ದೇಶ- ವಿದೇಶ

ಮಹಾತ್ಮ ಗಾಂಧಿ ಪುಣ್ಯತಿಥಿ | ರಾಷ್ಟ್ರಪತಿ ಮುರ್ಮು, ಪ್ರಧಾನಿ ಮೋದಿ, ಖರ್ಗೆ ಸೇರಿ ಗಣ್ಯರ ನಮನ

ಹೊಸದಿಲ್ಲಿ : ರಾಷ್ಟ್ರಪಿತಿ ಮಹಾತ್ಮ ಗಾಂಧಿ ಅವರ 78ನೇ ಪುಣ್ಯತಿಥಿ ಹಿನ್ನೆಲೆಯಲ್ಲಿ ಇಂದು ರಾಷ್ಟ್ರಪತಿ ಮುರ್ಮು, ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಗೌರವ ಸಮನ ಸಲ್ಲಿಸಿದ್ದಾರೆ.

ದಿಲ್ಲಿಯ ರಾಜ್‌ಘಟ್‌ನಲ್ಲಿನ ಗಾಂಧಿ ಅವರ ಸ್ಮಾರಕಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪ ರಾಷ್ಟ್ರಪತಿ ರಾಧಾಕೃಷ್ಣನ್‌, ಪ್ರಧಾನಿ ಮೋದಿ ಸೇರಿದಂತೆ ಗಣ್ಯರು ಭೇಟಿ ನೀಡಿ ಪುಷ್ಪನಮನ ಸಲ್ಲಿಸಿದ್ದಾರೆ.

ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಪ್ರಧಾನಿ ಮೋದಿ, ಗಾಂಧಿ ಅವರ ಸ್ವದೇಶಿ ಕರೆಯು ಅಭಿವೃದ್ಧಿ ಹೊಂದಿದ ಭಾರತಕ್ಕೆ ಮೂಲಭೂತ ತತ್ವವಾಗಿದೆ. ಇದು ಅಭಿವೃದ್ಧಿ ಹೊಂದಿದ ಮತ್ತು ಸ್ವಾವಲಂಬಿ ಭಾರತಕ್ಕಾಗಿ ಸರ್ಕಾರದ ಸಂಕಲ್ಪದ ಮೂಲಭೂತ ಆಧಾರ ಸ್ತಂಭವಾಗಿದೆ ಎಂದು ಪ್ರಧಾನಿ ಹೇಳಿದ್ದಾರೆ.

ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಪುಣ್ಯತಿಥಿಯಂದು ಅವರಿಗೆ ನನ್ನ ಗೌರವಗಳು. ಅವರ ವ್ಯಕ್ತಿತ್ವ ಮತ್ತು ಕಾರ್ಯಗಳು ದೇಶದ ಜನರನ್ನು ಕರ್ತವ್ಯದ ಹಾದಿಯಲ್ಲಿ ನಡೆಯಲು ಸದಾ ಪ್ರೇರೇಪಿಸುತ್ತಲೇ ಇರುತ್ತವೆ ಎಂದಿದ್ದಾರೆ.

ಮತ್ತೊಂದು ಪೋಸ್ಟ್​ನಲ್ಲಿ, ಅಹಿಂಸೆಯ ತತ್ವವನ್ನು ಶ್ಲಾಘಿಸಿರುವ ಮೋದಿ, ಬಾಪು ಯಾವಾಗಲೂ ಮಾನವೀಯತೆಯ ರಕ್ಷಣೆಗಾಗಿ ಅಹಿಂಸೆಯನ್ನು ಒತ್ತಿ ಹೇಳುತ್ತಿದ್ದರು. ಶಸ್ತ್ರಾಸ್ತ್ರವಿಲ್ಲದೆ ಜಗತ್ತನ್ನು ಬದಲಾಯಿಸಬಲ್ಲ ಶಕ್ತಿ ಅದರಲ್ಲಿದೆ. ಅಹಿಂಸಾ ಪರಮ ಧರ್ಮಸ್ತ-ಥಾಹಿಂಸಾ ಪರಂತಪಃ, ಅಹಿಂಸಾ ಪರಮಂ ಸತ್ಯಂ ಯತೋ ಧರ್ಮಃ ಪ್ರವರ್ತತೇ (ಅಹಿಂಸೆಯೇ ಅಂತಿಮ ಕರ್ತವ್ಯ, ಅಹಿಂಸೆಯೇ ಅಂತಿಮ ತಪಸ್ಸು. ಅಹಿಂಸೆಯೇ ಅಂತಿಮ ಸತ್ಯ, ಮತ್ತು ಅದು ಸದಾಚಾರದ ಉದ್ದೇಶವನ್ನು ಮುನ್ನಡೆಸುತ್ತದೆ) ಎಂದು ತಿಳಿಸಿದ್ದಾರೆ.

