ಹೊಸದಿಲ್ಲಿ : ಮುಂದಿನ ವಾರ ಮಲೇಷ್ಯಾದಲ್ಲಿ ನಡೆಯಲಿರುವ ಆಸಿಯಾನ್-ಭಾರತ ಶೃಂಗಸಭೆಯಲ್ಲಿ ವರ್ಚುವಲ್ ಆಗಿ ಭಾಗವಹಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಈ ವಿಷಯವನ್ನು ದೂರವಾಣಿ ಕರೆಯಲ್ಲಿ ಮೋದಿ ಮಲೇಷ್ಯಾದ ಪ್ರಧಾನಿ ಅನ್ವರ್ ಇಬ್ರಾಹಿಂ ಅವರಿಗೆ ಈ ವಿಷಯವನ್ನು ತಿಳಿಸಿದರು. ನನ್ನ ಆತ್ಮೀಯ ಸ್ನೇಹಿತ, ಮಲೇಷ್ಯಾದ ಪ್ರಧಾನಿ ಅನ್ವರ್ ಇಬ್ರಾಹಿಂ ಅವರೊಂದಿಗೆ ಆತ್ಮೀಯ ಸಂಭಾಷಣೆ ನಡೆಸಿದೆ. ಮಲೇಷ್ಯಾದ ಆಸಿಯಾನ್ ಅಧ್ಯಕ್ಷತೆಗಾಗಿ ಅವರನ್ನು ಅಭಿನಂದಿಸಿದೆ ಮತ್ತು ಮುಂಬರುವ ಶೃಂಗಸಭೆಗಳ ಯಶಸ್ಸಿಗೆ ಶುಭಾಶಯಗಳನ್ನು ತಿಳಿಸಿದೆ ಎಂದು ಮೋದಿ ಎಕ್ಸ್ನಲ್ಲಿ ತಿಳಿಸಿದ್ದಾರೆ.
ಆಸಿಯಾನ್-ಭಾರತ ಶೃಂಗಸಭೆಯಲ್ಲಿ ವರ್ಚುವಲ್ ಆಗಿ ಸೇರಲು ಮತ್ತು ಆಸಿಯಾನ್-ಭಾರತ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಆಳಗೊಳಿಸಲು ಎದುರು ನೋಡುತ್ತಿದ್ದೇನೆ ಎಂದು ಮೋದಿ ಹೇಳಿದರು.
ಇದನ್ನು ಓದಿ: ಕೇದಾರನಾಥ ದೇವಾಲಯ ಬಂದ್
ಆಸಿಯಾನ್ ಸಭೆಗಳು ಅಕ್ಟೋಬರ್ ೨೬-೨೮ರಿಂದ ನಿಗದಿಯಾಗಿವೆ. ಆಸಿಯಾನ್ ಗುಂಪಿನ ಸಂವಾದ ಪಾಲುದಾರರಾದ ಹಲವಾರು ದೇಶಗಳ ನಾಯಕರನ್ನು ಮಲೇಷ್ಯಾ ಆಹ್ವಾನಿಸಿದೆ. ಟ್ರಂಪ್ ಅಕ್ಟೋಬರ್ ೨೬ರಂದು ಎರಡು ದಿನಗಳ ಪ್ರವಾಸಕ್ಕಾಗಿ ಕೌಲಾಲಂಪುರಕ್ಕೆ ಪ್ರಯಾಣಿಸಲಿದ್ದಾರೆ. ೧೯೯೨ ರಲ್ಲಿ ವಲಯ ಪಾಲುದಾರಿಕೆ ಸ್ಥಾಪನೆಯೊಂದಿಗೆ ಆಸಿಯಾನ್-ಭಾರತ ಸಂವಾದ ಸಂಬಂಧಗಳು ಪ್ರಾರಂಭವಾದವು. ಇದು ಡಿಸೆಂಬರ್ ೧೯೯೫ ರಲ್ಲಿ ಪೂರ್ಣ ಸಂವಾದ ಪಾಲುದಾರಿಕೆಗೆ ಮತ್ತು ೨೦೦೨ ರಲ್ಲಿ ಶೃಂಗಸಭೆ ಮಟ್ಟದ ಪಾಲುದಾರಿಕೆಗೆ ಏರಿತು.ಈ ಸಂಬಂಧಗಳನ್ನು ೨೦೧೨ ರಲ್ಲಿ ಕಾರ್ಯತಂತ್ರದ ಪಾಲುದಾರಿಕೆಗೆ ಏರಿಸಲಾಯಿತು.
ಭಾರತ ಮತ್ತು ಆಸಿಯಾನ್ ನಡುವಿನ ದ್ವಿಪಕ್ಷೀಯ ಸಂಬಂಧಗಳು ಕಳೆದ ಕೆಲವು ವರ್ಷಗಳಿಂದ ಗಮನಾರ್ಹ ಏರಿಕೆಯನ್ನು ಕಂಡಿದ್ದು, ವ್ಯಾಪಾರ ಮತ್ತು ಹೂಡಿಕೆ ಹಾಗೂ ಭದ್ರತೆ ಮತ್ತು ರಕ್ಷಣಾ ಕ್ಷೇತ್ರಗಳಲ್ಲಿ ಸಹಕಾರವನ್ನು ಹೆಚ್ಚಿಸುವತ್ತ ಗಮನ ಹರಿಸಲಾಗಿದೆ.
ಚಾಮರಾಜನಗರ: ಚಾ.ನಗರ-ನಂಜನಗೂಡು ಹೆದ್ದಾರಿಯಲ್ಲಿರುವ ಪಣ್ಯದಹುಂಡಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸ್ವಾಧಿನಪಡಿಸಿಕೊಂಡಿರುವ ಭೂಮಿಯ ದರ ನಿಗದಿ ಕಗ್ಗಂಟಿನ ವಿಚಾರ ಅಂತಿಮ…
ಮೈಸೂರು: ಪ್ರಸಿದ್ಧ ಯಾತ್ರಾ ಸ್ಥಳ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಕಾಮಗಾರಿಯು ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಡಿ ಜನವರಿ ಮೊದಲ…
ಗಿರೀಶ್ ಹುಣಸೂರು ಬಿಡಿ ಮೊಟ್ಟೆಗೆ ೭.೫೦ ರೂ.; ರಫ್ತು ಹೆಚ್ಚಳದಿಂದ ಭಾರೀ ಹೊಡೆತ ಮೈಸೂರು: ಮಾಗಿ ಚಳಿಗಾಲ ಆರಂಭ, ಚಂಡಮಾರುತದಿಂದ ಹವಾಮಾನ…
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…