ದೇಶ- ವಿದೇಶ

ಪಹಲ್ಗಾಮ್‌ ಉಗ್ರರ ದಾಳಿ ಬಗ್ಗೆ ಚರ್ಚಿಸಲು ವಿಶೇಷ ಸಂಸತ್‌ ಅಧಿವೇಶನ ನಡೆಸಿ: ಮಲ್ಲಿಕಾರ್ಜುನ ಖರ್ಗೆ ಆಗ್ರಹ

ನವದೆಹಲಿ: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಉಗ್ರರ ಗುಂಡಿನ ದಾಳಿ ಕುರಿತು ಸುದೀರ್ಘವಾಗಿ ಚರ್ಚಿಸಲು ವಿಶೇಷ ಸಂಸತ್‌ ಅಧಿವೇಶನ ನಡೆಸುವಂತೆ ಆಗ್ರಹಿಸಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.

ಉಗ್ರರ ದಾಳಿಗೆ ಪ್ರತಿಕ್ರಿಯೆಯಾಗಿ ಸಂಸತ್ತಿನ ಎರಡೂ ಸದನಗಳ ವಿಶೇಷ ಅಧಿವೇಶನ ನಡೆಸಬೇಕು. ಈ ಅಧಿವೇಶನವು ದಾಳಿಯ ಬಗ್ಗೆ ಜಂಟಿ ನಿಲುವನ್ನು ವ್ಯಕ್ತಪಡಿಸಲು ಮತ್ತು ಪರಿಸ್ಥಿತಿ ನಿಭಾಯಿಸಲು ಸಾಮೂಹಿಕ ಸಂಕಲ್ಪವನ್ನು ಪ್ರದರ್ಶಿಸಲು ಒಂದು ವೇದಿಕೆಯಾಗಲಿದೆ.

ಹೆಚ್ಚಿನ ಸುದ್ದಿ:- ಪಾಕ್‌ನಿಂದ ಸತತ 5ನೇ ದಿನವೂ ಕದನ ವಿರಾಮ ಉಲ್ಲಂಘನೆ: ಭಾರತೀಯ ಸೇನೆ ದಿಟ್ಟ ಉತ್ತರ 

ಈ ಸಮಯದಲ್ಲಿ ಒಗ್ಗಟ್ಟು ಮತ್ತು ಏಕತೆಯ ಅಗತ್ಯವಿದೆ. ಹೀಗಾಗಿ ಸರ್ಕಾರ ಎರಡೂ ಸದನಗಳ ವಿಶೇಷ ಅಧಿವೇಶನವನ್ನು ಆದಷ್ಟು ಬೇಗನೇ ಕರೆಯಬೇಕು ಎಂದು ಪತ್ರದಲ್ಲಿ ಆಗ್ರಹಿಸಿದ್ದಾರೆ.

ಇದನ್ನೂ ಓದಿ:- ನಾವು ಬದುಕಬೇಕೆಂದರೆ ಯುದ್ಧ ಮಾಡಲೇಬೇಕು ಎಂದ ‘ಜೋಗಿ’ ಪ್ರೇಮ್‍

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಸಾಂಘಿಕ ಪ್ರದರ್ಶನದಿಂದ ಭಾರತದ ಮುಡಿಗೆ ಟಿ-೨೦ ವಿಶ್ವಕಪ್

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಟಿ-೨೦ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತ ತಂಡದ ಸಾಂಘಿಕ ಪ್ರದರ್ಶನದಿಂದ ನ್ಯೂಜಿಲೆಂಡ್…

2 hours ago

ಓದುಗರ ಪತ್ರ: ಅನುಭವಿ ಮೌಲ್ಯಮಾಪಕರಿಗೆ ಆದ್ಯತೆ ನೀಡಿ

ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ವಿದ್ಯಾರ್ಥಿಗಳು ವರ್ಷವಿಡೀ ಶ್ರದ್ಧೆಯಿಂದ ಓದಿ ಪರೀಕ್ಷೆ ಬರೆದರೂ ಪ್ರತಿ ವರ್ಷವೂ…

2 hours ago

ಓದುಗರ ಪತ್ರ: ಆಟೋ ಚಾಲಕರಿಂದ ಅರವಟ್ಟಿಗೆ ಸೌಲಭ್ಯ

ಬೇಸಿಗೆ ಆರಂಭವಾಗುತ್ತಿದ್ದಂತೆಯೇ ಬಿಸಿಲಿನ ತಾಪ ಹೆಚ್ಚಾಗಿ ಜನರು ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ಉಂಟಾಗುತ್ತದೆ. ಇಂತಹ ಸಂದರ್ಭದಲ್ಲಿ ಮೈಸೂರಿನ ರಾಮಸ್ವಾಮಿ…

2 hours ago

ಓದುಗರ ಪತ್ರ: ಯುದ್ಧ: ಎಂಎಲ್‌ಸಿಗೆ ಸ್ಪಂದಿಸದ ಕೇಂದ್ರ ಸರ್ಕಾರ?

ಇಸ್ರೇಲ್- ಅಮೆರಿಕ ಹಾಗೂ ಇರಾನ್ ನಡುವಿನ ಯುದ್ಧ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಭಾರತದಿಂದ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಿಂದ ಕಾರ್ಯನಿಮಿತ್ತ…

2 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಸ್ಲಮ್ ವಾಸಿಗಳಿಗೆ ಬದುಕು ಕಟ್ಟಿ ಕೊಟ್ಟ ಆರ್ಕಿಟೆಕ್ಟ್‌

ಕೊಳೆಗೇರಿಗಳ ೨೭,೦೦೦ ಮನೆಗಳಿಗೆ ಶೌಚಾಲಯ ಸೌಲಭ್ಯ ಪೂನಾದ ಇಂದಿರಾ ವಸಾಹತ್ ಎಂಬ ಪ್ರದೇಶದ ಒಂದು ಸ್ಲಮ್ಮಿನಲ್ಲಿ ವಾಸಿಸುವ ಲತಾ ರತನ್…

3 hours ago

ಮರಿಗಳೊಂದಿಗೆ ಹುಲಿ ಕಂಡು ಪುಳಕಿತರಾದ ಪ್ರವಾಸಿಗರು

ಮಹೇಂದ್ರ ಹಸಗೂಲಿ ತಾಯಿ ಹುಲಿ ನಾಪತ್ತೆಯಾಗಿದ್ದರಿಂದ ಮರಿಗಳನ್ನು ಪಾಲನೆ ಮಾಡಿದ್ದ ಅರಣ್ಯ ಇಲಾಖೆ  ಗುಂಡ್ಲುಪೇಟೆ: ಬಂಡೀಪುರದ ಸಫಾರಿಗೆ ಹೋಗಿದ್ದ ಪ್ರವಾಸಿಗರು…

3 hours ago