Cocaine worth Rs 40 crore seized: One arrested
ಶ್ರೀನಗರ : ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಏ.೨೨ರಂದು ಪಹಲ್ಗಾಮ್ ಭಯೋತ್ಪಾದಕ ದಾಳಿಯ ಉಗ್ರರಿಗೆ ಸಹಾಯ ಮಾಡಿದ್ದ ಜಮ್ಮು ಮತ್ತು ಕಾಶ್ಮೀರದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ೨೬ ವರ್ಷದ ಮೊಹಮದ್ ಯೂಸುಫ್ ಕಟಾರಿ ಎಂದು ಗುರುತಿಸಲಾಗಿದೆ. ಗುಪ್ತಚರ ಮಾಹಿತಿ ಮೇರೆಗೆ ದಕ್ಷಿಣ ಕಾಶೀರದ ಕುಲ್ಗಾಮ್ ಜಿಲ್ಲೆಯಲ್ಲಿ ಕಟಾರಿಯನ್ನು ಬಂಽಸಲಾಗಿದ್ದು, ವಿಚಾರಣೆ ವೇಳೆ ಜಮು-ಕಾಶ್ಮೀರದ ಪೊಲೀಸರು ಕಟಾರಿ ಬಗ್ಗೆ ಹಲವು ರಹಸ್ಯಗಳನ್ನು ಬಯಲಿಗೆಳೆದಿದ್ದಾರೆ.
ಯೂಸೂಫ್ ಕಟಾರಿ ಯಾರು? :
ಕುಲ್ಗಾಮ್ ಜಿಲ್ಲೆಯಲ್ಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಕಟಾರಿ, ಶಿಕ್ಷಕನಾಗಿಯೂ ಕೆಲಸ ಮಾಡ್ತಿದ್ದ. ಈತ ಪಾಕಿಸ್ತಾನದ ಲಷ್ಕರ್ ಎ ತೊಯ್ಬಾ ಭಯೋತ್ಪಾದಕ ಗುಂಪಿನೊಂದಿಗೆ ಸಂಪರ್ಕದಲ್ಲಿದ್ದ. ಏಪ್ರಿಲ್ ೨೨ರಂದು ನಡೆದ ಪಹಲ್ಗಾಮ್ ದಾಳಿಯಲ್ಲಿ ಭಾಗಿಯಾಗಿದ್ದ ಉಗ್ರರಿಗೆ ಎಲ್ಲಾ ರೀತಿಯ ಸಹಾಯ ಮಾಡಿದ್ದ ಎನ್ನುವುದು ಗೊತ್ತಾಗಿದೆ.
ಇದನ್ನೂ ಓದಿ:-ಕಲ್ಯಾಣ ಕರ್ನಾಟಕ | ಭೂಗರ್ಭ ಜಲಮಟ್ಟ ಹೆಚ್ಚಿಸುವ ಯೋಜನೆಗೆ ಚಿಂತನೆ: ಸಚಿವ ಎನ್ ಎಸ್ ಭೋಸರಾಜು
ಪಹಲ್ಗಾಮ್ ಉಗ್ರರನ್ನು ಕೆಲ ದಿನಗಳ ಹಿಂದೆ ನಡೆದ ಆಪರೇಷನ್ ಮಹಾದೇವ್ ಕಾರ್ಯಾಚರಣೆಯಲ್ಲಿ ಚಿನಾರ್ ಕಾರ್ಪಸ್ ಬೆಟಾಲಿಯನ್ ಹತ್ಯೆಗೈದಿತ್ತು. ಆ ಬಳಿಕ ಉಗ್ರರಿಗೆ ಸೇರಿದ್ದ ಉಪಕರಣಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಇದೆಲ್ಲದರ ವಿಶ್ಲೇಷಣೆಯ ಬಳಿಕ ಕಟಾರಿಯನ್ನು ಬಂಧಿಸಲಾಗಿದೆ.
