ದೇಶ- ವಿದೇಶ

ಪ್ರಧಾನಿ ನರೇಂದ್ರ ಮೋದಿ ವರ್ತನೆ ಸರಿಯಲ್ಲ ಎಂದ ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು: ಜಮ್ಮು-ಕಾಶ್ಮೀರದ ಪಹಲ್ಗಾಮ್‌ ದಾಳಿ ವಿಚಾರವಾಗಿ ಸರ್ವಪಕ್ಷ ಸಭೆಗೆ ಹಾಜರಾಗದೇ ಪ್ರಧಾನಿ ಮೋದಿ ಅವರು ಚುನಾವಣಾ ಭಾಷಣ ಮಾಡಲು ಬಿಹಾರಕ್ಕೆ ಹೋಗುತ್ತಾರೆ. ಅವರ ವರ್ತನೆ ಸರಿಯಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಸಮಾಧಾನ ಹೊರಹಾಕಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, ಪಹಲ್ಗಾಮ್‌ ವಿಚಾರವಾಗಿ ಪ್ರಧಾನಿ ಸರ್ವಪಕ್ಷ ಸಭೆ ಕರೆದಿದ್ದರು. ಸಭೆಗೆ ಲೋಕಸಭೆ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕರೆಲ್ಲರೂ ಭಾಗಿಯಾಗಿದ್ದೆವು. ಸರ್ಕಾರದ ವತಿಯಿಂದ ಪ್ರಧಾನಿಗಳು ಹಾಜರಾಗಬೇಕಿತ್ತು. ಆದರೆ ಅವರ ಹಾಜರಾತಿ ಇರಲಿಲ್ಲ. ಪ್ರಧಾನಿಗಳ ಈ ವರ್ತನೆ ಸರಿಯಿಲ್ಲ ಎಂದು ಕಿಡಿಕಾರಿದರು.

ಇನ್ನು ಸ್ವತಃ ಕೇಂದ್ರ ಸರ್ಕಾರವೇ ಭದ್ರತಾ ವೈಫಲ್ಯವಾಗಿದೆ ಎಂದು ಒಪ್ಪಿಕೊಂಡಿದೆ. ಆ ಕಾರಣಕ್ಕಾಗಿ ಸರ್ವಪಕ್ಷ ಸಭೆ ಕರೆದಿದ್ದೇವೆ ಎಂದು ಅಮಿತ್‌ ಶಾ ಹೇಳಿದ್ದಾರೆ. ಹೀಗಾಗಿ ಘಟನೆಯನ್ನು ಸವಾಲಾಗಿ ತೆಗೆದುಕೊಳ್ಳಬೇಕು ಎಂದು ಹೇಳಿದ್ದೇವೆ ಎಂದರು.

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

2 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

2 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

2 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

2 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

2 hours ago