ದೇಶ- ವಿದೇಶ

ಪಹಲ್ಗಾಮ್‌ ದಾಳಿ ವೇಳೆ ಉಗ್ರರಿಗೆ ನೆರವು ನೀಡಿದ್ದ ವ್ಯಕ್ತಿ ಬಂಧನ

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಏ.೨೨ರಂದು ಪಹಲ್ಗಾಮ್ ಭಯೋತ್ಪಾದಕ ದಾಳಿಯ ಉಗ್ರರಿಗೆ ಸಹಾಯ ಮಾಡಿದ್ದ ಜಮ್ಮು ಮತ್ತು ಕಾಶ್ಮೀರದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ೨೬ ವರ್ಷದ ಮೊಹಮದ್ ಯೂಸುಫ್ ಕಟಾರಿ ಎಂದು ಗುರುತಿಸಲಾಗಿದೆ. ಗುಪ್ತಚರ ಮಾಹಿತಿ ಮೇರೆಗೆ ದಕ್ಷಿಣ ಕಾಶೀರದ ಕುಲ್ಗಾಮ್ ಜಿಲ್ಲೆಯಲ್ಲಿ ಕಟಾರಿಯನ್ನು ಬಂಽಸಲಾಗಿದ್ದು, ವಿಚಾರಣೆ ವೇಳೆ ಜಮು-ಕಾಶ್ಮೀರದ ಪೊಲೀಸರು ಕಟಾರಿ ಬಗ್ಗೆ ಹಲವು ರಹಸ್ಯಗಳನ್ನು ಬಯಲಿಗೆಳೆದಿದ್ದಾರೆ.

ಯೂಸೂಫ್ ಕಟಾರಿ ಯಾರು? :
ಕುಲ್ಗಾಮ್ ಜಿಲ್ಲೆಯಲ್ಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಕಟಾರಿ, ಶಿಕ್ಷಕನಾಗಿಯೂ ಕೆಲಸ ಮಾಡ್ತಿದ್ದ. ಈತ ಪಾಕಿಸ್ತಾನದ ಲಷ್ಕರ್ ಎ ತೊಯ್ಬಾ ಭಯೋತ್ಪಾದಕ ಗುಂಪಿನೊಂದಿಗೆ ಸಂಪರ್ಕದಲ್ಲಿದ್ದ. ಏಪ್ರಿಲ್ ೨೨ರಂದು ನಡೆದ ಪಹಲ್ಗಾಮ್ ದಾಳಿಯಲ್ಲಿ ಭಾಗಿಯಾಗಿದ್ದ ಉಗ್ರರಿಗೆ ಎಲ್ಲಾ ರೀತಿಯ ಸಹಾಯ ಮಾಡಿದ್ದ ಎನ್ನುವುದು ಗೊತ್ತಾಗಿದೆ.

ಇದನ್ನೂ ಓದಿ:-ಕಲ್ಯಾಣ ಕರ್ನಾಟಕ | ಭೂಗರ್ಭ ಜಲಮಟ್ಟ ಹೆಚ್ಚಿಸುವ ಯೋಜನೆಗೆ ಚಿಂತನೆ: ಸಚಿವ ಎನ್ ಎಸ್ ಭೋಸರಾಜು

ಪಹಲ್ಗಾಮ್ ಉಗ್ರರನ್ನು ಕೆಲ ದಿನಗಳ ಹಿಂದೆ ನಡೆದ ಆಪರೇಷನ್ ಮಹಾದೇವ್ ಕಾರ್ಯಾಚರಣೆಯಲ್ಲಿ ಚಿನಾರ್ ಕಾರ್ಪಸ್ ಬೆಟಾಲಿಯನ್ ಹತ್ಯೆಗೈದಿತ್ತು. ಆ ಬಳಿಕ ಉಗ್ರರಿಗೆ ಸೇರಿದ್ದ ಉಪಕರಣಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಇದೆಲ್ಲದರ ವಿಶ್ಲೇಷಣೆಯ ಬಳಿಕ ಕಟಾರಿಯನ್ನು ಬಂಧಿಸಲಾಗಿದೆ.‌

ಮೇ ೨೨ರಿಂದ ೨-೩ ವಾರಗಳ ಕಾಲ ಸತತವಾಗಿ ಆಪರೇಷನ್ ಮಹಾದೇವ್ ಕಾರ್ಯಾಚರಣೆ ನಡೆಸಲಾಯಿತು. ಈ ವೇಳೆ ಶ್ರೀನಗರ ಬಳಿಯ ದಚಿಗಮ್ ಅರಣ್ಯ ಪ್ರದೇಶದಲ್ಲಿ ಉಗ್ರರನ್ನು ಹತ್ಯೆಗೈಯಲಾಗಿತ್ತು. ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೇರಿ ಮೂವರು ಭಯೋತ್ಪಾದಕರು ಕಾರ್ಯಾಚರಣೆಯಲ್ಲಿ ಹತ್ಯೆಯಾಗಿದ್ದರು. ಹತ್ಯೆಗೀಡಾದ ಉಗ್ರರ ಬಳಿಯಿದ್ದ ಎಕೆ-೪೭ ರೈಫಲ್ ಹಾಗೂ ಎಂ -೯ ಅಸಾಲ್?ಟ ರೈಫಲ್‌ಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಬಳಿಕ ಆ ರೈಫಲ್‌ಗಳನ್ನು ಪಹಲ್ಗಾಮ್ ದಾಳಿಯಲ್ಲಿ ಬಳಕೆ ಮಾಡಲಾಗಿದೆ ಎನ್ನುವುದು ಚಂಡೀಗಢದ ಪ್ರಯೋಗಾಲಯದಲ್ಲಿ ಪರೀಕ್ಷೆ ನಡೆಸಿದ ಬಳಿಕ ಗೊತ್ತಾಗಿದೆ.

