ದೇಶ- ವಿದೇಶ

ಪ್ರಧಾನಿ ನರೇಂದ್ರ ಮೋದಿ ಮನ್‌ ಕಿ ಬಾತ್‌ ಕಾರ್ಯಕ್ರಮದ 117ನೇ ಸಂಚಿಕೆ

ನವದೆಹಲಿ: ಮುಂದೆ ನಡೆಯುವ ಮಹಾಕುಂಭ ಮೇಳವು ದೇಶದಲ್ಲಿ ಏಕತೆಯ ಭಾವವನ್ನು ಬಿತ್ತಿ, ದ್ವೇಷ ಮತ್ತು ಸಮಾಜ ವಿಭಜನೆಯನ್ನು ತೊಡೆದು ಹಾಕುವ ಧಾರ್ಮಿಕ ಸಭೆಯಾಗಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆಕೊಟ್ಟಿದ್ದಾರೆ.

ಇಂದು ತಮ್ಮ ಮಾಸಿಕ ಮನ್‌ ಕಿ ಬಾತ್‌ ರೇಡಿಯೋ ಕಾರ್ಯಕ್ರಮದ 117ನೇ ಸಂಚಿಕೆಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಇಡೀ ದೇಶವನ್ನು ಒಗ್ಗೂಡಿಸುವುದು ಈ ಮಹಾಕುಂಭ ಮೇಳದ ಬಹುಮುಖ್ಯ ಸಂದೇಶವಾಗಿರಬೇಕು ಎಂದರು.

ಪ್ರತಿ 12 ವರ್ಷಕ್ಕೊಮ್ಮೆ ಈ ಮಹಾ ಕುಂಭಮೇಳ ನಡೆಯಲಿದೆ. ಈ ಬಾರಿ ಜನವರಿ.13 ರಂದು ಪ್ರಯಾಗ್‌ರಾಜ್‌ನಲ್ಲಿ ಈ ಬೃಹತ್‌ ಧಾರ್ಮಿಕ ಕಾರ್ಯಕ್ರಮ ನಡೆಸಲಾಗುತ್ತಿದೆ.

ಈ ಕುಂಭ ಮೇಳದಲ್ಲಿ ಭಾಗವಹಿಸುವ ಜನತೆಯನ್ನು ಉದ್ದೇಶಿಸಿ ʼವಿವಿಧತೆಯಲ್ಲಿ ಏಕತೆʼ ಎಂಬುದು ನಮ್ಮ ದೇಶದ ವೈಶಿಷ್ಟ್ಯ. ಇದನ್ನು ಪ್ರಚಾರ ಮಾಡುವುದಕ್ಕಿಂತ ಬೇರೆ ವಿಷಯ ಯಾವುದು ಇಲ್ಲ ಸಂತಸ ವ್ಯಕ್ತಪಡಿಸಿದರು.

ಮುಂದಿನ ಗಣರಾಜ್ಯೋತ್ಸವಕ್ಕೆ ಭಾರತದ ಸಂವಿಧಾನ ಜಾರಿಯಾಗಿ 75ನೇ ವಾರ್ಷಿಕೋತ್ಸವ ಆಗಿದೆ. ಸಂವಿಧಾನದಿಂದಲೇ ನಾನು ಈ ಸ್ಥಾನಕ್ಕೆ ಬರಲು ಸಾಧ್ಯವಾಯಿತು. ಸಂವಿಧಾನ ಜಾರಿಯಾದ ದಿನದಿಂದ ಇಲ್ಲಿಯವರೆಗೂ ಪ್ರತಿಯೊಬ್ಬ ವ್ಯಕ್ತಿಗೂ ಮಾರ್ಗದರ್ಶನ ನೀಡುವ ಬೆಳಕಾಗಿದೆ ಎಂದರು.

ಜನರನ್ನು ಸಂವಿಧಾನದ ನಿಬಂಧನೆಗಳು ಮತ್ತು ಆತ್ಮದೊಂದಿಗೆ ಸಂಪರ್ಕಿಸಲು constitution75.com ಎಂಬ ವೆಬ್‌ಸೈಟ್‌ ಪ್ರಾರಂಭಿಸಲಾಗಿದೆ ಎಂದು ಮಾಹಿತಿ ನೀಡಿದ ಅವರು, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಸಂವಿಧಾನವನ್ನು ದುರ್ಬಲಗೊಳಿಸುತ್ತಿದೆ ಎಂಬ ವಿರೋಧ ಪಕ್ಷಗಳ ಆರೋಪಗಳನ್ನು ತಳ್ಳಿಹಾಕಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಸಾಂವಿಧಾನಿಕ ಮೌಲ್ಯಗಳು ಮತ್ತು ಚೈತನ್ಯವನ್ನು ಬಲಪಡಿಸುವ ತಮ್ಮ ಸರ್ಕಾರದ ಪ್ರಯತ್ನಗಳು ನಿರಂತರವಾಗಿವೆ. ಕಾಂಗ್ರೆಸ್‌ ಅಧಿಕಾರದಲ್ಲಿದ್ದಾಗ ದೇಶದ ಮಾರ್ಗದರ್ಶಿ ದಾಖಲೆಯನ್ನೇ ಬುಡಮೇಲು ಮಾಡಿದ್ದರು ಎಂದು ಆರೋಪಿಸಿದರು.

