ದೇಶ- ವಿದೇಶ

ಭಾರತ ಕೃಷಿ ಕ್ಷೇತ್ರದಲ್ಲಿ ಪ್ರಮುಖ ಯಶಸ್ಸು: ಮನ್‌ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ ಸಂತಸ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮನ್‌ ಕಿ ಬಾತ್‌ನ 128ನೇ ಆವೃತ್ತಿಯನ್ನು ಉದ್ದೇಶಿಸಿ ಇಂದು ಮಾತನಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್.‌7ರಂದು ದೇಶಭಕ್ತಿ ಗೀತೆ ವಂದೇ ಮಾತರಂನ 150ನೇ ವಾರ್ಷಿಕೋತ್ಸವದ ಬಗ್ಗೆ ಮಾತನಾಡಿದರು. ಕೆಲವು ದಿನಗಳ ಹಿಂದೆ ಅವರು ಉದ್ಘಾಟಿಸಿದ ಸ್ಕೈರೂಟ್‌ನ್‌ ಇನ್ಪಿನಿಟಿ ಕ್ಯಾಂಪಸ್‌ನ ಮಹತ್ವ ತಿಳಿಸಿದರು.

ನವೆಂಬರ್.‌26ರಂದು ಸಂವಿಧಾನ ದಿನದಂದು ಸೆಂಟ್ರಲ್‌ ಹಾಲ್‌ನಲ್ಲಿ ನಡೆದ ವಿಶೇಷ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಅಯೋಧ್ಯೆಯ ರಾಮಮಂದಿರದ ಮೇಲೆ ಧಾರ್ಮಿಕ ಧ್ವಜವನ್ನು ಹಾರಿಸುವ ಬಗ್ಗೆಯೂ ಮೋದಿ ಮಾತನಾಡಿದರು.

ನವೆಂಬರ್ ತಿಂಗಳು ಬಹಳಷ್ಟು ಆಕಾಂಕ್ಷೆಗಳನ್ನು ತಂದಿದೆ. ಕೆಲವು ದಿನಗಳ ಹಿಂದೆ ನವೆಂಬರ್.‌26ರಂದು ಸಂವಿಧಾನ ದಿನದಂದು ಸಂಸತ್ತಿನ ಸೆಂಟ್ರಲ್‌ ಹಾಲ್‌ನಲ್ಲಿ ವಿಶೇಷ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು.

ವಂದೇ ಮಾತರಂನ 150ನೇ ವಾರ್ಷಿಕೋತ್ಸವದಂದು ದೇಶದಾದ್ಯಂತ ಕಾರ್ಯಕ್ರಮಗಳ ಭವ್ಯ ಸರಣಿ ಪ್ರಾರಂಭವಾಯಿತು. ನವೆಂಬರ್.‌25ರಂದು ಅಯೋಧ್ಯೆಯ ರಾಮಮಂದಿರದಲ್ಲಿ ಧರ್ಮ ಧ್ವಜವನ್ನು ಹಾರಿಸಲಾಯಿತು. ಅದೇ ದಿನ ಕುರುಕ್ಷೇತ್ರದ ಜ್ಯೋತಿಸರ್‌ನಲ್ಲಿ ಪಾಂಚಜನ್ಯ ಸ್ಮಾರಕವನ್ನು ಉದ್ಘಾಟಿಸಲಾಯಿತು ಎಂದು ಹೇಳಿದರು.

