ಮುಂಬೈ: ಲೋಕಸಭಾ ಚುನಾವಣೆಯಲ್ಲಿ ಮಹಾರಾಷ್ಟ್ರದಲ್ಲಿ ಭಾರೀ ಹಿನ್ನಡೆ ಕಂಡಿದ್ದ ಎನ್ಡಿಎ ಮೈತ್ರಿಕೂಟ ಸರ್ಕಾರ ಈ ಬಾರಿಯ ರಾಜ್ಯ ಬಜೆಟ್ನಲ್ಲಿ ಜನಪ್ರಿಯ ಸ್ಕೀಮ್ಗಳಿಗೆ ಶರಣಾಗಿದೆ.
ಕರ್ನಾಟಕದ ಗೃಹಲಕ್ಷ್ಮೀ ಯೋಜನೆ ಮಾದರಿಯಲ್ಲಿ ಮಹಾರಾಷ್ಟ್ರದಲ್ಲೂ ಮಹಿಳೆಯರಿಗೆ ಸರ್ಕಾರ ಮಾಸಿಕ ಸಹಾಯಧನ ಒದಗಿಸಲು ಘೋಷಿಸಿದೆ. 21 ವರ್ಷದಿಂದ 60 ವರ್ಷದವರೆಗಿನ ವಯಸ್ಸಿನ ಮಹಿಳೆಯರಿಗೆ ಮಾಸಿಕವಾಗಿ 1500 ರೂ ನೀಡುವುದಾಗಿ ಡಿಸಿಎಂ ಅಜಿತ್ ಪವಾರ್ ತಮ್ಮ ಬಜೆಟ್ನಲ್ಲಿ ತಿಳಿಸಿದ್ದಾರೆ.
ಇದೇ ಅಕ್ಟೋಬರ್ ತಿಂಗಳಿನಲ್ಲಿ ವಿಧಾನಸಭಾ ಚುನಾವಣೆಯಿದ್ದು, ಜನಪ್ರಿಯತೆ ಗಿಟ್ಟಿಸಲು ಸರ್ಕಾರ ಇನ್ನಿಲ್ಲದ ಕಸರತ್ತು ನಡೆಸುತ್ತಿದೆ. ಈ ಬಾರಿಯ ಬಜೆಟ್ನಲ್ಲಿ ಸಹಜವಾಗಿಯೇ ಬಹಳಷ್ಟು ಜನಪ್ರಿಯವೆನಿಸುವ ಸ್ಕೀಮ್ಗಳನ್ನು ಘೋಷಿಸಲಾಗಿದೆ.
ಸಿಎಂ ಅನ್ನಪೂರ್ಣ ಯೋಜನೆಯಡಿಯಲ್ಲಿ ಐದು ಮಂದಿ ಇರುವ ಅರ್ಹ ಕುಟುಂಬವೊಂದಕ್ಕೆ ವರ್ಷಕ್ಕೆ ಮೂರು ಅಡುಗೆ ಅನಿಲದ ಸಿಲಿಂಡರ್ಗಳನ್ನು ಉಚಿತವಾಗಿ ನೀಡಲಾಗುತ್ತದೆ. ಮಹಾರಾಷ್ಟ್ರದ ಹತ್ತಿ ಮತ್ತು ಸೋಯಾಬೀನ್ ಬೆಳೆಗಳಿಗೆ ಪ್ರತಿ ಹೆಕ್ಟೇರ್ಗೆ 5 ಸಾವಿರ ಬೋನಸ್ ಹಣವನ್ನು ಕೊಡಲಾಗುತ್ತದೆ. ಹಾಲು ಉತ್ಪಾದಕ ರೈತರಿಗೆ ಜುಲೈ.1ರ ಬಳಿಕ ಪ್ರತಿ ಲೀಟರ್ ಹಾಲಿಗೆ 5ರೂ ಹೆಚ್ಚುವರಿ ಬೋನಸ್ ಕೊಡಲಾಗುತ್ತದೆ. ಪ್ರಾಣಿಗಳ ದಾಳಿಯಿಂದ ಮೃತ ಪಡುವ ವ್ಯಕ್ತಿಗಳ ಸಂಬಂಧಿಕರಿಗೆ ನೀಡಲಾಗುವ ಪರಿಹಾರ ಹಣವನ್ನು 20 ಲಕ್ಷದಿಂದ 25 ಲಕ್ಷ ರೂಗೆ ಏರಿಸಲಾಗಿದೆ. ಇನ್ನೂ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆಯನ್ನು ಮಹಾರಾಷ್ಟ್ರ ಸರ್ಕಾರ ಇದೇ ವೇಳೆ ಇಳಿಕೆ ಮಾಡಿದೆ.
ಬೆಂಗಳೂರು: ರಾಜ್ಯದಲ್ಲಿ ರಣ ಬಿಸಿಲ ಧಗೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕೆಲ ಜಿಲ್ಲೆಗಳಲ್ಲಿ ಅತ್ಯಧಿಕ ತಾಪಮಾನ ದಾಖಲಾಗುತ್ತಿದ್ದು, ಜನರು ಬಿಸಿಲ…
ಮಧ್ಯ ಪ್ರಾಚ್ಯ ದೇಶಗಳಲ್ಲಿ ಕಳೆದ ೪೦ ದಿನಗಳಿಂದಲೂ ಯುದ್ಧ ನಡೆಯುತ್ತಿರುವುದರಿಂದ ವಿವಿಧ ದೇಶಗಳು ಸಂಕಷ್ಟಕ್ಕೆ ಸಿಲುಕಿವೆ. ಪೋಪ್ ೧೪ನೇ ಲಿಯೋರವರು…
ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಸರ್ಕಾರ ನೀಡುವ ಸ್ಕಾಲರ್ಶಿಪ್ ದೊಡ್ಡ ಸಹಾಯವಾಗಿದೆ. ಆದರೆ ವಸತಿ ವೆಚ್ಚ,ಪುಸ್ತಕಗಳು ಹಾಗೂ…
ಕೊಲ್ಲಿಯಲ್ಲಿ ಅಮೆರಿಕ-ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ನಡೆಸುತ್ತಿದ್ದ ಯುದ್ಧದ ನಿಲುಗಡೆಗಾಗಿ ಕರೆಯಲಾಗಿದ್ದ ಪಾಕಿಸ್ತಾನ ನೇತೃತ್ವದ ಸಂಧಾನ ಸಭೆ ವಿಫಲವಾಗುವುದರೊಂದಿಗೆ ಕೊಲ್ಲಿಯಲ್ಲಿ…
ಮೈಸೂರಿನ ಹೆಬ್ಬಾಳ ಕೈಗಾರಿಕಾ ಪ್ರದೇಶದ ರಸ್ತೆ ಹಾಳಾಗಿದ್ದು, ಈ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರು ಹರ ಸಾಹಸ ಮಾಡಬೇಕಾಗಿದೆ. ರಸ್ತೆಯ…
ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿ ಆವರಣದಲ್ಲಿ ಜ್ಯೂಸ್ ಸೆಂಟರ್, ಕಾಫಿ, ಟೀ ಅಂಗಡಿಗಳು ಪ್ಲಾಸ್ಟಿಕ್ ಕವರ್, ನೀರಿನ ಬಾಟಲಿ, ಪ್ಲಾಸ್ಟಿಕ್ ಕಪ್ಗಳನ್ನು…