ಕೋಲ್ಕತ್ತಾ: ವಕ್ಫ್ ಮಸೂದೆ ಜಾತ್ಯಾತೀತ ವಿರೋಧಿಯಾಗಿದೆ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿಕಾರಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ವಕ್ಫ್ ಮಸೂದೆ ಸಂಬಂಧ ಕೇಂದ್ರ ಸರ್ಕಾರವು ರಾಜ್ಯಗಳ ಅಭಿಪ್ರಾಯ ಪಡೆದುಕೊಂಡಿಲ್ಲ.
ಈ ಮಸೂದೆಯು ಒಕ್ಕೂಟ ವ್ಯವಸ್ಥೆಯ ವಿರೋಧಿ ಮತ್ತು ಜಾತ್ಯಾತೀತತೆಯ ವಿರೋಧಿಯಾಗಿದೆ. ಒಂದು ನಿರ್ದಿಷ್ಟ ಸಮುದಾಯಕ್ಕೆ ಕೇಡನ್ನು ಉಂಟುಮಾಡುವ ಉದ್ದೇಶಿತ ಕೃತ್ಯ ಇದಾಗಿದೆ.
ಈ ಮಸೂದೆಯು ಮುಸ್ಲಿಮರ ಹಕ್ಕುಗಳನ್ನು ಕಸಿಯುತ್ತದೆ. ವಕ್ಫ್ ಮಸೂದೆ ಬಗ್ಗೆ ಕೇಂದ್ರವು ರಾಜ್ಯ ಸರ್ಕಾರಗಳ ಅಭಿಪ್ರಾಯ ಪಡೆದಿಲ್ಲ ಎಂದು ಕಿಡಿಕಾರಿದರು.
ಯಾವುದೇ ಧರ್ಮದ ಮೇಲೆ ದಾಳಿ ನಡೆದರೂ ನಾನು ಅದನ್ನು ಮನಃಪೂರ್ವಕವಾಗಿ ಖಂಡಿಸುತ್ತೇನೆ.
ಅಸ್ತಿತ್ವದಲ್ಲಿರುವ ವಕ್ಫ್ ಕಾಯ್ದೆಯಡಿ ತಿದ್ದುಪಡಿ ಮಸೂದೆಯ ಮೂಲಕ ಪ್ರಸ್ತಾಪಿಸಿರುವ ತಿದ್ದುಪಡಿಗಳನ್ನು ವಿರೋಧ ಪಕ್ಷಗಳು ಕಟುವಾಗಿ ಟೀಕೆ ಮಾಡಿವೆ.
ಇದು ಮುಸ್ಲಿಮರ ಧಾರ್ಮಿಕ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎಂದು ಆರೋಪಿಸಿದರು.
ಶುಭಾ ಖಟಾವಕರ ಮ್ಹೆತ್ರಸ್ 72,000 ಕೋಟಿ ರೂ.ಗಳಿಂದ 90,000 ಕೋಟಿ ರೂ.ವೆಚ್ಚದ ಯೋಜನೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ…
ರಾಜಕಾರಣಿಗಳು ಕೊನೆಗೂ ಕೇಳಿಕೊಳ್ಳಬೇಕಿರುವುದು ನೀವು ಯಾರೋ ಒಬ್ಬರ ಬದುಕು ಚಂದವಾಗಲು ಕಾರಣವಾದಿರಾ ಎಂಬ ಪ್ರಶ್ನೆ ಮಾತ್ರವೇ. ಅದೊಂದೇ ಸತ್ಯ. ಉಳಿದದ್ದೆಲ್ಲ…
ಸಂಗಾತಿಯ ಹಂಗಿಲ್ಲದೆ ಅಮ್ಮನಾದ ಖ್ಯಾತ ಚಿತ್ರತಾರೆ ಭಾವನಾ ರಾಮಣ್ಣ ಜೊತೆ ಮಾತುಕತೆ ನಿಮ್ಮ ವೃತ್ತಿಪರ ಒತ್ತಡಗಳ ನಡುವೆ…
ಮಡಿಕೇರಿ : ಕೊಡಗು ಜಿಲ್ಲಾ ಕೇಂದ್ರ ಮಡಿಕೇರಿ ನಗರಸಭೆಯಲ್ಲಿ ಸಿಬ್ಬಂದಿ ಕೊರತೆ ಕಾಡುತ್ತಿದೆ. ನಗರಸಭೆಯಲ್ಲಿ ಖಾಯಂ ಸಿಬ್ಬಂದಿ ಸಂಖ್ಯೆ ಕಡಿಮೆಯಿದ್ದು,…
ಎಚ್.ಡಿ.ಕೋಟೆ: ಅರೆ ಮಲೆನಾಡು ಎಂದೇ ಹೆಸರಾದ ತಾಲ್ಲೂಕಿನಲ್ಲಿ ತಡವಾಗಿ ಮಳೆ ಪ್ರಾರಂಭವಾದರೂ ಕಳೆದ ಒಂದು ವಾರದಿಂದ ಬೀಳುತ್ತಿರುವ ಉತ್ತಮ ಮಳೆಯಿಂದ…
ಚಾಮರಾಜನಗರ : ಚಾಮರಾಜನಗರ ವಿಶ್ವವಿದ್ಯಾನಿಲಯದಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವಿದ್ಯಾರ್ಥಿಗಳಿಗೆ ಪಿಎಚ್. ಡಿ. ಸಂಶೋಧನೆ ಮಾಡಲು ಅವಕಾಶ ಕಲ್ಪಿಸಲಾಗಿದ್ದು, ವಿದ್ಯಾರ್ಥಿ…