ಇನ್ನು ಭಾರತ ಬಾಹ್ಯಾಕಾಶ ಮತ್ತು ವಾಯುಯಾನ ಕ್ಷೇತ್ರದಲ್ಲಿ ಇಡುತ್ತಿರುವ ಹೆಜ್ಜೆಗಳ ಕುರಿತು ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಭಾರತವು ವಾಯುಯಾನ ವಲಯದಲ್ಲಿ ನಿರ್ವಹಣೆ, ದುರಸ್ತಿ ಮತ್ತು ಕೂಲಂಕುಷ ಪರೀಕ್ಷೆಗಳಲ್ಲಿ ಪ್ರಮುಖ ಹೆಜ್ಜೆ ಇಡುತ್ತಿದೆ. ಕಳೆದ ವಾರ, ಐಎನ್‌ಎಸ್‌ ಮಾಹೆಯನ್ನು ಮುಂಬೈನಲ್ಲಿ ಭಾರತೀಯ ನೌಕಾಪಡೆಗೆ ಸೇರಿಸಲಾಯಿತು. ಕಳೆದ ವಾರ ಸ್ಕೈರೂಟ್‌ನ ಇನ್ಪಿನಿಟಿ ಕ್ಯಾಂಪಸ್‌ನೊಂದಿಗೆ ಭಾರತದ ಬಾಹ್ಯಾಕಾಶ ಪರಿಸರ ವ್ಯವಸ್ಥೆಯು ಹೊಸ ಉತ್ತೇಜನವನ್ನು ಪಡೆಯಿತು. ಇದೆಲ್ಲವು ಭಾರತದ ಹೊಸ ಆಲೋಷಚನೆಗಳು, ನಾವೀನ್ಯತೆ ಮತ್ತು ಯುವ ಶಕ್ತಿಯ ಪ್ರತಿಬಿಂಬವಾಗಿದೆ ಎಂದು ಮೋದಿ ಹೇಳಿದ್ದಾರೆ.

ಕೃಷಿ ವಲಯವನ್ನು ಶ್ಲಾಘಿಸಿದ ಮೋದಿ 357 ಮಿಲಿಯನ್‌ ಟನ್‌ ಆಹಾರ ಧಾನ್ಯಗಳ ದಾಖಲೆಯ ಉತ್ಪಾದನೆಯ ಕುರಿತು ಮಾತನಾಡಿದರು. ಭಾರತವು ಕೃಷಿ ಕ್ಷೇತ್ರದಲ್ಲಿ ಪ್ರಮುಖ ಯಶಸ್ಸನ್ನು ಸಾಧಿಸಿದೆ. ಭಾರತವು 357 ಮಿಲಿಯನ್‌ ಟನ್‌ ಆಹಾರ ಧಾನ್ಯಗಳನ್ನು ಉತ್ಪಾದಿಸುವ ಮೂಲಕ ಐತಿಹಾಸಿಕ ದಾಖಲೆಗಳನ್ನು ಸ್ಥಾಪಿಸಿದೆ. 10 ವರ್ಷಗಳ ಹಿಂದಿನದಕ್ಕೆ ಹೋಲಿಸಿದರೆ, ಭಾರತದ ಆಹಾರ ಧಾನ್ಯ ಉತ್ಪಾದನೆಯು 100 ಮಿಲಿಯನ್‌ ಟನ್‌ಗಳಷ್ಟು ಹೆಚ್ಚಾಗಿದೆ ಎಂದು ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

4 hours ago

ಮೈಸೂರಿನಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…

5 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

5 hours ago

ಕಳೆದ ಮೂರು ದಿನಗಳಿಂದ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತದ ಮಂದಿ ಭಕ್ತರು ಭೇಟಿ

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…

5 hours ago

ಕಾಡಿನಲ್ಲಿ ಅಕ್ರಮವಾಗಿ ಚರ್ಚ್‌ ನಿರ್ಮಾಣ: 40ಕ್ಕೂ ಹೆಚ್ಚು ಜನರ ಬಂಧನ

ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್‌ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…

6 hours ago

ಹಾರ್ಮುಜ್‌ ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬಂತು 20,000 ಟನ್‌ ಎಲ್‌ಪಿಜಿ ಟ್ಯಾಂಕರ್‌

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್‍ಪಿಜಿಯನ್ನು ಹೊತ್ತ…

6 hours ago