ದೇಶ- ವಿದೇಶ

ಮಲೇಷ್ಯಾ ಆಸಿಯಾನ್ ಶೃಂಗ ಸಭೆ : ವರ್ಚುವಲ್ ಆಗಿ ಮೋದಿ ಭಾಗಿ

ಹೊಸದಿಲ್ಲಿ : ಮುಂದಿನ ವಾರ ಮಲೇಷ್ಯಾದಲ್ಲಿ ನಡೆಯಲಿರುವ ಆಸಿಯಾನ್-ಭಾರತ ಶೃಂಗಸಭೆಯಲ್ಲಿ ವರ್ಚುವಲ್ ಆಗಿ ಭಾಗವಹಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಈ ವಿಷಯವನ್ನು ದೂರವಾಣಿ ಕರೆಯಲ್ಲಿ ಮೋದಿ ಮಲೇಷ್ಯಾದ ಪ್ರಧಾನಿ ಅನ್ವರ್ ಇಬ್ರಾಹಿಂ ಅವರಿಗೆ ಈ ವಿಷಯವನ್ನು ತಿಳಿಸಿದರು. ನನ್ನ ಆತ್ಮೀಯ ಸ್ನೇಹಿತ, ಮಲೇಷ್ಯಾದ ಪ್ರಧಾನಿ ಅನ್ವರ್ ಇಬ್ರಾಹಿಂ ಅವರೊಂದಿಗೆ ಆತ್ಮೀಯ ಸಂಭಾಷಣೆ ನಡೆಸಿದೆ. ಮಲೇಷ್ಯಾದ ಆಸಿಯಾನ್ ಅಧ್ಯಕ್ಷತೆಗಾಗಿ ಅವರನ್ನು ಅಭಿನಂದಿಸಿದೆ ಮತ್ತು ಮುಂಬರುವ ಶೃಂಗಸಭೆಗಳ ಯಶಸ್ಸಿಗೆ ಶುಭಾಶಯಗಳನ್ನು ತಿಳಿಸಿದೆ ಎಂದು ಮೋದಿ ಎಕ್ಸ್‌ನಲ್ಲಿ ತಿಳಿಸಿದ್ದಾರೆ.

ಆಸಿಯಾನ್-ಭಾರತ ಶೃಂಗಸಭೆಯಲ್ಲಿ ವರ್ಚುವಲ್ ಆಗಿ ಸೇರಲು ಮತ್ತು ಆಸಿಯಾನ್-ಭಾರತ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಆಳಗೊಳಿಸಲು ಎದುರು ನೋಡುತ್ತಿದ್ದೇನೆ ಎಂದು ಮೋದಿ ಹೇಳಿದರು.

ಇದನ್ನು ಓದಿ: ಕೇದಾರನಾಥ ದೇವಾಲಯ ಬಂದ್

ಆಸಿಯಾನ್ ಸಭೆಗಳು ಅಕ್ಟೋಬರ್ ೨೬-೨೮ರಿಂದ ನಿಗದಿಯಾಗಿವೆ. ಆಸಿಯಾನ್ ಗುಂಪಿನ ಸಂವಾದ ಪಾಲುದಾರರಾದ ಹಲವಾರು ದೇಶಗಳ ನಾಯಕರನ್ನು ಮಲೇಷ್ಯಾ ಆಹ್ವಾನಿಸಿದೆ. ಟ್ರಂಪ್ ಅಕ್ಟೋಬರ್ ೨೬ರಂದು ಎರಡು ದಿನಗಳ ಪ್ರವಾಸಕ್ಕಾಗಿ ಕೌಲಾಲಂಪುರಕ್ಕೆ ಪ್ರಯಾಣಿಸಲಿದ್ದಾರೆ. ೧೯೯೨ ರಲ್ಲಿ ವಲಯ ಪಾಲುದಾರಿಕೆ ಸ್ಥಾಪನೆಯೊಂದಿಗೆ ಆಸಿಯಾನ್-ಭಾರತ ಸಂವಾದ ಸಂಬಂಧಗಳು ಪ್ರಾರಂಭವಾದವು. ಇದು ಡಿಸೆಂಬರ್ ೧೯೯೫ ರಲ್ಲಿ ಪೂರ್ಣ ಸಂವಾದ ಪಾಲುದಾರಿಕೆಗೆ ಮತ್ತು ೨೦೦೨ ರಲ್ಲಿ ಶೃಂಗಸಭೆ ಮಟ್ಟದ ಪಾಲುದಾರಿಕೆಗೆ ಏರಿತು.ಈ ಸಂಬಂಧಗಳನ್ನು ೨೦೧೨ ರಲ್ಲಿ ಕಾರ್ಯತಂತ್ರದ ಪಾಲುದಾರಿಕೆಗೆ ಏರಿಸಲಾಯಿತು.

