ದೇಶ- ವಿದೇಶ

ಮಲೇಷ್ಯಾ ಆಸಿಯಾನ್ ಶೃಂಗ ಸಭೆ : ವರ್ಚುವಲ್ ಆಗಿ ಮೋದಿ ಭಾಗಿ

ಹೊಸದಿಲ್ಲಿ : ಮುಂದಿನ ವಾರ ಮಲೇಷ್ಯಾದಲ್ಲಿ ನಡೆಯಲಿರುವ ಆಸಿಯಾನ್-ಭಾರತ ಶೃಂಗಸಭೆಯಲ್ಲಿ ವರ್ಚುವಲ್ ಆಗಿ ಭಾಗವಹಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಈ ವಿಷಯವನ್ನು ದೂರವಾಣಿ ಕರೆಯಲ್ಲಿ ಮೋದಿ ಮಲೇಷ್ಯಾದ ಪ್ರಧಾನಿ ಅನ್ವರ್ ಇಬ್ರಾಹಿಂ ಅವರಿಗೆ ಈ ವಿಷಯವನ್ನು ತಿಳಿಸಿದರು. ನನ್ನ ಆತ್ಮೀಯ ಸ್ನೇಹಿತ, ಮಲೇಷ್ಯಾದ ಪ್ರಧಾನಿ ಅನ್ವರ್ ಇಬ್ರಾಹಿಂ ಅವರೊಂದಿಗೆ ಆತ್ಮೀಯ ಸಂಭಾಷಣೆ ನಡೆಸಿದೆ. ಮಲೇಷ್ಯಾದ ಆಸಿಯಾನ್ ಅಧ್ಯಕ್ಷತೆಗಾಗಿ ಅವರನ್ನು ಅಭಿನಂದಿಸಿದೆ ಮತ್ತು ಮುಂಬರುವ ಶೃಂಗಸಭೆಗಳ ಯಶಸ್ಸಿಗೆ ಶುಭಾಶಯಗಳನ್ನು ತಿಳಿಸಿದೆ ಎಂದು ಮೋದಿ ಎಕ್ಸ್‌ನಲ್ಲಿ ತಿಳಿಸಿದ್ದಾರೆ.

ಆಸಿಯಾನ್-ಭಾರತ ಶೃಂಗಸಭೆಯಲ್ಲಿ ವರ್ಚುವಲ್ ಆಗಿ ಸೇರಲು ಮತ್ತು ಆಸಿಯಾನ್-ಭಾರತ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಆಳಗೊಳಿಸಲು ಎದುರು ನೋಡುತ್ತಿದ್ದೇನೆ ಎಂದು ಮೋದಿ ಹೇಳಿದರು.

ಇದನ್ನು ಓದಿ: ಕೇದಾರನಾಥ ದೇವಾಲಯ ಬಂದ್

ಆಸಿಯಾನ್ ಸಭೆಗಳು ಅಕ್ಟೋಬರ್ ೨೬-೨೮ರಿಂದ ನಿಗದಿಯಾಗಿವೆ. ಆಸಿಯಾನ್ ಗುಂಪಿನ ಸಂವಾದ ಪಾಲುದಾರರಾದ ಹಲವಾರು ದೇಶಗಳ ನಾಯಕರನ್ನು ಮಲೇಷ್ಯಾ ಆಹ್ವಾನಿಸಿದೆ. ಟ್ರಂಪ್ ಅಕ್ಟೋಬರ್ ೨೬ರಂದು ಎರಡು ದಿನಗಳ ಪ್ರವಾಸಕ್ಕಾಗಿ ಕೌಲಾಲಂಪುರಕ್ಕೆ ಪ್ರಯಾಣಿಸಲಿದ್ದಾರೆ. ೧೯೯೨ ರಲ್ಲಿ ವಲಯ ಪಾಲುದಾರಿಕೆ ಸ್ಥಾಪನೆಯೊಂದಿಗೆ ಆಸಿಯಾನ್-ಭಾರತ ಸಂವಾದ ಸಂಬಂಧಗಳು ಪ್ರಾರಂಭವಾದವು. ಇದು ಡಿಸೆಂಬರ್ ೧೯೯೫ ರಲ್ಲಿ ಪೂರ್ಣ ಸಂವಾದ ಪಾಲುದಾರಿಕೆಗೆ ಮತ್ತು ೨೦೦೨ ರಲ್ಲಿ ಶೃಂಗಸಭೆ ಮಟ್ಟದ ಪಾಲುದಾರಿಕೆಗೆ ಏರಿತು.ಈ ಸಂಬಂಧಗಳನ್ನು ೨೦೧೨ ರಲ್ಲಿ ಕಾರ್ಯತಂತ್ರದ ಪಾಲುದಾರಿಕೆಗೆ ಏರಿಸಲಾಯಿತು.

ಭಾರತ ಮತ್ತು ಆಸಿಯಾನ್ ನಡುವಿನ ದ್ವಿಪಕ್ಷೀಯ ಸಂಬಂಧಗಳು ಕಳೆದ ಕೆಲವು ವರ್ಷಗಳಿಂದ ಗಮನಾರ್ಹ ಏರಿಕೆಯನ್ನು ಕಂಡಿದ್ದು, ವ್ಯಾಪಾರ ಮತ್ತು ಹೂಡಿಕೆ ಹಾಗೂ ಭದ್ರತೆ ಮತ್ತು ರಕ್ಷಣಾ ಕ್ಷೇತ್ರಗಳಲ್ಲಿ ಸಹಕಾರವನ್ನು ಹೆಚ್ಚಿಸುವತ್ತ ಗಮನ ಹರಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

2 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

2 hours ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

2 hours ago

ಕಪ್ಪು ವರ್ಣೀಯರ ಕಣ್ಣೀರ ಕಥನ

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…

2 hours ago

ಯಶ್: ‘ಟಾಕ್ಸಿಕ್’ ಬೆನ್ನೇರಿದ ಯಶೋ ಮಾರ್ಗ

ವೈಡ್‌ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…

2 hours ago

ರೈತರ ಪಾಲಿಗೆ ಕಹಿಯಾದ ಸಿಹಿಗುಂಬಳ

ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ  ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…

2 hours ago