 

ಆಂದೋಲನ ಡೆಸ್ಕ್

Recent Posts

ಶೀಘ್ರದಲ್ಲೇ ದ್ವಿತೀಯ ಪಿಯುಸಿ ಫಲಿತಾಂಶ : ಡಿಜಿಲಾಕರ್‌ನಲ್ಲೂ ಲಭ್ಯ

ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಡೆಸಿದ 2025-2026ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ…

52 mins ago

ಏ.7ರಿಂದ ಮೂರು ದಿನ ಮಳೆ, ಮೈಸೂರಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು : ಕರ್ನಾಟಕದಲ್ಲಿ ಪೂರ್ವ ಮುಂಗಾರು ಏಪ್ರಿಲ್ 2 ನೇ ವಾರದಿಂದ ಚುರುಕಾಗುತ್ತಿದ್ದು, ಏಪ್ರಿಲ್ 7ರಿಂದ ಮೂರು ದಿನಗಳು ರಾಜ್ಯದಲ್ಲಿ…

1 hour ago

ಟ್ರಂಪ್ ಅಂತಿಮ ಗಡುವು ; ಪ್ರತಿದಾಳಿ ಎಚ್ಚರಿಕೆ ನೀಡಿದ ಇರಾನ್‌

ವಾಷಿಂಗ್ಟನ್ : ಒಪ್ಪಂದಕ್ಕೆ ಬನ್ನಿ, ಇಲ್ಲವೇ ಶರಣಾಗಿ, ಇಲ್ಲದಿದ್ದರೆ ಮಂಗಳವಾರ ರಾತ್ರಿ 8 ಗಂಟೆಯ ನಂತರ ಮತ್ತಷ್ಟು ಮಾರಕ ದಾಳಿ…

1 hour ago

ಕಸ್ಟಡಿ ಸಾವು | 9 ಮಂದಿ ಪೊಲೀಸರಿಗೆ ಮರಣದಂಡನೆ ; ಮಧುರೈ ಕೋರ್ಟ್‌ ಮಹತ್ವದ ತೀರ್ಪು

ಮದುರೈ : ತಮಿಳುನಾಡಿನ ತೂತುಕುಡಿ ಜಿಲ್ಲೆಯ ಶಾಂತನ್‌ಕುಲಂ ಪೊಲೀಸ್ ಠಾಣೆ ಕಸ್ಟಡಿಯಿಂದಲೇ ತಂದೆ,ಮಗ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಸೋಮವಾರ…

2 hours ago

ಇಂಡಿಯಾ ಸ್ಕಿಲ್ಸ್ 2025-26 ರಾಷ್ಟ್ರೀಯ ಸ್ಪರ್ಧೆ : ಕರ್ನಾಟಕಕ್ಕೆ 3ನೇ ಸ್ಥಾನ

ಬೆಂಗಳೂರು : ಕೌಶಲ್ಯ ಕ್ಷೇತ್ರದಲ್ಲಿ ಕರ್ನಾಟಕ ಈಗ ಇಡೀ ದೇಶದಲ್ಲಿ ಮುಂಚೂಣಿಯತ್ತ ಸಾಗುತ್ತಿದೆ. ಇತ್ತೀಚೆಗೆ ಗ್ರೇಟರ್ ನೋಯ್ಡಾದ ಇಂಡಿಯಾ ಎಕ್ಸ್‌ಪೋ…

2 hours ago

ಸರಗೂರಿನ ನೇರಳೆ ಗ್ರಾಮಕ್ಕೆ ನೇರ ಬಸ್‌ ಕಲ್ಪಿಸಿ : ಗ್ರಾಮಸ್ಥರ ಆಗ್ರಹ

ಸರಗೂರು : ಈ ಹಿಂದೆ ನೇರಳೆ-ಮಾಗುಡಿಲು ಗ್ರಾಮಕ್ಕೆ ನೇರವಾಗಿ ಕೆಎಸ್‌ಆರ್‌ಟಿಸಿ ಬಸ್ ಸೇವೆ ಇತ್ತು. ಈಗ ಆ ಬಸ್ ನೇರಳೆಗೆ…

2 hours ago