ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮನ್ ಕಿ ಬಾತ್ನ 128ನೇ ಆವೃತ್ತಿಯನ್ನು ಉದ್ದೇಶಿಸಿ ಇಂದು ಮಾತನಾಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್.7ರಂದು ದೇಶಭಕ್ತಿ ಗೀತೆ ವಂದೇ ಮಾತರಂನ 150ನೇ ವಾರ್ಷಿಕೋತ್ಸವದ ಬಗ್ಗೆ ಮಾತನಾಡಿದರು. ಕೆಲವು ದಿನಗಳ ಹಿಂದೆ ಅವರು ಉದ್ಘಾಟಿಸಿದ ಸ್ಕೈರೂಟ್ನ್ ಇನ್ಪಿನಿಟಿ ಕ್ಯಾಂಪಸ್ನ ಮಹತ್ವ ತಿಳಿಸಿದರು.
ನವೆಂಬರ್.26ರಂದು ಸಂವಿಧಾನ ದಿನದಂದು ಸೆಂಟ್ರಲ್ ಹಾಲ್ನಲ್ಲಿ ನಡೆದ ವಿಶೇಷ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಅಯೋಧ್ಯೆಯ ರಾಮಮಂದಿರದ ಮೇಲೆ ಧಾರ್ಮಿಕ ಧ್ವಜವನ್ನು ಹಾರಿಸುವ ಬಗ್ಗೆಯೂ ಮೋದಿ ಮಾತನಾಡಿದರು.
ನವೆಂಬರ್ ತಿಂಗಳು ಬಹಳಷ್ಟು ಆಕಾಂಕ್ಷೆಗಳನ್ನು ತಂದಿದೆ. ಕೆಲವು ದಿನಗಳ ಹಿಂದೆ ನವೆಂಬರ್.26ರಂದು ಸಂವಿಧಾನ ದಿನದಂದು ಸಂಸತ್ತಿನ ಸೆಂಟ್ರಲ್ ಹಾಲ್ನಲ್ಲಿ ವಿಶೇಷ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು.
ವಂದೇ ಮಾತರಂನ 150ನೇ ವಾರ್ಷಿಕೋತ್ಸವದಂದು ದೇಶದಾದ್ಯಂತ ಕಾರ್ಯಕ್ರಮಗಳ ಭವ್ಯ ಸರಣಿ ಪ್ರಾರಂಭವಾಯಿತು. ನವೆಂಬರ್.25ರಂದು ಅಯೋಧ್ಯೆಯ ರಾಮಮಂದಿರದಲ್ಲಿ ಧರ್ಮ ಧ್ವಜವನ್ನು ಹಾರಿಸಲಾಯಿತು. ಅದೇ ದಿನ ಕುರುಕ್ಷೇತ್ರದ ಜ್ಯೋತಿಸರ್ನಲ್ಲಿ ಪಾಂಚಜನ್ಯ ಸ್ಮಾರಕವನ್ನು ಉದ್ಘಾಟಿಸಲಾಯಿತು ಎಂದು ಹೇಳಿದರು.
ಇನ್ನು ಭಾರತ ಬಾಹ್ಯಾಕಾಶ ಮತ್ತು ವಾಯುಯಾನ ಕ್ಷೇತ್ರದಲ್ಲಿ ಇಡುತ್ತಿರುವ ಹೆಜ್ಜೆಗಳ ಕುರಿತು ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಭಾರತವು ವಾಯುಯಾನ ವಲಯದಲ್ಲಿ ನಿರ್ವಹಣೆ, ದುರಸ್ತಿ ಮತ್ತು ಕೂಲಂಕುಷ ಪರೀಕ್ಷೆಗಳಲ್ಲಿ ಪ್ರಮುಖ ಹೆಜ್ಜೆ ಇಡುತ್ತಿದೆ. ಕಳೆದ ವಾರ, ಐಎನ್ಎಸ್ ಮಾಹೆಯನ್ನು ಮುಂಬೈನಲ್ಲಿ ಭಾರತೀಯ ನೌಕಾಪಡೆಗೆ ಸೇರಿಸಲಾಯಿತು. ಕಳೆದ ವಾರ ಸ್ಕೈರೂಟ್ನ ಇನ್ಪಿನಿಟಿ ಕ್ಯಾಂಪಸ್ನೊಂದಿಗೆ ಭಾರತದ ಬಾಹ್ಯಾಕಾಶ ಪರಿಸರ ವ್ಯವಸ್ಥೆಯು ಹೊಸ ಉತ್ತೇಜನವನ್ನು ಪಡೆಯಿತು. ಇದೆಲ್ಲವು ಭಾರತದ ಹೊಸ ಆಲೋಷಚನೆಗಳು, ನಾವೀನ್ಯತೆ ಮತ್ತು ಯುವ ಶಕ್ತಿಯ ಪ್ರತಿಬಿಂಬವಾಗಿದೆ ಎಂದು ಮೋದಿ ಹೇಳಿದ್ದಾರೆ.
ಕೃಷಿ ವಲಯವನ್ನು ಶ್ಲಾಘಿಸಿದ ಮೋದಿ 357 ಮಿಲಿಯನ್ ಟನ್ ಆಹಾರ ಧಾನ್ಯಗಳ ದಾಖಲೆಯ ಉತ್ಪಾದನೆಯ ಕುರಿತು ಮಾತನಾಡಿದರು. ಭಾರತವು ಕೃಷಿ ಕ್ಷೇತ್ರದಲ್ಲಿ ಪ್ರಮುಖ ಯಶಸ್ಸನ್ನು ಸಾಧಿಸಿದೆ. ಭಾರತವು 357 ಮಿಲಿಯನ್ ಟನ್ ಆಹಾರ ಧಾನ್ಯಗಳನ್ನು ಉತ್ಪಾದಿಸುವ ಮೂಲಕ ಐತಿಹಾಸಿಕ ದಾಖಲೆಗಳನ್ನು ಸ್ಥಾಪಿಸಿದೆ. 10 ವರ್ಷಗಳ ಹಿಂದಿನದಕ್ಕೆ ಹೋಲಿಸಿದರೆ, ಭಾರತದ ಆಹಾರ ಧಾನ್ಯ ಉತ್ಪಾದನೆಯು 100 ಮಿಲಿಯನ್ ಟನ್ಗಳಷ್ಟು ಹೆಚ್ಚಾಗಿದೆ ಎಂದು ಹೇಳಿದ್ದಾರೆ.
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್ಗಳ ರಜಾ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…