ದೇಶ- ವಿದೇಶ

ಮುಖೇಶ್ ಅಂಬಾನಿ ಕುಟುಂಬಕ್ಕೆ ಬೆದರಿಕೆ ಕರೆ ಮಾಡಿದ್ದ ವ್ಯಕ್ತಿಯ ಬಂಧನ

ಮುಂಬೈ: ಉದ್ಯಮಿ ಮುಖೇಶ್ ಅಂಬಾನಿ ಮತ್ತು ಅವರ ಕುಟುಂಬಕ್ಕೆ ಸೋಮವಾರ ಬೆದರಿಕೆ ಕರೆ ಮಾಡಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ. ಶಂಕಿತ ಆರೋಪಿಯನ್ನು ದಕ್ಷಿಣ ಮುಂಬೈಯ ಜ್ಯುವೆಲ್ಲರ್, ವಿಷ್ಣು ಭೌಮಿಕ್ ಎಂದು ಗುರುತಿಸಲಾಗಿದೆ. ಈತ ಕರೆ ಮಾಡುವಾಗ ಅಫ್ಜಲ್ ಎಂದು ಹೆಸರು ಹೇಳಿದ್ದ. ಸೋಮವಾರ ಎರಡು ಗಂಟೆ ಅವಧಿಯಲ್ಲಿ ಭೌಮಿಕ್ 8 ಬಾರಿ ಕರೆ ಮಾಡಿದ್ದ ಎಂದು ಪೊಲೀಸರು ಹೇಳಿದ್ದಾರೆ. 56ರ ಹರೆಯದ ಭೌಮಿಕ್ ಒಂದು ಬಾರಿ ಕರೆ ಮಾಡಿದಾಗ ಧೀರೂಬಾಯಿ ಅಂಬಾನಿ ಹೆಸರನ್ನೂ ಉಲ್ಲೇಖಿಸಿದ್ದ ಎಂದು ಪೊಲೀಸರು ಹೇಳಿದ್ದಾರೆ. ಆರೋಪಿ ದಹೀಸರ್ ನಿವಾಸಿಯಾಗಿದ್ದು ಈತನ ಕ್ರಿಮಿನಲ್ ರೆಕಾರ್ಡ್ ಪೊಲೀಸರು ಪರಿಶೀಲಿಸುತ್ತಿದ್ದಾರೆ. ಸೋಮವಾರ ಅಂಬಾನಿ ಕುಟುಂಬಕ್ಕೆ ಹಲವಾರು ಬೆದರಿಕೆ ಕರೆಗಳು ಬಂದಿತ್ತು.ರಿಲಯನ್ಸ್ ಫೌಂಡೇಷನ್ ನ ಹರ್ಕಿಸನ್ ದಾಸ್ ಆಸ್ಪತ್ರೆಯ ಫೋನ್ ನಂಬರ್ ಗೆ ಬೆಳಗ್ಗೆ 10.30ರ ಹೊತ್ತಿಗೆ ಕರೆ ಬಂದಿತ್ತು. ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಖೇಶ್ ಅಂಬಾನಿ ಮತ್ತು ಕುಟುಂಬಕ್ಕೆ ಬೆದರಿಕೆ ಕರೆ ಬಂದ ಹಿನ್ನಲೆಯಲ್ಲಿ ರಿಲಯನ್ಸ್ ಫೌಂಡೇಷನ್ ದೂರು ದಾಖಲಿಸಿತ್ತು. ಆಸ್ಪತ್ರೆಯ ಸಂಖ್ಯೆಗೆ ಮೂರಕ್ಕಿಂತ ಹೆಚ್ಚು ಬಾರಿ ಕರೆ ಬಂದಿತ್ತು. ತನಿಖೆ ಪ್ರಗತಿಯಲ್ಲಿದೆ ಎಂದು ಮುಂಬೈ ಪೊಲೀಸ್ ಹೇಳಿದ್ದಾರೆ.

