ನವದೆಹಲಿ: ಸಂಸತ್ ಭವನದ ಸಂಕೀರ್ಣದಲ್ಲಿ ಬಿಜೆಪಿ ಸಂಸದರು ನನ್ನನ್ನು ತಳ್ಳಿದ್ದಾರೆ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.
ಈ ಬಗ್ಗೆ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರ ಬರೆದಿರುವ ಮಲ್ಲಿಕಾರ್ಜುನ ಖರ್ಗೆ ಅವರು, ಇದು ನನ್ನ ಮೇಲೆ ನಡೆದ ಹಲ್ಲೆಯಲ್ಲ. ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಕಾಂಗ್ರೆಸ್ ಪಕ್ಷದ ಅಧ್ಯಕ್ಷರ ಮೇಲೆ ನಡೆದ ಹಲ್ಲೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಸಂಸತ್ ಭವನದ ಮಕರ ದ್ವಾರದ ಬಳಿ ಬಿಜೆಪಿ ಸಂಸದರು ನನ್ನನ್ನು ತಳ್ಳಿದ್ದಾರೆ. ನಿಯಂತ್ರಣ ತಪ್ಪಿ ನಾನು ಕೆಳಗೆ ಬಿದ್ದೆ. ಪರಿಣಾಮ ಈಗಾಗಲೇ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ನನ್ನ ಮೊಣಕಾಲುಗಳಿಗೆ ಗಂಭೀರ ಗಾಯ ಆಗಿದೆ ಎಂದು ಕಿಡಿಕಾರಿದ್ದಾರೆ.
ಈ ವೇಳೆ ನನ್ನನ್ನು ಕಾಂಗ್ರೆಸ್ ಸಂಸದರು ಸ್ಥಳಕ್ಕೆ ಕುರ್ಚಿ ತಂದು ಕೂರಿಸಿದರು. ನನ್ನ ಸಹೋದ್ಯೋಗಿಗಳ ನೆರವಿನಿಂದ ಕುಂಟುತ್ತಲೇ ಸದನಕ್ಕೆ ಬಂದೆ. ಈ ಬಗ್ಗೆ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.
ಈ ಬಗ್ಗೆ ಸ್ಪೀಕರ್ಗೆ ಬರೆದಿರುವ ಪತ್ರವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ಇನ್ನು ಸಂಸತ್ ಭವನದ ನಡುವೆ ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷಗಳ ಸಂಸದರ ನಡುವೆ ಮುಖಾಮುಖಿ ನಡೆದ ಪರಿಣಾಮ ಬಿಜೆಪಿ ಸಂಸದ ಪ್ರತಾಪ್ ಚಂದ್ರ ಸಾರಂಗಿ ಅವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ತಳ್ಳಿದ್ದರಿಂದಲೇ ಗಾಯ ಆಗಿದೆ ಎಂದು ಬಿಜೆಪಿ ಸಂಸದರು ಗಂಭೀರ ಆರೋಪ ಮಾಡಿದ್ದಾರೆ. ಆದರೆ ಈ ಆರೋಪವನ್ನು ರಾಗಾ ತಳ್ಳಿ ಹಾಕಿದ್ದಾರೆ.
ಬೆಂಗಳೂರು : ಸರ್ಕಾರಿ ಸೇವೆಯಲ್ಲಿದ್ದುಕೊಂಡು ನಿಯಮಗಳನ್ನು ಉಲ್ಲಂಘಿಸಿ ಆರ್ಎಸ್ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು…
ಶಾಸಕ ಜಿ.ಡಿ. ಹರೀಶ್ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…
89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…
ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…
ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್ನಲ್ಲಿ…
ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…