ಇಂದೋರ್ : ಕೇರಳದ ತಿರುವನಂತಪುರಂನಿಂದ ದೆಹಲಿಗೆ ತೆರಳುತ್ತಿದ್ದ ರಾಜಧಾನಿ ಎಕ್ಸ್ಪ್ರೆಸ್ ರೈಲಿನ ಎಸಿ ಕೋಚ್ನಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಭಾನುವಾರ ಬೆಳಿಗ್ಗೆ ರೈಲು ಮಧ್ಯಪ್ರದೇಶದ ರತ್ಲಂ ಜಿಲ್ಲೆಯಲ್ಲಿ ಸಂಚರಿಸುತ್ತಿದ್ದಾಗ ಈ ಅವಘಡ ಸಂಭವಿಸಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
ಎಸಿ ಕೋಚ್ನಲ್ಲಿ 68 ಮಂದಿ ಪ್ರಯಾಣಿಸುತ್ತಿದ್ದರು. ಅವಘಡದಲ್ಲಿ ಯಾರಿಗೂ ಗಾಯಗಳಾಗಿಲ್ಲ. ತಕ್ಷಣ ಬೆಂಕಿ ಹೊತ್ತಿಕೊಂಡಿದ್ದ ಬೋಗಿಯನ್ನು ಬೇರ್ಪಡಿಸಲಾಯಿತು ಮತ್ತು ಸುರಕ್ಷತೆಗಾಗಿ ಓವರ್ ಹೆಡ್ ವಿದ್ಯುತ್ ಸರಬರಾಜನ್ನು (ಒಹೆಚ್ಇ) ತಕ್ಷಣವೇ ಆಫ್ ಮಾಡಲಾಯಿತು. ಎಲ್ಲಾ ಪ್ರಯಾಣಿಕರನ್ನು ರೈಲಿನಿಂದ ಸುರಕ್ಷಿತವಾಗಿ ಕೆಳಗಿಳಿಸಲಾಗಿದೆ. ಕೋಟಾಗೆ ತೆರಳಲು ಸೂಕ್ತ ವ್ಯವಸ್ಥೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ
12431 ರಾಜಧಾನಿ ಎಕ್ಸ್ಪ್ರೆಸ್ ರೈಲು ಶುಕ್ರವಾರ ಕೇರಳದ ತಿರುವನಂತಪುರಂನಿಂದ ಹೊರಟು ಇಂದು ಮಧ್ಯಾಹ್ನ 12:30ಕ್ಕೆ ದೆಹಲಿಯ ಹಜರತ್ ನಿಜಾಮುದ್ದೀನ್ ರೈಲು ನಿಲ್ದಾಣ ತಲುಪಬೇಕಿತ್ತು. ಬೆಂಕಿ ಕಾಣಿಸಿಕೊಂಡಾಗ ರೈಲು ಸುಮಾರು 2,600 ಕಿಲೋಮೀಟರ್ ಕ್ರಮಿಸಿತ್ತು. ದೆಹಲಿಗೆ ಸುಮಾರು 450 ಕಿಲೋಮೀಟರ್ ದೂರದಲ್ಲಿತ್ತು. ಬೆಂಕಿಯನ್ನು ತಕ್ಷಣವೇ ನಂದಿಸಲಾಗಿದೆ. ಅಗ್ನಿ ಅವಘಡಕ್ಕೆ ಕಾರಣವೇನು ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮದ ಶಾಖೆ ಅರಣ್ಯದಲ್ಲಿ ನಡೆದ ಗುಂಡಿನ…
ಕುಶಾಲನಗರ: ತಾಲ್ಲೂಕಿನ ಕೂಡಿಗೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಮುಂದುವರಿದಿದ್ದು, ವ್ಯಕ್ತಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಹೆಗ್ಗಡಹಳ್ಳಿ ಗ್ರಾಮದ…
ಜಕಾರ್ತ: ಇಂಡೋನೇಷ್ಯಾದ ಫ್ಲೋರ್ಸ್ ದ್ವೀಪದಲ್ಲಿ ಶನಿವಾರ ಮುಂಜಾನೆ 7.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಮೃತರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ.…
ಅಯೋಧ್ಯೆ: ಅಯೋಧ್ಯೆ ರಾಮಮಂದಿರದ ಅರ್ಚಕರಿಗೆ ಹಳದಿ ರೇಷ್ಮೆ ಧೋತಿಯನ್ನು ಹೊಸ ಡ್ರೆಸ್ ಕೋಡ್ ಆಗಿ ಜಾರಿಗೆ ತರಲಾಗಿದೆ. ರಾಮನಂದಿ ಸಂಪ್ರದಾಯಕ್ಕೆ…
ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…