ಕಾಂಗ್ರೆಸ್​ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಹಾತ್ಮ ಗಾಂಧಿಯವರ ಸ್ಮರಣೆ ಮಾಡಿದ್ದು, ದೇಶವನ್ನು ಬೇರ್ಪಡಿಸಿದ ದ್ವೇಷವನ್ನು ಗಾಂಧಿಯವರ ಮಾರ್ಗದಲ್ಲಿ ಮಾತ್ರ ಎದುರಿಸಲು ಸಾಧ್ಯ. ಬಾಪು ಅವರ ಸ್ವಂತ ಮಾರ್ಗ, ಸತ್ಯದ ಬೆಳಕು, ಅಹಿಂಸೆಯ ಶಕ್ತಿ ಮತ್ತು ಪ್ರೀತಿಯ ಕರುಣೆ ಇದರಲ್ಲೇ ಅಡಗಿದೆ. ಹುತಾತ್ಮರ ದಿನದಂದು ರಾಷ್ಟ್ರಪಿತನಿಗೆ ಗೌರವಗಳು ಎಂದು ತಿಳಿಸಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಸಹ ಮಹಾತ್ಮ ಗಾಂಧಿಯವರ ಪುಣ್ಯತಿಥಿಯಂದು ಅವರಿಗೆ ಗೌರವ ಸಲ್ಲಿಸಿದ್ದಾರೆ. ರಾಷ್ಟ್ರಪಿತನ ವಿಚಾರಗಳು ಪೀಳಿಗೆಗೆ ಸ್ಫೂರ್ತಿ ನೀಡುತ್ತಲೇ ಇರುತ್ತವೆ ಎಂದು ಹೇಳಿದ್ದಾರೆ. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಕೂಡ, ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಪುಣ್ಯತಿಥಿಯಂದು ಅವರಿಗೆ ಗೌರವಪೂರ್ವಕ ನಮನಗಳು ಎಂದಿದ್ದಾರೆ.

ರಾಷ್ಟ್ರಪತಿ ಮಹಾತ್ಮಗಾಂಧಿ ಅವರನ್ನು 1948ರ ಜನವರಿ 30ರಂದು ಹತ್ಯೆ ಮಾಡಲಾಯಿತು. ಅವರ ಪುಣ್ಯತಿಥಿಯನ್ನು ಪ್ರತಿ ವರ್ಷ ಹುತಾತ್ಮರ ದಿನವನ್ನಾಗಿ ಆಚರಿಸಲಾಗುತ್ತದೆ. ದೇಶಾದ್ಯಂತ ನಾಯಕರು ಮತ್ತು ನಾಗರಿಕರು ಅವರ ಶಾಂತಿ, ಏಕತೆ ಮತ್ತು ನೈತಿಕ ಧೈರ್ಯದ ಶಾಶ್ವತ ಪರಂಪರೆಗೆ ಗೌರವ ಸಲ್ಲಿಸುತ್ತಾರೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

3 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026: ಗಜಪಯಣಕ್ಕೆ ವಿದ್ಯುಕ್ತ ಚಾಲನೆ

ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…

5 hours ago

ಓದುಗರ ಪತ್ರ: ಕಾವೇರಿ ನದಿ ನೀರಿನ ವಿವಾದಕ್ಕೆ ಮಾತುಕತೆಯೇ ಮದ್ದು

ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…

6 hours ago

ಓದುಗರ ಪತ್ರ: ಈ ‘ಎರಡು’ ಸಮಸ್ಯೆಗಳಿಗೆ ಪರಿಹಾರ ಸಿಗಬೇಕು

ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…

6 hours ago

ಓದುಗರ ಪತ್ರ: ಸ್ಥಳ ಶುದ್ಧೀಕರಣಕ್ಕಿಂತ ಮನ ಶುದ್ಧೀಕರಣವಾಗಲಿ

ಎಐಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ, ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಖಂಡದ ಹಲ್ದ್ವಾನಿಯದಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ…

6 hours ago

ಮಳೆ ಕೊರತೆಯ ನಡುವೆಯೂ ಕೃಷಿಗೆ ಆತಂಕವಿಲ್ಲ

ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…

10 hours ago