ಆಂದೋಲನ ಡೆಸ್ಕ್

Recent Posts

ಆಪರೇಷನ್‌ ಸಿಂಧೂರಕ್ಕೆ ಒಂದು ವರ್ಷ: ಇನ್ನೂ ಚೇತರಿಸಿಕೊಳ್ಳದ ಪಾಕ್‌

ನವದೆಹಲಿ: ಕುಟುಂಬದೊಂದಿಗೆ ಪ್ರವಾಸದಲ್ಲಿದ್ದ 26 ಜೀವಗಳನ್ನು ಬಲಿ ಪಡೆದ ಉಗ್ರರಿಗೆ ತಕ್ಕ ಪಾಠ ಕಲಿಸಿದ ಆಪರೇಷನ್‌ ಸಿಂಧೂರಕ್ಕೆ ಒಂದು ವರ್ಷವಾಗಿದೆ.…

10 mins ago

ಡಿಕೆಶಿಗೆ ಸಿಎಂ ಕುರ್ಚಿ ಮೇಲೆ ಆಸೆ ಇರೋದು ನಿಜ: ಮಾಜಿ ಸಚಿವ ಕೆ.ಎನ್.ರಾಜಣ್ಣ

ಮೈಸೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಸಿಎಂ ಕುರ್ಚಿ ಮೇಲೆ ಆಸೆ ಇರುವುದು ನಿಜ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ.…

46 mins ago

ಮೈಸೂರಿನಲ್ಲಿ ಮುಂದುವರಿದ ಕಾಡುಪ್ರಾಣಿಗಳ ಉಪಟಳ

ಮೈಸೂರು: ಮೈಸೂರಿನಲ್ಲಿ ಕಾಡುಪ್ರಾಣಿಗಳ ಉಪಟಳ ಮುಂದುವರಿದಿದ್ದು, ಚಿರತೆಯೊಂದ ನಾಯಿ ಬೇಟೆಯಾಡಿರುವ ಘಟನೆ ಗೌರಿಶಂಕರನಗರದ ಗವಿಮಠದ ಹತ್ತಿರ ನಡೆದಿದೆ. ರಾತ್ರೋರಾತ್ರಿ ಚಿರತೆಯೊಂದು…

2 hours ago

ಓದುಗರ ಪತ್ರ: ಚಿನ್ನದ ಹೆಸರಿನಲ್ಲಾಗುವ ವಂಚನೆಯನ್ನು ತಡೆಗಟ್ಟಿ

ಚಿನ್ನದ ಹೂಡಿಕೆಯ ಹೆಸರಿನಲ್ಲಿ ನಡೆಯುತ್ತಿರುವ ವಂಚನೆ ಅತ್ಯಂತ ಸಂಕೀರ್ಣವೂ ಮತ್ತು ವ್ಯವಸ್ಥಿತವೂ ಆಗಿದೆ. ವಂಚಕರು ಮುಖ್ಯವಾಗಿ ಪೊಂಜಿ ಮಾದರಿಯ ಯೋಜನೆಗಳನ್ನು…

2 hours ago

ಓದುಗರ ಪತ್ರ: ವಿಜಯ್ ಉತ್ತಮ ಆಡಳಿತ ನೀಡಲಿ

ತಮಿಳುನಾಡಿನ ‘ತಮಿಳಿಗ ವೆಟ್ರಿ ಕಳಗಂ’ ಪಕ್ಷದ ಸ್ಥಾಪಕ ಜೋಸೆಫ್ ವಿಜಯ್ ಅವರು ಕೇವಲ ಎರಡು ವರ್ಷಗಳ ಹಿಂದೆ ರಾಜಕೀಯ ಪಕ್ಷ…

2 hours ago

ಓದುಗರ ಪತ್ರ: ಖಾಸಗಿ ಅಂಗಡಿಗಳ ಮಾಲೀಕರಿಂದ ರಸ್ತೆ ಅತಿಕ್ರಮಣ

ಮೈಸೂರು ನಗರದ ಅಶೋಕ ರಸ್ತೆ, ದೇವರಾಜ ಅರಸು ರಸ್ತೆ, ಸಯ್ಯಾಜಿರಾವ್ ರಸ್ತೆ, ಧನ್ವಂತರಿ ರಸ್ತೆ, ಶಿವರಾಂ ಪೇಟೆಯ ಹಲವಾರು ಕಡೆಗಳಲ್ಲಿ…

2 hours ago