ನವದೆಹಲಿ: ಉಪರಾಷ್ಟ್ರಪತಿ ಹಾಗೂ ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಕರ್ ವಿರುದ್ಧ ಇಂದು ಪ್ರತಿಪಕ್ಷಗಳು ಮತ್ತಷ್ಟು ವಾಗ್ದಾಳಿ ನಡೆಸಿವೆ.
ಮೇಲ್ಮನೆಯಲ್ಲಿ ಅತಡೆಗಡೆಗಳಿಗೆ ಅವರೇ ದೊಡ್ಡ ಕಾರಣ ಎಂದು ಗಂಭೀರ ಆರೋಪ ಮಾಡಿವೆ.
ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ರಾಜ್ಯಸಭಾ ಅಧ್ಯಕ್ಷರ ಕಾರ್ಯವೈಖರಿ ಅವರ ಸ್ಥಾನದ ಘನತೆಗೆ ವ್ಯತಿರಿಕ್ತವಾಗಿದೆ. ಅವರು ಪ್ರತಿಪಕ್ಷದ ನಾಯಕರನ್ನು ಗುರಿಯಾಗಿಸಿಕೊಂಡು ಆಗಾಗ್ಗೆ ಸರ್ಕಾರವನ್ನು ಹೊಗಳುತ್ತಾರೆ. ಅವರು ಸರ್ಕಾರದ ವಕ್ತಾರರಂತೆ ಕೆಲಸ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ಅವರ ಕಾರ್ಯವೈಖರಿಯಿಂದಾಗಿ ಅವರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವುದನ್ನು ಬಿಟ್ಟು ಪ್ರತಿಪಕ್ಷಗಳಿಗೆ ಬೇರೆ ಆಯ್ಕೆಯೇ ಇಲ್ಲ ಎಂದರು.
ನಾವು ಅವರ ನಡವಳಿಗೆ, ಪಕ್ಷಪಾತದಿಂದ ಬೇಸರಗೊಂಡಿದ್ದೇವೆ. ಸದನದಲ್ಲಿ ಸಭಾಪತಿಯವರ ನಡವಳಿಕೆಯು ದೇಶದ ಘನತೆಗೆ ಧಕ್ಕೆ ತಂದಿದೆ. ಅವರು ರಾಜ್ಯಸಭೆಯ ನಿಯಮಗಳಿಗಿಂತ ರಾಜಕೀಯಕ್ಕೆ ಆದ್ಯತೆ ನೀಡಿದ್ದಾರೆ ಎಂದು ದೂರಿದರು.
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…
ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ: ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…
ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…
ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…
ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…