ಭಾರತ ಮತ್ತು ಆಸಿಯಾನ್ ನಡುವಿನ ದ್ವಿಪಕ್ಷೀಯ ಸಂಬಂಧಗಳು ಕಳೆದ ಕೆಲವು ವರ್ಷಗಳಿಂದ ಗಮನಾರ್ಹ ಏರಿಕೆಯನ್ನು ಕಂಡಿದ್ದು, ವ್ಯಾಪಾರ ಮತ್ತು ಹೂಡಿಕೆ ಹಾಗೂ ಭದ್ರತೆ ಮತ್ತು ರಕ್ಷಣಾ ಕ್ಷೇತ್ರಗಳಲ್ಲಿ ಸಹಕಾರವನ್ನು ಹೆಚ್ಚಿಸುವತ್ತ ಗಮನ ಹರಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

ಸಂಧಾನ ಯಶಸ್ವಿ : ಮುಷ್ಕರ ಹಿಂಪಡೆದ ವೈದ್ಯರು

 ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ನಾಳೆಯಿಂದ  (ಮಾರ್ಚ್ 11) ಕರೆ ನೀಡಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು…

5 hours ago

ಪರಿಷತ್‌ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ : ಜೆಡಿಎಸ್‌ಗೆ 1 ಸೀಟು

ಬೆಂಗಳೂರು : ಕರ್ನಾಟಕ ವಿಧಾನಪರಿಷತ್‌ನ ನಾಲ್ಕು ಕ್ಷೇತ್ರಗಳ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಮೈತ್ರಿ ಪಕ್ಷ ಜೆಡಿಎಸ್‌ಗೆ ಒಂದು…

7 hours ago

ಎಲ್‌ಪಿಜಿ ಸಿಲಿಂಡರ್‌ ವ್ಯತ್ಯಯ, ಬೆಲೆ ಏರಿಕೆ : ಬಾಯಿ ಬಿಡದ ಬಿಜೆಪಿ ; ಡಿ.ಕೆ.ಶಿವಕುಮಾರ್‌ ಆರೋಪ

ಬೆಂಗಳೂರು : ಅಂತರರಾಷ್ಟ್ರೀಯ ಮಹಿಳಾ ದಿನದಂದೆ ಗ್ಯಾಸ್ ಸಿಲಿಂಡರ್ ಬೆಲೆಯನ್ನ ಕೇಂದ್ರ ಸರ್ಕಾರ 60 ರೂಪಾಯಿ ಏರಿಕೆ ಮಾಡಿದೆ. ಜೊತೆಗೆ…

7 hours ago

ಹುಲಿ ದಾಳಿಗೆ ಹಸು ಬಲಿ ; ರೈತ ಪಾರು

ಗುಂಡ್ಲುಪೇಟೆ : ಜಮೀನಿನಲ್ಲಿ ಮೇಯುತ್ತಿದ್ದ ಹಸುವಿನ ಮೇಲೆ ಹುಲಿಯೊಂದು ದಾಳಿ ನಡೆಸಿದೆ. ಈ ವೇಳೆ ರೈತ ತನ್ನ ಹಸು ರಕ್ಷಿಸಲು…

7 hours ago

ಎಲ್‌ಪಿಜಿ ಕೊರತೆ | ಕೇಂದ್ರದಿಂದ 1955ರ ಕಾಯ್ದೆ ಜಾರಿ ; ಏನಿದು ಅಗತ್ಯ ಸರಕು ಕಾಯ್ದೆ?

ಹೊಸದಿಲ್ಲಿ : ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ಇಂಧನ ಪೂರೈಕೆಯ ಮೇಲೆ ಹೆಚ್ಚುತ್ತಿರುವ ಒತ್ತಡದ ನಡುವೆ, ದೇಶೀಯ ಇಂಧನ ಮಾರುಕಟ್ಟೆಯನ್ನು…

7 hours ago

ನ್ಯಾಯಾಂಗ ಭ್ರಷ್ಟಾಚಾರ ಕುರಿತ ಅಧ್ಯಾಯ ವಿವಾದ ; ಸಾರ್ವಜನಿಕ ಕ್ಷಮೆ ಯಾಚಿಸಿದ ಎನ್‌ಸಿಇಆರ್‌ಟಿ

ಹೊಸದಿಲ್ಲಿ : ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್ (ಎನ್‌ಸಿಇಆರ್‌ಟಿ) ಇತ್ತೀಚೆಗೆ ಪ್ರಕಟಿಸಿದ್ದ 8ನೇ ತರಗತಿಯ ಸಮಾಜ ವಿಜ್ಞಾನ…

8 hours ago