ದೇಶ- ವಿದೇಶ

ಮುಖೇಶ್ ಅಂಬಾನಿ ಕುಟುಂಬಕ್ಕೆ ಬೆದರಿಕೆ ಕರೆ ಮಾಡಿದ್ದ ವ್ಯಕ್ತಿಯ ಬಂಧನ

ಮುಂಬೈ: ಉದ್ಯಮಿ ಮುಖೇಶ್ ಅಂಬಾನಿ ಮತ್ತು ಅವರ ಕುಟುಂಬಕ್ಕೆ ಸೋಮವಾರ ಬೆದರಿಕೆ ಕರೆ ಮಾಡಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ. ಶಂಕಿತ ಆರೋಪಿಯನ್ನು ದಕ್ಷಿಣ ಮುಂಬೈಯ ಜ್ಯುವೆಲ್ಲರ್, ವಿಷ್ಣು ಭೌಮಿಕ್ ಎಂದು ಗುರುತಿಸಲಾಗಿದೆ. ಈತ ಕರೆ ಮಾಡುವಾಗ ಅಫ್ಜಲ್ ಎಂದು ಹೆಸರು ಹೇಳಿದ್ದ. ಸೋಮವಾರ ಎರಡು ಗಂಟೆ ಅವಧಿಯಲ್ಲಿ ಭೌಮಿಕ್ 8 ಬಾರಿ ಕರೆ ಮಾಡಿದ್ದ ಎಂದು ಪೊಲೀಸರು ಹೇಳಿದ್ದಾರೆ. 56ರ ಹರೆಯದ ಭೌಮಿಕ್ ಒಂದು ಬಾರಿ ಕರೆ ಮಾಡಿದಾಗ ಧೀರೂಬಾಯಿ ಅಂಬಾನಿ ಹೆಸರನ್ನೂ ಉಲ್ಲೇಖಿಸಿದ್ದ ಎಂದು ಪೊಲೀಸರು ಹೇಳಿದ್ದಾರೆ. ಆರೋಪಿ ದಹೀಸರ್ ನಿವಾಸಿಯಾಗಿದ್ದು ಈತನ ಕ್ರಿಮಿನಲ್ ರೆಕಾರ್ಡ್ ಪೊಲೀಸರು ಪರಿಶೀಲಿಸುತ್ತಿದ್ದಾರೆ. ಸೋಮವಾರ ಅಂಬಾನಿ ಕುಟುಂಬಕ್ಕೆ ಹಲವಾರು ಬೆದರಿಕೆ ಕರೆಗಳು ಬಂದಿತ್ತು.ರಿಲಯನ್ಸ್ ಫೌಂಡೇಷನ್ ನ ಹರ್ಕಿಸನ್ ದಾಸ್ ಆಸ್ಪತ್ರೆಯ ಫೋನ್ ನಂಬರ್ ಗೆ ಬೆಳಗ್ಗೆ 10.30ರ ಹೊತ್ತಿಗೆ ಕರೆ ಬಂದಿತ್ತು. ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಖೇಶ್ ಅಂಬಾನಿ ಮತ್ತು ಕುಟುಂಬಕ್ಕೆ ಬೆದರಿಕೆ ಕರೆ ಬಂದ ಹಿನ್ನಲೆಯಲ್ಲಿ ರಿಲಯನ್ಸ್ ಫೌಂಡೇಷನ್ ದೂರು ದಾಖಲಿಸಿತ್ತು. ಆಸ್ಪತ್ರೆಯ ಸಂಖ್ಯೆಗೆ ಮೂರಕ್ಕಿಂತ ಹೆಚ್ಚು ಬಾರಿ ಕರೆ ಬಂದಿತ್ತು. ತನಿಖೆ ಪ್ರಗತಿಯಲ್ಲಿದೆ ಎಂದು ಮುಂಬೈ ಪೊಲೀಸ್ ಹೇಳಿದ್ದಾರೆ.

ಈ ಪ್ರಕರಣ ಬಗ್ಗೆ ಕೆಲವು ಕೇಂದ್ರೀಯ ಸಂಸ್ಥೆಗಳು ಮಾಹಿತಿ ಕೇಳಿವೆ ಎಂದು ಪೊಲೀಸರು ಹೇಳಿದ್ದಾರೆ. ಶಂಕಿತ ಆರೋಪಿ ಮುಖೇಶ್ ಅಂಬಾನಿಗೆ ಬೆದರಿಕೆ ಕರೆ ನೀಡ ನಿಂದಿಸಿದ್ದಾನೆ. ಬೆದರಿಕೆ ಮತ್ತು ಅಪರಾಧ ಕೃತ್ಯವೆಸಗಿದ್ದಕ್ಕಾಗಿ ಸೆಕ್ಷನ್ 506(2) ಅಡಿಯಲ್ಲಿ ಆತನನ್ನು ಬಂಧಿಸಲಾಗಿದೆ ಎಂದು ಡಿಸಿಪಿ ನಿಲೋತ್ಪಲ್ ಹೇಳಿರುವುದಾಗಿ ಇಂಡಿಯಾ ಟುಡೇ ವರದಿ ಮಾಡಿದೆ.

