿಗೆ ಶರಣಾಗಿದೆ.
ಕರ್ನಾಟಕದ ಗೃಹಲಕ್ಷ್ಮೀ ಯೋಜನೆ ಮಾದರಿಯಲ್ಲಿ ಮಹಾರಾಷ್ಟ್ರದಲ್ಲೂ ಮಹಿಳೆಯರಿಗೆ ಸರ್ಕಾರ ಮಾಸಿಕ ಸಹಾಯಧನ ಒದಗಿಸಲು ಘೋಷಿಸಿದೆ. 21 ವರ್ಷದಿಂದ 60 ವರ್ಷದವರೆಗಿನ ವಯಸ್ಸಿನ ಮಹಿಳೆಯರಿಗೆ ಮಾಸಿಕವಾಗಿ 1500 ರೂ ನೀಡುವುದಾಗಿ ಡಿಸಿಎಂ ಅಜಿತ್ ಪವಾರ್ ತಮ್ಮ ಬಜೆಟ್ನಲ್ಲಿ ತಿಳಿಸಿದ್ದಾರೆ.
ಇದೇ ಅಕ್ಟೋಬರ್ ತಿಂಗಳಿನಲ್ಲಿ ವಿಧಾನಸಭಾ ಚುನಾವಣೆಯಿದ್ದು, ಜನಪ್ರಿಯತೆ ಗಿಟ್ಟಿಸಲು ಸರ್ಕಾರ ಇನ್ನಿಲ್ಲದ ಕಸರತ್ತು ನಡೆಸುತ್ತಿದೆ. ಈ ಬಾರಿಯ ಬಜೆಟ್ನಲ್ಲಿ ಸಹಜವಾಗಿಯೇ ಬಹಳಷ್ಟು ಜನಪ್ರಿಯವೆನಿಸುವ ಸ್ಕೀಮ್ಗಳನ್ನು ಘೋಷಿಸಲಾಗಿದೆ.
ಸಿಎಂ ಅನ್ನಪೂರ್ಣ ಯೋಜನೆಯಡಿಯಲ್ಲಿ ಐದು ಮಂದಿ ಇರುವ ಅರ್ಹ ಕುಟುಂಬವೊಂದಕ್ಕೆ ವರ್ಷಕ್ಕೆ ಮೂರು ಅಡುಗೆ ಅನಿಲದ ಸಿಲಿಂಡರ್ಗಳನ್ನು ಉಚಿತವಾಗಿ ನೀಡಲಾಗುತ್ತದೆ. ಮಹಾರಾಷ್ಟ್ರದ ಹತ್ತಿ ಮತ್ತು ಸೋಯಾಬೀನ್ ಬೆಳೆಗಳಿಗೆ ಪ್ರತಿ ಹೆಕ್ಟೇರ್ಗೆ 5 ಸಾವಿರ ಬೋನಸ್ ಹಣವನ್ನು ಕೊಡಲಾಗುತ್ತದೆ. ಹಾಲು ಉತ್ಪಾದಕ ರೈತರಿಗೆ ಜುಲೈ.1ರ ಬಳಿಕ ಪ್ರತಿ ಲೀಟರ್ ಹಾಲಿಗೆ 5ರೂ ಹೆಚ್ಚುವರಿ ಬೋನಸ್ ಕೊಡಲಾಗುತ್ತದೆ. ಪ್ರಾಣಿಗಳ ದಾಳಿಯಿಂದ ಮೃತ ಪಡುವ ವ್ಯಕ್ತಿಗಳ ಸಂಬಂಧಿಕರಿಗೆ ನೀಡಲಾಗುವ ಪರಿಹಾರ ಹಣವನ್ನು 20 ಲಕ್ಷದಿಂದ 25 ಲಕ್ಷ ರೂಗೆ ಏರಿಸಲಾಗಿದೆ. ಇನ್ನೂ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆಯನ್ನು ಮಹಾರಾಷ್ಟ್ರ ಸರ್ಕಾರ ಇದೇ ವೇಳೆ ಇಳಿಕೆ ಮಾಡಿದೆ.
ಹೊಸದಿಲ್ಲಿ : ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮಹತ್ವದ ಸುದ್ದಿಯೊಂದನ್ನು ನೀಡಿದೆ.…
ಹೊಸದಿಲ್ಲಿ : ಪ್ರಧಾನ ಮಂತ್ರಿ ಕಾರ್ಯಾಲಯ (ಪಿಎಂಒ), ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯ ಮತ್ತು ಸಂಪುಟ ಸಚಿವಾಲಯಗಳನ್ನು ಒಳಗೊಂಡಿರುವ ‘ಸೇವಾ…
ಹೊಸದಿಲ್ಲಿ : ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ‘ಡಿ’ಗುಂಪಿನ ಪಂದ್ಯದಲ್ಲಿ ಯುಎಇ ಕ್ರಿಕೆಟ್ ತಂಡವು ಕೆನಡಾ ತಂಡವನ್ನು ಐದು…
ಸೇಲಂ : ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ರ್ಯಾಲಿ ವೇಳೆ ಕುಸಿದು ಬಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗದ ಮಧ್ಯೆ…
ಬೆಂಗಳೂರು : ಭಾರತೀಯ ರೈಲ್ವೆಯು ತನ್ನ ಅಧಿಕೃತ ಆಪ್ ‘ರೈಲ್ಒನ್’ ಅನ್ನು ಇತ್ತೀಚೆಗೆ ಬಿಡುಗಡೆ ಮಾಡಿದೆ. ಇದರಲ್ಲಿ ರೈಲ್ವೆ ಸೇವೆಗಳೆಲ್ಲವೂ…
ಢಾಕಾ : ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆಯಲ್ಲಿ ಬಾಂಗ್ಲಾದೇಶ ನ್ಯಾಷನಲ್ ಪಾರ್ಟಿ(ಬಿಎನ್ಪಿ) ಗೆದ್ದು ಬೀಗಿದೆ. ಸಂಸತ್ತಿನ ಒಟ್ಟು 300 ಸ್ಥಾನಗಳ ಪೈಕಿ…