ದೇಶ- ವಿದೇಶ

ಅಹಮದಾಬಾದ್| ಕೇಂದ್ರ ಸರ್ಕಾರ ಇಡೀ ದೇಶವನ್ನು ಮಾರಿ ಹೊರ ನಡೆಯುತ್ತದೆ:  ಮಲ್ಲಿಕಾರ್ಜುನ ಖರ್ಗೆ ಕಿಡಿ

ಅಹಮದಾಬಾದ್:‌ ಕೇಂದ್ರ ಸರ್ಕಾರ ಇಡೀ ದೇಶವನ್ನು ಮಾರಿ ಹೊರ ನಡೆಯುತ್ತದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಅಹಮದಾಬಾದ್‍ನಲ್ಲಿ ನಡೆದ ಎಐಸಿಸಿ ಅಧಿವೇಶನದಲ್ಲಿ ಮಾತನಾಡಿದ ಅವರು, ಸಾರ್ವಜನಿಕ ಆಸ್ತಿಗಳನ್ನು ಮಾರಾಟ ಮಾಡಲಾಗುತ್ತಿದೆ. ಸರ್ಕಾರಿ ಉದ್ಯೋಗಗಳಲ್ಲಿ ಎಸ್‍ಸಿ, ಎಸ್‍ಟಿ ಮತ್ತು ಒಬಿಸಿಗಳಿಗೆ ಮೀಸಲಾತಿಯನ್ನು ದುರ್ಬಲಗೊಳಿಸಲಾಗುತ್ತಿದೆ. ಇದು ಹೀಗೆ ಮುಂದುವರಿದರೆ ಮೋದಿಜೀ ಇಡೀ ದೇಶವನ್ನು ಮಾರಿ ದೇಶ ತೊರೆದು ಹೋಗುತ್ತಾರೆ ಎಂದು ಕಿಡಿಕಾರಿದರು.

ವಿಮಾನ ನಿಲ್ದಾಣಗಳು, ಬಂದರುಗಳು, ಗಣಿಗಾರಿಕೆ, ಮಾಧ್ಯಮ ಎಲ್ಲವನ್ನೂ ಕೈಗಾರಿಕೋದ್ಯಮಿ ಸ್ನೇಹಿತರಿಗೆ ಹಸ್ತಾಂತರಿಸಲಾಗುತ್ತಿದೆ. ಇದು ರಾಷ್ಟ್ರೀಯ ಭದ್ರತೆಗೆ ಧಕ್ಕೆ ತಂದಿದೆ. ನಿರುದ್ಯೋಗದಿಂದ ಪಾರಾಗಲು ಶ್ರೀಮಂತರು ಮತ್ತು ಯುವಕರು ದೇಶ ತೊರೆಯುತ್ತಿದ್ದಾರೆ. ಶ್ರೀಮಂತರು ವಿದೇಶದಲ್ಲಿ ನೆಲೆಸುತ್ತಿದ್ದಾರೆ. ನಿರುದ್ಯೋಗದಿಂದ ಪಾರಾಗಲು ವಿದೇಶಕ್ಕೆ ಹೋದ ಯುವಕರನ್ನು ಸರಪಳಿಯಲ್ಲಿ ಬಂಧಿಸಿ ವಾಪಸ್ ಕಳುಹಿಸಲಾಗುತ್ತಿದೆ. ಆದರೂ ಪ್ರಧಾನಿ ನರೇಂದ್ರ ಮೋದಿ ಮೌನವಾಗಿದ್ದಾರೆ ಎಂದು ಕಿಡಿಕಾರಿದರು.

ಕೇಂದ್ರದ ಆಡಳಿತಾರೂಢ ಬಿಜೆಪಿ ಪಕ್ಷವು 2014ರ ನಂತರವೇ ಭಾರತದ ಅಭಿವೃದ್ಧಿ ಪ್ರಾರಂಭವಾಯಿತು ಎಂದು ಪದೇ ಪದೇ ಹೇಳಿಕೊಳ್ಳುತ್ತಿದೆ ಎಂದು ವ್ಯಂಗ್ಯವಾಡಿದ ಅವರು, ಚುನಾವಣಾ ಆಯೋಗ (ಇಸಿ) ಸೇರಿದಂತೆ ಯಾವುದೇ ಸಂಸ್ಥೆಯೂ ಪ್ರಧಾನಿಯಡಿ ಸುರಕ್ಷಿತವಾಗಿಲ್ಲ ಎಂದರು.