ಕಳೆದ ವರ್ಷ ಅಂಬಾನಿ ನಿವಾಸದ ಬಳಿ ಸ್ಕಾರ್ಪಿಯೊ ಕಾರಿನಲ್ಲಿ 20 ಸ್ಫೋಟಕ ಜೆಲೆಟಿನ್ ಕಡ್ಡಿ ಮತ್ತು ಬೆದರಿಕೆ ಪತ್ರ ಪತ್ತೆಯಾಗಿತ್ತು. ಪೊಲೀಸರು ಇದರ ಬಗ್ಗೆ ತನಿಖೆ ನಡೆಸಿದಾಗ ಕಾರಿನ ಮಾಲೀಕ ಥಾಣೆ ಮೂಲದ ಮನ್ಸುಖ್ ಹಿರೇನ್ ಎಂಬುದು ತಿಳಿದುಬಂದಿದ್ದು, ಈತನ ಶವ ಪತ್ತೆಯಾಗಿತ್ತು. ಅಂತಿಮವಾಗಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವು ಪೊಲೀಸ್ ಅಧಿಕಾರಿಗಳು ಸೇರಿದಂತೆ ಮಾಸ್ಟರ್ ಮೈಂಡ್ ಅನ್ನು ಬಂಧಿಸಲಾಯಿತು.

andolana

Recent Posts

ರಾಜ್ಯದಲ್ಲಿ ಇನ್ಮುಂದೆ ದ್ವೇಷ ಭಾಷಣ ಮಾಡಿದ್ರೆ 5000 ದಂಡ, 3 ವರ್ಷ ಜೈಲು ಶಿಕ್ಷೆ

ಬೆಂಗಳೂರು: ರಾಜ್ಯದಲ್ಲಿ ದ್ವೇಷ ಭಾಷಣ ಮಾಡಿದರೆ 3 ವರ್ಷ ಜೈಲು ಶಿಕ್ಷೆ ಫಿಕ್ಸ್‌ ಆಗಿದೆ. ವಿಧಾನಸಭೆಯಲ್ಲಿ ಇಂದು ಮಸೂದೆ ಮಂಡನೆ…

11 mins ago

ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮೇಜರ್‌ ಟ್ವಿಸ್ಟ್‌

ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ಚಿನ್ನಯ್ಯ ಆರೋಪಿಸಿದ್ದ ಹಿನ್ನೆಲೆಯಲ್ಲಿ ಎಸ್‌ಐಟಿ ತನಿಖೆ ವೇಳೆ ಸ್ಪೋಟಕ ಮಾಹಿತಿ ಬಯಲಾಗಿದೆ. ಹಣದ…

19 mins ago

ಗ್ಯಾರಂಟಿಗಳ ಬಗ್ಗೆ ಸಿಎಲ್‌ಪಿಯಲ್ಲಿ ಚರ್ಚೆಯೇ ಆಗಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಳಗಾವಿ: ಗ್ಯಾರಂಟಿಗಳ ಬಗ್ಗೆ ಸಿಎಲ್‌ಪಿಯಲ್ಲಿ ಚರ್ಚೆಯೇ ಆಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು. ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಗೆ ಶಾಸಕರು…

30 mins ago

ಎಸ್.ನಿಜಲಿಂಗಪ್ಪನವರು ಕರ್ನಾಟಕ ಕಂಡ ಅಪರೂಪದ ರಾಜಕಾರಣಿ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ನಿಜಲಿಂಗಪ್ಪನವರು ಒಬ್ಬ ದಕ್ಷ, ಪ್ರಾಮಾಣಿಕ ವ್ಯಕ್ತಿ. ಕರ್ನಾಟಕ ಕಂಡ ಅಪರೂಪದ ರಾಜಕಾರಣಿಯಾಗಿದ್ದು ಕೊನೆಯವರೆಗೂ ಪ್ರಾಮಾಣಿಕವಾಗಿ ಇದ್ದವರು ಎಂದು ಮುಖ್ಯಮಂತ್ರಿ…

45 mins ago

ಶಾಸಕಾಂಗ ಪಕ್ಷದ ಸಭೆಯಲ್ಲಿ ಯಾರೂ ಗ್ಯಾರಂಟಿ ಯೋಜನೆ ವಿರೋಧಿಸಿಲ್ಲ: ಸಚಿವ ಚಲುವರಾಯಸ್ವಾಮಿ

ಬೆಳಗಾವಿ: ಶಾಸಕಾಂಗ ಪಕ್ಷದ ಸಭೆಯಲ್ಲಿ ಯಾರೂ ಕೂಡ ಗ್ಯಾರಂಟಿ ಯೋಜನೆಗಳನ್ನು ವಿರೋಧ ಮಾಡಿಲ್ಲ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ.…

56 mins ago

ಕೊಡಗು| ಆಸ್ತಿ ವಿಚಾರಕ್ಕೆ ಕಲಹ: ಅಣ್ಣನ ಮಗನ ಮೇಲೆ ಗುಂಡಿನ ದಾಳಿ

ಕೊಡಗು: ಆಸ್ತಿ ವಿಚಾರಕ್ಕೆ ಅಣ್ಣನ ಮಗನ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಕಾವಾಡಿಯಲ್ಲಿ ನಡೆದಿದೆ.…

1 hour ago