ದೇಶ- ವಿದೇಶ

ಪಹಲ್ಗಾಮ್‌ ದಾಳಿ ವೇಳೆ ಉಗ್ರರಿಗೆ ನೆರವು ನೀಡಿದ್ದ ವ್ಯಕ್ತಿ ಬಂಧನ

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಏ.೨೨ರಂದು ಪಹಲ್ಗಾಮ್ ಭಯೋತ್ಪಾದಕ ದಾಳಿಯ ಉಗ್ರರಿಗೆ ಸಹಾಯ ಮಾಡಿದ್ದ ಜಮ್ಮು ಮತ್ತು ಕಾಶ್ಮೀರದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ೨೬ ವರ್ಷದ ಮೊಹಮದ್ ಯೂಸುಫ್ ಕಟಾರಿ ಎಂದು ಗುರುತಿಸಲಾಗಿದೆ. ಗುಪ್ತಚರ ಮಾಹಿತಿ ಮೇರೆಗೆ ದಕ್ಷಿಣ ಕಾಶೀರದ ಕುಲ್ಗಾಮ್ ಜಿಲ್ಲೆಯಲ್ಲಿ ಕಟಾರಿಯನ್ನು ಬಂಽಸಲಾಗಿದ್ದು, ವಿಚಾರಣೆ ವೇಳೆ ಜಮು-ಕಾಶ್ಮೀರದ ಪೊಲೀಸರು ಕಟಾರಿ ಬಗ್ಗೆ ಹಲವು ರಹಸ್ಯಗಳನ್ನು ಬಯಲಿಗೆಳೆದಿದ್ದಾರೆ.

ಯೂಸೂಫ್ ಕಟಾರಿ ಯಾರು? :
ಕುಲ್ಗಾಮ್ ಜಿಲ್ಲೆಯಲ್ಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಕಟಾರಿ, ಶಿಕ್ಷಕನಾಗಿಯೂ ಕೆಲಸ ಮಾಡ್ತಿದ್ದ. ಈತ ಪಾಕಿಸ್ತಾನದ ಲಷ್ಕರ್ ಎ ತೊಯ್ಬಾ ಭಯೋತ್ಪಾದಕ ಗುಂಪಿನೊಂದಿಗೆ ಸಂಪರ್ಕದಲ್ಲಿದ್ದ. ಏಪ್ರಿಲ್ ೨೨ರಂದು ನಡೆದ ಪಹಲ್ಗಾಮ್ ದಾಳಿಯಲ್ಲಿ ಭಾಗಿಯಾಗಿದ್ದ ಉಗ್ರರಿಗೆ ಎಲ್ಲಾ ರೀತಿಯ ಸಹಾಯ ಮಾಡಿದ್ದ ಎನ್ನುವುದು ಗೊತ್ತಾಗಿದೆ.

ಇದನ್ನೂ ಓದಿ:-ಕಲ್ಯಾಣ ಕರ್ನಾಟಕ | ಭೂಗರ್ಭ ಜಲಮಟ್ಟ ಹೆಚ್ಚಿಸುವ ಯೋಜನೆಗೆ ಚಿಂತನೆ: ಸಚಿವ ಎನ್ ಎಸ್ ಭೋಸರಾಜು

ಪಹಲ್ಗಾಮ್ ಉಗ್ರರನ್ನು ಕೆಲ ದಿನಗಳ ಹಿಂದೆ ನಡೆದ ಆಪರೇಷನ್ ಮಹಾದೇವ್ ಕಾರ್ಯಾಚರಣೆಯಲ್ಲಿ ಚಿನಾರ್ ಕಾರ್ಪಸ್ ಬೆಟಾಲಿಯನ್ ಹತ್ಯೆಗೈದಿತ್ತು. ಆ ಬಳಿಕ ಉಗ್ರರಿಗೆ ಸೇರಿದ್ದ ಉಪಕರಣಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಇದೆಲ್ಲದರ ವಿಶ್ಲೇಷಣೆಯ ಬಳಿಕ ಕಟಾರಿಯನ್ನು ಬಂಧಿಸಲಾಗಿದೆ.‌