ಮೇ ೨೨ರಿಂದ ೨-೩ ವಾರಗಳ ಕಾಲ ಸತತವಾಗಿ ಆಪರೇಷನ್ ಮಹಾದೇವ್ ಕಾರ್ಯಾಚರಣೆ ನಡೆಸಲಾಯಿತು. ಈ ವೇಳೆ ಶ್ರೀನಗರ ಬಳಿಯ ದಚಿಗಮ್ ಅರಣ್ಯ ಪ್ರದೇಶದಲ್ಲಿ ಉಗ್ರರನ್ನು ಹತ್ಯೆಗೈಯಲಾಗಿತ್ತು. ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೇರಿ ಮೂವರು ಭಯೋತ್ಪಾದಕರು ಕಾರ್ಯಾಚರಣೆಯಲ್ಲಿ ಹತ್ಯೆಯಾಗಿದ್ದರು. ಹತ್ಯೆಗೀಡಾದ ಉಗ್ರರ ಬಳಿಯಿದ್ದ ಎಕೆ-೪೭ ರೈಫಲ್ ಹಾಗೂ ಎಂ -೯ ಅಸಾಲ್?ಟ ರೈಫಲ್ಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಬಳಿಕ ಆ ರೈಫಲ್ಗಳನ್ನು ಪಹಲ್ಗಾಮ್ ದಾಳಿಯಲ್ಲಿ ಬಳಕೆ ಮಾಡಲಾಗಿದೆ ಎನ್ನುವುದು ಚಂಡೀಗಢದ ಪ್ರಯೋಗಾಲಯದಲ್ಲಿ ಪರೀಕ್ಷೆ ನಡೆಸಿದ ಬಳಿಕ ಗೊತ್ತಾಗಿದೆ.
ಹನೂರು: ತಾಲ್ಲೂಕಿನ ಮಾರ್ಟಳ್ಳಿ ಸಮೀಪದ ವಡ್ಡರದೊಡ್ಡಿ ಗ್ರಾಮದಲ್ಲಿ ಮನೆಯೊಂದರಲ್ಲಿ ಕಳ್ಳತನ ನಡೆದಿರುವ ಕುರಿತು ವರದಿಯಾಗಿದೆ. ಗ್ರಾಮದ ನಿವಾಸಿ ಸೆಲ್ವಂ ಅವರು…
ಹೊಸದಿಲ್ಲಿ: ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರು ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ…
ಗುಂಡ್ಲುಪೇಟೆ: ಪಟ್ಟಣದ ಹೊರವಲಯದ ಕಲ್ಯಾಣಿ ಕೊಳದ ಬಳಿ ಸೇತುವೆಯಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ನಡೆದಿದೆ. ಮಂಡ್ಯ ಮೂಲದ…
ಸೋಮವಾರಪೇಟೆ: ಶಾಂತಳ್ಳಿ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ಮತ್ತೆ ಮುಂದುವರೆದಿದ್ದು, ಬೆಳೆ ನಷ್ಟದ ಪ್ರಮಾಣ ಹೆಚ್ಚಾಗುತ್ತಿದೆ. ಕಳೆದ ಎರಡು…
ಬೆಂಗಳೂರು: ರಾಜ್ಯದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್.28ರವರೆಗೂ ಕರ್ನಾಟಕದಲ್ಲಿ ಮಳೆ…
ನವದೆಹಲಿ: ನೀಟ್ ಮರು ಪರೀಕ್ಷೆ ಅಂಗವಾಗಿ ಭಾರತದಲ್ಲಿ ಟೆಲಿಗ್ರಾಂ ಮೇಲೆ ಹೇರಲಾಗಿದ್ದ ನಿಷೇಧವನ್ನು ತೆರವುಗೊಳಿಸಲಾಗಿದೆ. ಸದ್ಯ ಪ್ಲೇ ಸ್ಟೋರ್ ಹಾಗೂ…