ಮುಂಬೈ: ಲೋಕಸಭಾ ಚುನಾವಣೆಯಲ್ಲಿ ಮಹಾರಾಷ್ಟ್ರದಲ್ಲಿ ಭಾರೀ ಹಿನ್ನಡೆ ಕಂಡಿದ್ದ ಎನ್ಡಿಎ ಮೈತ್ರಿಕೂಟ ಸರ್ಕಾರ ಈ ಬಾರಿಯ ರಾಜ್ಯ ಬಜೆಟ್ನಲ್ಲಿ ಜನಪ್ರಿಯ ಸ್ಕೀಮ್ಗಳಿಗೆ ಶರಣಾಗಿದೆ.
ಕರ್ನಾಟಕದ ಗೃಹಲಕ್ಷ್ಮೀ ಯೋಜನೆ ಮಾದರಿಯಲ್ಲಿ ಮಹಾರಾಷ್ಟ್ರದಲ್ಲೂ ಮಹಿಳೆಯರಿಗೆ ಸರ್ಕಾರ ಮಾಸಿಕ ಸಹಾಯಧನ ಒದಗಿಸಲು ಘೋಷಿಸಿದೆ. 21 ವರ್ಷದಿಂದ 60 ವರ್ಷದವರೆಗಿನ ವಯಸ್ಸಿನ ಮಹಿಳೆಯರಿಗೆ ಮಾಸಿಕವಾಗಿ 1500 ರೂ ನೀಡುವುದಾಗಿ ಡಿಸಿಎಂ ಅಜಿತ್ ಪವಾರ್ ತಮ್ಮ ಬಜೆಟ್ನಲ್ಲಿ ತಿಳಿಸಿದ್ದಾರೆ.
ಇದೇ ಅಕ್ಟೋಬರ್ ತಿಂಗಳಿನಲ್ಲಿ ವಿಧಾನಸಭಾ ಚುನಾವಣೆಯಿದ್ದು, ಜನಪ್ರಿಯತೆ ಗಿಟ್ಟಿಸಲು ಸರ್ಕಾರ ಇನ್ನಿಲ್ಲದ ಕಸರತ್ತು ನಡೆಸುತ್ತಿದೆ. ಈ ಬಾರಿಯ ಬಜೆಟ್ನಲ್ಲಿ ಸಹಜವಾಗಿಯೇ ಬಹಳಷ್ಟು ಜನಪ್ರಿಯವೆನಿಸುವ ಸ್ಕೀಮ್ಗಳನ್ನು ಘೋಷಿಸಲಾಗಿದೆ.
ಸಿಎಂ ಅನ್ನಪೂರ್ಣ ಯೋಜನೆಯಡಿಯಲ್ಲಿ ಐದು ಮಂದಿ ಇರುವ ಅರ್ಹ ಕುಟುಂಬವೊಂದಕ್ಕೆ ವರ್ಷಕ್ಕೆ ಮೂರು ಅಡುಗೆ ಅನಿಲದ ಸಿಲಿಂಡರ್ಗಳನ್ನು ಉಚಿತವಾಗಿ ನೀಡಲಾಗುತ್ತದೆ. ಮಹಾರಾಷ್ಟ್ರದ ಹತ್ತಿ ಮತ್ತು ಸೋಯಾಬೀನ್ ಬೆಳೆಗಳಿಗೆ ಪ್ರತಿ ಹೆಕ್ಟೇರ್ಗೆ 5 ಸಾವಿರ ಬೋನಸ್ ಹಣವನ್ನು ಕೊಡಲಾಗುತ್ತದೆ. ಹಾಲು ಉತ್ಪಾದಕ ರೈತರಿಗೆ ಜುಲೈ.1ರ ಬಳಿಕ ಪ್ರತಿ ಲೀಟರ್ ಹಾಲಿಗೆ 5ರೂ ಹೆಚ್ಚುವರಿ ಬೋನಸ್ ಕೊಡಲಾಗುತ್ತದೆ. ಪ್ರಾಣಿಗಳ ದಾಳಿಯಿಂದ ಮೃತ ಪಡುವ ವ್ಯಕ್ತಿಗಳ ಸಂಬಂಧಿಕರಿಗೆ ನೀಡಲಾಗುವ ಪರಿಹಾರ ಹಣವನ್ನು 20 ಲಕ್ಷದಿಂದ 25 ಲಕ್ಷ ರೂಗೆ ಏರಿಸಲಾಗಿದೆ. ಇನ್ನೂ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆಯನ್ನು ಮಹಾರಾಷ್ಟ್ರ ಸರ್ಕಾರ ಇದೇ ವೇಳೆ ಇಳಿಕೆ ಮಾಡಿದೆ.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…