ನವದೆಹಲಿ: ಡಾ. ಮನಮೋಹನ್ ಸಿಂಗ್ ನಿಧನದ ಹಿನ್ನಲೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿಗೆ ಪತ್ರ ಬರೆದು ಸ್ಮಾರಕ ನಿರ್ಮಾಣಕ್ಕಾಗಿ ಮನವಿ ಮಾಡಿದ್ದಾರೆ.
ದೇಶದ ಅಭಿವೃದ್ದಿಯ ಹರಿಕಾರ, ದೇಶದ ಆರ್ಥಿಕತೆಗೆ ಡಾ. ಮನಮೋಹನ್ ಸಿಂಗ್ ಅವರ ಕೊಡುಗೆ ಗಣನೀಯವಾಗಿದೆ.
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಗವರ್ನರ್ ಆಗಿ ಆರ್ಥಿಕ ಹಾಗೂ ಹಣಕಾಸಿನ ವಿಷಯಗಳ ಕುರಿತಾಗಿ ಅವರು ತೆಗೆದುಕೊಂಡಿರುವ ನಿರ್ಣಯಗಳು ದೇಶ ಆರ್ಥಿಕತೆಯಲ್ಲಿ ಸಧೃಡವಾಗಿ ನಿಲ್ಲಲು ಕಾರಣವಾಗಿದೆ.
ಅಮೇರಿಕಾದ ಮಾಜಿ ಪ್ರಧಾನಿ ಬರಾಕ್ ಒಬಾಮಾ ಅವರು ಮನಮೋಹನ್ ಸಿಂಗ್ ಕುರಿತು, ಭಾರತದ ಪ್ರಧಾನಿ ಮಾತನಾಡಿದಾಗಲೆಲ್ಲಾ ಇಡೀ ಜಗತ್ತು ಅವರ ಮಾತನ್ನು ಕೇಳುತ್ತದೆ ಎಂದು ಮೆಚ್ಚುಗೆಯ ಮಾತಗಳನ್ನು ಆಡಿದ್ದಾರೆ.
ನಾಳೆ (ಡಿ.28) ನಿಗಮ್ಬೋಧ್ ಘಾಟ್ನಲ್ಲಿ ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ನಡೆಯಲಿದ್ದು, ಅಂತ್ಯಕ್ರಿಯೆ ಸ್ಥಳದಲ್ಲಿ ಅವರ ಸ್ಮಾರಕ ನಿರ್ಮಿಸಬೇಕೆಂದು ಮನವಿ ಮಾಡುತ್ತೇನೆ ಎಂದು ಪತ್ರದಲ್ಲಿ ವಿವರಿಸಿದ್ದಾರೆ.
ಜೀಪ್ ವ್ಯವಸ್ಥೆ ಮಾಡುವಂತೆ ತಹಸಿಲ್ದಾರ್ಗೆ ಮನವಿ ಮಾಡಿದ ಬಿಇಒ ಹನೂರು: ಹನೂರು ಶೈಕ್ಷಣಿಕ ವಲಯದ ಪಚ್ಚೆದೊಡ್ಡಿ ಗ್ರಾಮದ ಶಾಲೆಗೆ ಕ್ಷೇತ್ರ…
ಮಂಜು ಕೋಟೆ ಪ್ರತಿನಿತ್ಯ ಅಧಿಕಾರಿಗಳ ಬಳಿ ಅಲೆದಾಡುತ್ತಿರುವ ನೌಕರರು; ಕುಟುಂಬ ನಿರ್ವಹಣೆಗೆ ಪರದಾಟ ಎಚ್.ಡಿ.ಕೋಟೆ: ಪಟ್ಟಣದ ಪುರಸಭೆಯ ಪೌರಕಾರ್ಮಿಕರು ಮತ್ತು…
ಪುಸ್ತಕ ಪ್ರಿಯರಿಗಾಗಿ ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟ ಮೈಸೂರು: ವಿಶ್ವಕೋಶ, ಶಬ್ಧಕೋಶ, ಇಂಗ್ಲಿಷ್-ಕನ್ನಡ ನಿಘಂಟು, ಕನ್ನಡ-ಇಂಗ್ಲಿಷ್ ನಿಘಂಟು, ಕನ್ನಡ ಗ್ರಂಥಮಾಲೆ,…
ಕೆ.ಬಿ.ರಮೇಶನಾಯಕ ಅಕ್ಟೋಬರ್ ತಿಂಗಳ ಅಂತ್ಯಕ್ಕೆ ಶೇ.೮೨.೯೭ರಷ್ಟು ತೆರಿಗೆ ಸಂಗ್ರಹ ಮೈಸೂರು: ಗುತ್ತಿಗೆದಾರರಿಗೆ ಹಣ ಪಾವತಿಸಲಾಗದೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ಮೈಸೂರು…
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…