ನವದೆಹಲಿ: ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು, ಅಯೋಧ್ಯೆಯಲ್ಲಿ ರಾಮ ಮಂದಿರ ಪ್ರತಿಷ್ಠಾಪನೆಗೊಂಡ ದಿನ ಭಾರತಕ್ಕೆ ನಿಜವಾದ ಸ್ವಾತಂತ್ರ್ಯ ದೊರಕಿತು ಎಂಬ ಹೇಳಿಕೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಖಂಡಿಸುವ ಮೂಲಕ ವಿರೋಧಿಸಿದ್ದಾರೆ.
ಈ ವಿಚಾರಕ್ಕೆ ಸಂಬಂಧಿದಂತೆ ಇಂದು(ಜನವರಿ.15) ಕಾರ್ಯಕ್ರಮವೊದರಲ್ಲಿ ಮಾತನಾಡಿದ ಅವರು, ಭಾಗವತ್ರವರು ಇಂತಹ ಹೇಳಿಕೆ ನೀಡುವುದನ್ನು ಮುಂದುವರೆಸಿದರೆ ದೇಶದಲ್ಲಿ ಸಾರ್ವಜನಿಕರು ತಿರುಗಾಡುವುದೂ ಕೂಡ ಕಷ್ಟವಾಗಬಹುದು ಎಂದು ವಾಗ್ದಾಳಿ ನಡೆಸಿದ್ದಾರೆ.
ಇನ್ನು ರಾಮ ಮಂದಿರ ಪ್ರತಿಷ್ಠಾಪನೆಗೊಂಡ ದಿನವೇ ಭಾರತಕ್ಕೆ ಸ್ವಾತಂತ್ರ್ಯ ಲಭಿಸಿತ್ತು ಎನ್ನುವುದಾದರೆ 1947ರಲ್ಲಿ ದೊರೆತ ಸ್ವಾತಂತ್ರ್ಯಕ್ಕಾಗಿ ನಡೆಸಿರುವ ಹೋರಾಟದ ಇತಿಹಾಸ ನೆನಪಿಲ್ಲವೇ, ಸ್ವಾತಂತ್ರ್ಯಕ್ಕಾಗಿ ಆರ್ಎಸ್ಎಸ್ ಹೋರಾಟ ನಡೆಸಿಲ್ಲವೇ ಎಂದು ಕಿಡಿಕಾರಿದ್ದಾರೆ.
ದೇಶದಲ್ಲಿನ 1947ರ ಸ್ವಾತಂತ್ರ್ಯಕ್ಕಾಗಿ ನೂರಾರರು ವರ್ಷಗಳ ಕಾಲ ಹೋರಾಟಗಾರರು ಪ್ರಾಣ ತ್ಯಾಗ ಮಾಡಿ ಹೋರಾಟ ನಡೆಸಿದ್ದಾರೆ. ಅವರ ಪ್ರಾಣ ತ್ಯಾಗ ಯಾವುದು ನೆನಪಿಲ್ಲವೇ? 1947ರಲ್ಲಿ ಸಿಕ್ಕ ಸ್ವಾತಂತ್ರ್ಯವನ್ನು ಒಪ್ಪಿಕೊಳ್ಳಲು ಸಿದ್ಧರಿಲ್ಲದಿರುವುದು ನಾಚಿಕೆ ಗೇಡಿನ ವಿಚಾರವಾಗಿದೆ. ಅಲ್ಲದೇ ಸ್ವಾತಂತ್ರ್ಯ ಹೋರಾಟದ ವೇಳೆ ಭಾಗವಹಿಸದೇ ಇರುವವರು ಇಂತಹ ಹೇಳಿಕೆಗಳನ್ನು ನಿಡುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್…
ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…
ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್ ಮೇಲೆ ಪೊಲೀಸರು…
ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್…
ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…
ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್ ತಿಂಗಳಿನಲ್ಲಿ ಮೂರನೇ…