ಮುಂಬೈ: ಲೋಕಸಭಾ ಚುನಾವಣೆಯಲ್ಲಿ ಮಹಾರಾಷ್ಟ್ರದಲ್ಲಿ ಭಾರೀ ಹಿನ್ನಡೆ ಕಂಡಿದ್ದ ಎನ್ಡಿಎ ಮೈತ್ರಿಕೂಟ ಸರ್ಕಾರ ಈ ಬಾರಿಯ ರಾಜ್ಯ ಬಜೆಟ್ನಲ್ಲಿ ಜನಪ್ರಿಯ ಸ್ಕೀಮ್ಗಳಿಗೆ ಶರಣಾಗಿದೆ.
ಕರ್ನಾಟಕದ ಗೃಹಲಕ್ಷ್ಮೀ ಯೋಜನೆ ಮಾದರಿಯಲ್ಲಿ ಮಹಾರಾಷ್ಟ್ರದಲ್ಲೂ ಮಹಿಳೆಯರಿಗೆ ಸರ್ಕಾರ ಮಾಸಿಕ ಸಹಾಯಧನ ಒದಗಿಸಲು ಘೋಷಿಸಿದೆ. 21 ವರ್ಷದಿಂದ 60 ವರ್ಷದವರೆಗಿನ ವಯಸ್ಸಿನ ಮಹಿಳೆಯರಿಗೆ ಮಾಸಿಕವಾಗಿ 1500 ರೂ ನೀಡುವುದಾಗಿ ಡಿಸಿಎಂ ಅಜಿತ್ ಪವಾರ್ ತಮ್ಮ ಬಜೆಟ್ನಲ್ಲಿ ತಿಳಿಸಿದ್ದಾರೆ.
ಇದೇ ಅಕ್ಟೋಬರ್ ತಿಂಗಳಿನಲ್ಲಿ ವಿಧಾನಸಭಾ ಚುನಾವಣೆಯಿದ್ದು, ಜನಪ್ರಿಯತೆ ಗಿಟ್ಟಿಸಲು ಸರ್ಕಾರ ಇನ್ನಿಲ್ಲದ ಕಸರತ್ತು ನಡೆಸುತ್ತಿದೆ. ಈ ಬಾರಿಯ ಬಜೆಟ್ನಲ್ಲಿ ಸಹಜವಾಗಿಯೇ ಬಹಳಷ್ಟು ಜನಪ್ರಿಯವೆನಿಸುವ ಸ್ಕೀಮ್ಗಳನ್ನು ಘೋಷಿಸಲಾಗಿದೆ.
ಸಿಎಂ ಅನ್ನಪೂರ್ಣ ಯೋಜನೆಯಡಿಯಲ್ಲಿ ಐದು ಮಂದಿ ಇರುವ ಅರ್ಹ ಕುಟುಂಬವೊಂದಕ್ಕೆ ವರ್ಷಕ್ಕೆ ಮೂರು ಅಡುಗೆ ಅನಿಲದ ಸಿಲಿಂಡರ್ಗಳನ್ನು ಉಚಿತವಾಗಿ ನೀಡಲಾಗುತ್ತದೆ. ಮಹಾರಾಷ್ಟ್ರದ ಹತ್ತಿ ಮತ್ತು ಸೋಯಾಬೀನ್ ಬೆಳೆಗಳಿಗೆ ಪ್ರತಿ ಹೆಕ್ಟೇರ್ಗೆ 5 ಸಾವಿರ ಬೋನಸ್ ಹಣವನ್ನು ಕೊಡಲಾಗುತ್ತದೆ. ಹಾಲು ಉತ್ಪಾದಕ ರೈತರಿಗೆ ಜುಲೈ.1ರ ಬಳಿಕ ಪ್ರತಿ ಲೀಟರ್ ಹಾಲಿಗೆ 5ರೂ ಹೆಚ್ಚುವರಿ ಬೋನಸ್ ಕೊಡಲಾಗುತ್ತದೆ. ಪ್ರಾಣಿಗಳ ದಾಳಿಯಿಂದ ಮೃತ ಪಡುವ ವ್ಯಕ್ತಿಗಳ ಸಂಬಂಧಿಕರಿಗೆ ನೀಡಲಾಗುವ ಪರಿಹಾರ ಹಣವನ್ನು 20 ಲಕ್ಷದಿಂದ 25 ಲಕ್ಷ ರೂಗೆ ಏರಿಸಲಾಗಿದೆ. ಇನ್ನೂ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆಯನ್ನು ಮಹಾರಾಷ್ಟ್ರ ಸರ್ಕಾರ ಇದೇ ವೇಳೆ ಇಳಿಕೆ ಮಾಡಿದೆ.
ಕುಶಾಲನಗರ: ಕಾವೇರಿ ನದಿಗೆ ಇಳಿದ ನಾಗಲ್ಯಾಂಡ್ ಮೂಲದ ಇಬ್ಬರು ಯುವಕರು ನಾಪತ್ತೆಯಾಗಿರುವ ಘಟನೆ ಕುಶಾಲನಗರ ರಸೂಲ್ ಲೇಔಟ್ ಬಳಿ ಬುಧವಾರ…
ಕಾಬೂಲ್ : ಪಾಕಿಸ್ತಾನವು ಬುಧವಾರ ನಡೆಸಿದ ಹೊಸ ವಾಯುದಾಳಿಗಳಲ್ಲಿ ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ತಿಳಿಸಿದೆ. ಪಾಕ್…
ಚೆನ್ನೈ : ತಮಿಳಿನ ಖ್ಯಾತ ನಿರ್ದೇಶಕ, ಪದ್ಮಶ್ರೀ ಭಾರತಿರಾಜ್ ನಿಧನಕ್ಕೆ ಹೆಸರಾಂತ ನಟರು ಕಂಬನಿ ಮಿಡಿದಿದ್ದಾರೆ. ಅವರ ಅಂತಿಮ ದರ್ಶನಕ್ಕೆ…
ವರುಣ : ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನ ನೀಡಬೇಕು ಎಂದು ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದಲಿತ ಸಂಘಟನೆಗಳ…
ಮೈಸೂರು : ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಚಿವರು ಕೇಂದ್ರ ಸರ್ಕಾರದೊಂದಿಗೆ ಸೌಹಾರ್ದದಿಂದ ಸಂಪರ್ಕ ಸಾಧಿಸಿ ರಾಜ್ಯದ ಅಭಿವೃದ್ಧಿ…
ಬೆಂಗಳೂರು: ರಾಜ್ಯಸಭಾ ಸ್ಥಾನಕ್ಕೆ ಟಿಕೆಟ್ ತಪ್ಪಿದೆ ಎಂಬ ಕಾರಣದಿಂದ ನನ್ನ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನಡುವಿನ ಸಂಬಂಧ…