ಈ ಪ್ರಕರಣ ಬಗ್ಗೆ ಕೆಲವು ಕೇಂದ್ರೀಯ ಸಂಸ್ಥೆಗಳು ಮಾಹಿತಿ ಕೇಳಿವೆ ಎಂದು ಪೊಲೀಸರು ಹೇಳಿದ್ದಾರೆ. ಶಂಕಿತ ಆರೋಪಿ ಮುಖೇಶ್ ಅಂಬಾನಿಗೆ ಬೆದರಿಕೆ ಕರೆ ನೀಡ ನಿಂದಿಸಿದ್ದಾನೆ. ಬೆದರಿಕೆ ಮತ್ತು ಅಪರಾಧ ಕೃತ್ಯವೆಸಗಿದ್ದಕ್ಕಾಗಿ ಸೆಕ್ಷನ್ 506(2) ಅಡಿಯಲ್ಲಿ ಆತನನ್ನು ಬಂಧಿಸಲಾಗಿದೆ ಎಂದು ಡಿಸಿಪಿ ನಿಲೋತ್ಪಲ್ ಹೇಳಿರುವುದಾಗಿ ಇಂಡಿಯಾ ಟುಡೇ ವರದಿ ಮಾಡಿದೆ.

ಕಳೆದ ವರ್ಷ ಅಂಬಾನಿ ನಿವಾಸದ ಬಳಿ ಸ್ಕಾರ್ಪಿಯೊ ಕಾರಿನಲ್ಲಿ 20 ಸ್ಫೋಟಕ ಜೆಲೆಟಿನ್ ಕಡ್ಡಿ ಮತ್ತು ಬೆದರಿಕೆ ಪತ್ರ ಪತ್ತೆಯಾಗಿತ್ತು. ಪೊಲೀಸರು ಇದರ ಬಗ್ಗೆ ತನಿಖೆ ನಡೆಸಿದಾಗ ಕಾರಿನ ಮಾಲೀಕ ಥಾಣೆ ಮೂಲದ ಮನ್ಸುಖ್ ಹಿರೇನ್ ಎಂಬುದು ತಿಳಿದುಬಂದಿದ್ದು, ಈತನ ಶವ ಪತ್ತೆಯಾಗಿತ್ತು. ಅಂತಿಮವಾಗಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವು ಪೊಲೀಸ್ ಅಧಿಕಾರಿಗಳು ಸೇರಿದಂತೆ ಮಾಸ್ಟರ್ ಮೈಂಡ್ ಅನ್ನು ಬಂಧಿಸಲಾಯಿತು.

andolana

Recent Posts

ನಾಳೆ ಸಿಎಂ ಡಿ.ಕೆ.ಶಿವಕುಮಾರ್‌ರಿಂದ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು: ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…

10 hours ago

ದಯವಿಟ್ಟು ಕರ್ನಾಟಕ ಬಂದ್‌ ಕೈಬಿಡಿ: ಸಿಎಂ ಡಿಕೆಶಿ ನಮ್ರತೆಯ ಮನವಿ

ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್‌ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸರ್ಕಾರದ ಪರವಾಗಿ ನಮ್ರತೆಯ ಮನವಿ…

11 hours ago

ಮುಂದುವರಿದ ಕಾವೇರಿ ಕಿಚ್ಚು: ಆಗಸ್ಟ್.‌13ರಂದು ಕರ್ನಾಟಕ ಬಂದ್‌

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ CWRC, CWMA ಆದೇಶ ವಿರೋಧಿಸಿ ರಾಜ್ಯದಲ್ಲಿ ರೈತರ ಹೋರಾಟ ಭುಗಿಲೆದ್ದಿದೆ. ರೈತರ…

11 hours ago

ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…

11 hours ago

ಮೂರನೇ ಆಷಾಢ ಶುಕ್ರವಾರದ ಸಂಭ್ರಮ: ನಾಡದೇವಿಗೆ ಗಜಲಕ್ಷ್ಮೀ ಅಲಂಕಾರ

ಮೈಸೂರು: ಇಂದು ಆಷಾಢ ಮಾಸದ ಮೂರನೇ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡದೇವತೆ ಚಾಮುಂಡೇಶ್ವರಿಗೆ ಗಜಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಆಷಾಢ ಮಾಸದ…

12 hours ago

ಓದುಗರ ಪತ್ರ: ಕಾವೇ..ರಿ

ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…

20 hours ago