ದೇಶ- ವಿದೇಶ

ನೀಟ್‌ ರದ್ದತಿಗೆ ಒತ್ತಾಯಿಸಿ ಮೋದಿಗೆ ಪತ್ರ ಬರೆದ ಮಮತಾ

ಕೊಲ್ಕತ್ತಾ: ರಾಷ್ಟ್ರೀಯ ಅರ್ಹಾತ ಮತ್ತು ಪ್ರವೇಶ ಪರೀಕ್ಷೆಯನ್ನು(ಯುಜಿ-ಎನ್‌ಇಇಟಿ) ರದ್ದು ಮಾಡುವಂತೆ ಒತ್ತಾಯಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪಶ್ಚಿಮ ಬಂಗಳಾ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪತ್ರ ಬರೆದಿದ್ದಾರೆ.

ಇತ್ತೀಚೆಗೆ ನಡೆದ ಪರೀಕ್ಷೆಗಳ ಅಕ್ರಮಗಳ ಬಗ್ಗೆ ಮಮತಾ ಅವರು ಮೋದಿ ಅವರಿಗೆ ಪತ್ರ ಬರೆದಿದ್ದು, ಅಕ್ರಮದಲ್ಲಿ ಭಾಗಿಯಾಗಿರುವವ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಪತ್ರದಲ್ಲಿ ಒತ್ತಾಯಿಸಿದ್ದಾರೆ.

ಈ ಹಿಂದೆ ನೀಟ್‌ ಪ್ರವೇಶ ಪರೀಕ್ಷೆಯನ್ನು ಆಯಾ ರಾಜ್ಯಗಳೆ ನಡೆಸುತ್ತಿದ್ದವು. ಅದರಂತೆ ಹಿಂದಿನ ವ್ಯವಸ್ಥೆಗಳನ್ನೇ ಜಾರಿಗೊಳಿಸಿ ನೀಟ್‌ ಪರೀಕ್ಷೆಯನ್ನು ರದ್ದು ಮಾಡಬೇಕು. ಹೀಗೆ ಮಾಡುವುದರಿಂದ, ಪರೀಕ್ಷೆ ಅಕ್ರಮಗಳಿಗೆ ಕಡಿವಾಣ ಹಾಕಬಹುದು ಜೊತೆಗೆ ವ್ಯವಸ್ಥೆಯನ್ನು ಸಹಜಸ್ಥಿತಿಗೆ ತಂದು ವಿದ್ಯಾರ್ಥಿಗಳಲ್ಲಿ ವ್ಯವಸ್ಥೆಯ ಬಗ್ಗೆ ಭರವಸೆ ಮೂಡಿಸಬಹುದುಎ ಎಂದು ಬಲವಾಗಿ ಒತ್ತಾಯಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಟ್ರಂಪ್‌ ಭಾಷಣದ ಬೆನ್ನಲ್ಲೇ ಕಚ್ಚಾ ತೈಲದ ಬೆಲೆ ಭಾರೀ ಏರಿಕೆ

ವಾಷಿಂಗ್ಟನ್:‌ ಯುದ್ಧಕ್ಕೆ ಸಂಬಂಧಿಸಿದಂತೆ ಅಮೇರಿಕಾ ಪ್ರಜೆಗಳನ್ನು ಉದ್ದೇಶಿಸಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಭಾಷಣ ಮಾಡಿದ ಬೆನ್ನಲ್ಲೇ ಕಚ್ಚಾ ತೈಲದ ಬೆಲೆ…

9 mins ago

ಮಂಡ್ಯದಲ್ಲಿಂದು ವಿಶ್ವ ಹಿಂದೂ ಪರಿಷತ್‌ ಬೃಹತ್‌ ಶೋಭಾಯಾತ್ರೆ

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಇಂದು ವಿಶ್ವ ಹಿಂದೂ ಪರಿಷತ್‌ ವತಿಯಿಂದ ಶೋಭಾಯಾತ್ರೆ ಹಮ್ಮಿಕೊಳ್ಳಲಾಗಿದೆ. ನಗರದಾದ್ಯಂತ ಕೇಸರಿ ಬಾವುಟ, ಬ್ಯಾನರ್‌,…

27 mins ago

2 ಅಥವಾ ಮೂರು ವಾರಗಳಲ್ಲಿ ಯುದ್ಧ ಅಂತ್ಯ: ಡೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್:‌ ಇನ್ನು ಎರಡು ಅಥವಾ ಮೂರು ವಾರಗಳಲ್ಲಿ ಯುದ್ಧ ಅಂತ್ಯಗೊಳ್ಳಲಿದೆ ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿದ್ದಾರೆ. ದೇಶವನ್ನು…

56 mins ago

ಶ್ರೀ ಸಬ್ಬಮ್ಮ ನೆಲೆಯ ಮಲೆನಾಡಿನಾದ್ಯಂತ ಸುಗ್ಗಿ ಉತ್ಸವ ಶುರು

ಲಕ್ಷ್ಮಿಕಾಂತ್ ಕೊಮಾರಪ್ಪ ಗ್ರಾಮೀಣ ಭಾಗದಲ್ಲಿ ಮನೆಮಾಡಿದ ಸಂಭ್ರಮ; ಭಕ್ತಿ ಭಾವದಿಂದ ಪ್ರಕೃತಿ-ಗ್ರಾಮದೇವಿಗೆ ಪೂಜೆ ಸೋಮವಾರಪೇಟೆ: ಗ್ರಾಮೀಣ ಪ್ರದೇಶದ ಜನಪದದ ಪ್ರಮುಖ…

2 hours ago

ಚಾಮರಾಜನಗರದಲ್ಲಿ ನೀರಿನ ಸಮಸ್ಯೆ ಮುಂದೆ ಇನ್ನೂ ಉಲ್ಭಣ!

ಬೇಸಿಗೆ ತಾಪಮಾನದ ಪರಿಣಾಮವಾಗಿ ಜಿಲ್ಲೆಯಲ್ಲಿ ನೀರಿನ ಸಮಸ್ಯೆ ಹೆಚ್ಚಾಗಬಹುದು ಎಂದು ವರದಿ ನೀಡಿಕೆ... ಚಾಮರಾಜನಗರ: ಬೇಸಿಗೆಯ ತಾಪಮಾನದ ಪರಿಣಾಮವಾಗಿ ಕುಡಿಯುವ…

2 hours ago

ಚಂದಿರನತ್ತ ಮಾನವ: ಆರ್ಟೆಮಿಸ್‌-II ಮಿಷನ್‌ ಉಡಾವಣೆ ಯಶಸ್ವಿ

ಫ್ಲೋರಿಡಾ: 50 ವರ್ಷಗಳ ಬಳಿಕ ಚಂದಿರನ ಅನ್ವೇಷಣೆಗೆ ಹೊರಟಿರುವ ನಾಸಾ ಐತಿಹಾಸಿಕ ಆರ್ಟೆಮಿಸ್‌-II ಮಿಷನ್‌ ಉಡಾವಣೆ ಯಶಸ್ವಿಯಾಗಿದೆ. ಅಮೇರಿಕಾದ ಕಾಲಮಾನ…

2 hours ago