ವಿರೋಧ ಪಕ್ಷಗಳನ್ನು ಸೋಲಿಸಲು ಸಂಪೂರ್ಣ ಇವಿಎಂ ವ್ಯವಸ್ಥೆಯನ್ನು ಬಿಜೆಪಿ ವಿನ್ಯಾಸಗೊಳಿಸಿದೆ. ಚುನಾವಣಾ ವಂಚನೆ ನಡೆಯುತ್ತಿದೆ. ಅಭಿವೃದ್ಧಿ ಹೊಂದಿದ ದೇಶಗಳು ಬ್ಯಾಲೆಟ್ ಪೇಪರ್‍ಗಳಿಗೆ ಮರಳಿವೆ, ಆದರೆ ನಾವು ಮಾತ್ರ ಇವಿಎಂಗಳನ್ನು ಬಳಸುತ್ತಿದ್ದೇವೆ ಎಂದು ಕಿಡಿಕಾರಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ವಾಣಿಜ್ಯ ಮಂಡಳಿ: ಹೊಸ ಬಿರುಸು, ಗರಿಗೆದರಿದ ಕಲಾವಿದರ ಸಂಘ

ಚುನಾವಣೆ ಕಳೆದು ಚಲನಚಿತ್ರ ವಾಣಿಜ್ಯ ಮಂಡಳಿಗೆ ಹೊಸ ಭಾರವಾಹಿಗಳ ಆಯ್ಕೆ ಆಗಿದೆ. ನಟ, ನಿರ್ಮಾಪಕಿ ಜಯಮಾಲ ನೇತೃತ್ವದ ಆಡಳಿತ ಮಂಡಳಿ…

27 mins ago

ಹೀಲಿಯಂ ಗ್ಯಾಸ್ ಬಲೂನ್ ಮಾರಾಟಕ್ಕಿಲ್ಲ ಕಡಿವಾಣ

ಹಳ್ಳಿಗಳ ಹಬ್ಬ, ಜಾತ್ರೆಗಳಲ್ಲಿ ಬಲೂನ್‌ಗಳ ಮಾರಾಟ ಅವಘಡ ಸಂಭವಿಸಿದರೆ ಯಾರು ಹೊಣೆ? 2025ರ ವರ್ಷಾಂತ್ಯದಲ್ಲಿ ಮೈಸೂರಿನಲ್ಲಿ ನಡೆದಿದ್ದ ಸ್ಫೋಟ ಬಲೂನ್‌ಗಳಿಗೆ…

58 mins ago

ನಗರೀಕರಣದಿಂದ ಮಾದಗಳ್ಳಿ ಕೆರೆಗೆ ಕಂಟಕ

ಕುಕ್ಕರಹಳ್ಳಿ ಕೆರೆಯ ಜಲಮೂಲ ಉಳಿವಿಕೆ ಅಭಿಯಾನ ಅಭಿಯಾನಕ್ಕೆ ಹೆಚ್ಚುತ್ತಿರುವ ಜನಬೆಂಬಲ ನಾಲಾ ನಡಿಗೆ, ನಾಲಾ ಹಬ್ಬ ಆಚರಿಸಲು ನಿರ್ಧಾರ ಗಿರೀಶ್‌…

2 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಫೆಬ್ರವರಿ 13 ಶುಕ್ರವಾರ  

3 hours ago

T 20 World Cup : ನಮೀಬಿಯ ವಿರುದ್ಧ ಭಾರತಕ್ಕೆ 93 ರನ್‌ಗಳ ಭರ್ಜರಿ ಜಯ

ಹೊಸದಿಲ್ಲಿ : ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತ ತಂಡ ನಮೀಬಿಯಾ ವಿರುದ್ಧ…

12 hours ago

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯಕ್ಕೆ ಅನುಮತಿ : ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡಲಾಗಿದೆ ಎಂದು  ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸಚಿವ ಸಂಪುಟ…

12 hours ago