ಮೇ ೨೨ರಿಂದ ೨-೩ ವಾರಗಳ ಕಾಲ ಸತತವಾಗಿ ಆಪರೇಷನ್ ಮಹಾದೇವ್ ಕಾರ್ಯಾಚರಣೆ ನಡೆಸಲಾಯಿತು. ಈ ವೇಳೆ ಶ್ರೀನಗರ ಬಳಿಯ ದಚಿಗಮ್ ಅರಣ್ಯ ಪ್ರದೇಶದಲ್ಲಿ ಉಗ್ರರನ್ನು ಹತ್ಯೆಗೈಯಲಾಗಿತ್ತು. ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೇರಿ ಮೂವರು ಭಯೋತ್ಪಾದಕರು ಕಾರ್ಯಾಚರಣೆಯಲ್ಲಿ ಹತ್ಯೆಯಾಗಿದ್ದರು. ಹತ್ಯೆಗೀಡಾದ ಉಗ್ರರ ಬಳಿಯಿದ್ದ ಎಕೆ-೪೭ ರೈಫಲ್ ಹಾಗೂ ಎಂ -೯ ಅಸಾಲ್?ಟ ರೈಫಲ್‌ಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಬಳಿಕ ಆ ರೈಫಲ್‌ಗಳನ್ನು ಪಹಲ್ಗಾಮ್ ದಾಳಿಯಲ್ಲಿ ಬಳಕೆ ಮಾಡಲಾಗಿದೆ ಎನ್ನುವುದು ಚಂಡೀಗಢದ ಪ್ರಯೋಗಾಲಯದಲ್ಲಿ ಪರೀಕ್ಷೆ ನಡೆಸಿದ ಬಳಿಕ ಗೊತ್ತಾಗಿದೆ.

ಆಂದೋಲನ ಡೆಸ್ಕ್

Recent Posts

911 ಅಕ್ರಮ ವಿದೇಶಿ ನುಸುಳುಕೋರರು ಪತ್ತೆ : ಗೃಹ ಸಚಿವ ಖರ್ಗೆ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…

5 hours ago

ಕಾವೇರಿ ವನ್ಯಧಾಮದಲ್ಲಿ 8 ಕಳ್ಳಬೇಟೆ ಶಿಬಿರ ಧ್ವಂಸ : ಎಫ್‌ಐಆರ್ ದಾಖಲು, ತನಿಖೆ ಚುರುಕು

ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…

6 hours ago

1984 ಸಿಖ್‌ ವಿರೋಧಿ ದಂಗೆ ಪ್ರಕರಣ; ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಸಜ್ಜನ್‌ ಕುಮಾರ್‌ ನಿಧನ

ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…

8 hours ago

ನಾರಾಯಣಸ್ವಾಮಿಗೆ ಕಮಾಂಡೆಂಟ್‌ ಬೆಳ್ಳಿ ಪದಕ

ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…

8 hours ago

ಹನೂರು ಎನ್‌ಕೌಂಟರ್‌ ಬೆನ್ನಲ್ಲೇ ಕಳ್ಳಬೇಟೆ ಕಡಿವಾಣಕ್ಕೆ ಸರ್ಕಾರದ ಚಿಂತನೆ

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್‌ಕೌಂಟರ್‌ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…

12 hours ago

ಟೋಲ್ ಬಳಿ ಸೈನ್ ಬೋರ್ಡ್‌ಗೆ ಖಾಸಗಿ ಬಸ್ ಡಿಕ್ಕಿ; ಇಬ್ಬರು ದುರ್ಮರಣ, 20ಕ್ಕೂ ಹೆಚ್ಚು ಜನರಿಗೆ ಗಾಯ

ಮಂಡ್ಯ: ಟೋಲ್‌ ಬಳಿಯ ಸೈನ್ ಬೋರ್ಡ್‌ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ…

12 hours ago