ಅಹಮದಾಬಾದ್: ಕೇಂದ್ರ ಸರ್ಕಾರ ಇಡೀ ದೇಶವನ್ನು ಮಾರಿ ಹೊರ ನಡೆಯುತ್ತದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಅಹಮದಾಬಾದ್ನಲ್ಲಿ ನಡೆದ ಎಐಸಿಸಿ ಅಧಿವೇಶನದಲ್ಲಿ ಮಾತನಾಡಿದ ಅವರು, ಸಾರ್ವಜನಿಕ ಆಸ್ತಿಗಳನ್ನು ಮಾರಾಟ ಮಾಡಲಾಗುತ್ತಿದೆ. ಸರ್ಕಾರಿ ಉದ್ಯೋಗಗಳಲ್ಲಿ ಎಸ್ಸಿ, ಎಸ್ಟಿ ಮತ್ತು ಒಬಿಸಿಗಳಿಗೆ ಮೀಸಲಾತಿಯನ್ನು ದುರ್ಬಲಗೊಳಿಸಲಾಗುತ್ತಿದೆ. ಇದು ಹೀಗೆ ಮುಂದುವರಿದರೆ ಮೋದಿಜೀ ಇಡೀ ದೇಶವನ್ನು ಮಾರಿ ದೇಶ ತೊರೆದು ಹೋಗುತ್ತಾರೆ ಎಂದು ಕಿಡಿಕಾರಿದರು.
ವಿಮಾನ ನಿಲ್ದಾಣಗಳು, ಬಂದರುಗಳು, ಗಣಿಗಾರಿಕೆ, ಮಾಧ್ಯಮ ಎಲ್ಲವನ್ನೂ ಕೈಗಾರಿಕೋದ್ಯಮಿ ಸ್ನೇಹಿತರಿಗೆ ಹಸ್ತಾಂತರಿಸಲಾಗುತ್ತಿದೆ. ಇದು ರಾಷ್ಟ್ರೀಯ ಭದ್ರತೆಗೆ ಧಕ್ಕೆ ತಂದಿದೆ. ನಿರುದ್ಯೋಗದಿಂದ ಪಾರಾಗಲು ಶ್ರೀಮಂತರು ಮತ್ತು ಯುವಕರು ದೇಶ ತೊರೆಯುತ್ತಿದ್ದಾರೆ. ಶ್ರೀಮಂತರು ವಿದೇಶದಲ್ಲಿ ನೆಲೆಸುತ್ತಿದ್ದಾರೆ. ನಿರುದ್ಯೋಗದಿಂದ ಪಾರಾಗಲು ವಿದೇಶಕ್ಕೆ ಹೋದ ಯುವಕರನ್ನು ಸರಪಳಿಯಲ್ಲಿ ಬಂಧಿಸಿ ವಾಪಸ್ ಕಳುಹಿಸಲಾಗುತ್ತಿದೆ. ಆದರೂ ಪ್ರಧಾನಿ ನರೇಂದ್ರ ಮೋದಿ ಮೌನವಾಗಿದ್ದಾರೆ ಎಂದು ಕಿಡಿಕಾರಿದರು.
ಕೇಂದ್ರದ ಆಡಳಿತಾರೂಢ ಬಿಜೆಪಿ ಪಕ್ಷವು 2014ರ ನಂತರವೇ ಭಾರತದ ಅಭಿವೃದ್ಧಿ ಪ್ರಾರಂಭವಾಯಿತು ಎಂದು ಪದೇ ಪದೇ ಹೇಳಿಕೊಳ್ಳುತ್ತಿದೆ ಎಂದು ವ್ಯಂಗ್ಯವಾಡಿದ ಅವರು, ಚುನಾವಣಾ ಆಯೋಗ (ಇಸಿ) ಸೇರಿದಂತೆ ಯಾವುದೇ ಸಂಸ್ಥೆಯೂ ಪ್ರಧಾನಿಯಡಿ ಸುರಕ್ಷಿತವಾಗಿಲ್ಲ ಎಂದರು.
ವಿರೋಧ ಪಕ್ಷಗಳನ್ನು ಸೋಲಿಸಲು ಸಂಪೂರ್ಣ ಇವಿಎಂ ವ್ಯವಸ್ಥೆಯನ್ನು ಬಿಜೆಪಿ ವಿನ್ಯಾಸಗೊಳಿಸಿದೆ. ಚುನಾವಣಾ ವಂಚನೆ ನಡೆಯುತ್ತಿದೆ. ಅಭಿವೃದ್ಧಿ ಹೊಂದಿದ ದೇಶಗಳು ಬ್ಯಾಲೆಟ್ ಪೇಪರ್ಗಳಿಗೆ ಮರಳಿವೆ, ಆದರೆ ನಾವು ಮಾತ್ರ ಇವಿಎಂಗಳನ್ನು ಬಳಸುತ್ತಿದ್ದೇವೆ ಎಂದು ಕಿಡಿಕಾರಿದರು.
ನಮ್ಮ ತಂದೆ ಪೋರ್ಬಂದರನ್ನು ಬಿಟ್ಟು ರಾಜ ಕೋಬಿಯ ರಾಜಾಸ್ಥಾನಿಕ ನ್ಯಾಯಾಲಯದ ಸದಸ್ಯರಾಗಿ ಹೊರಟಾಗ, ನನಗೆ ಕೇವಲ ಏಳು ವರ್ಷಗಳು. ಅಲ್ಲಿ…
ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ಬೆಂಗಳೂರಿನ ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಸಹಭಾಗಿತ್ವದಲಿ ಎಳೆಯ ಮಕಳ ಅಂಗಳಕೆ…
ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳು ಸೃಜನಶೀಲತೆಯ ವೇದಿಕೆಗಳಾಗುವ ಬದಲು ಹಣದಾಸೆಗಾಗಿ ಅಶ್ಲೀಲತೆಯನ್ನು ಪ್ರದರ್ಶಿಸುವ ಮಾರುಕಟ್ಟೆಗಳಾಗುತ್ತಿರುವುದು ಆತಂಕಕಾರಿ ವಿದ್ಯಮಾನ. ಪ್ರಭಾವಿ ವ್ಯಕ್ತಿಗಳು…
೮ ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಆದಿವಾಸಿ ಹೋರಾಟ ಸಮಿತಿ ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯಮೆದಗನಾಣೆ…
ಜಿಪಿಎಸ್ ವಾಕಿಟಾಕಿ ಇಲ್ಲದೆ ಚಾರಣಕ್ಕೆ ಅವಕಾಶವಿಲ್ಲ ಎಸ್ಒಪಿ ಬಿಡುಗಡೆ ಮಾಡಿದ ಸಚಿವ ಈಶ್ವರ್ ಖಂಡ್ರೆ ಬೆಂಗಳೂರು: ರಾಜ್ಯದಲ್ಲಿ ಅರಣ್ಯ ಇಲಾಖೆ…