ದೇಶ- ವಿದೇಶ

ಪ್ರಧಾನಿ ನರೇಂದ್ರ ಮೋದಿ ಮನ್‌ ಕಿ ಬಾತ್‌ ಕಾರ್ಯಕ್ರಮದ 117ನೇ ಸಂಚಿಕೆ

ನವದೆಹಲಿ: ಮುಂದೆ ನಡೆಯುವ ಮಹಾಕುಂಭ ಮೇಳವು ದೇಶದಲ್ಲಿ ಏಕತೆಯ ಭಾವವನ್ನು ಬಿತ್ತಿ, ದ್ವೇಷ ಮತ್ತು ಸಮಾಜ ವಿಭಜನೆಯನ್ನು ತೊಡೆದು ಹಾಕುವ ಧಾರ್ಮಿಕ ಸಭೆಯಾಗಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆಕೊಟ್ಟಿದ್ದಾರೆ.

ಇಂದು ತಮ್ಮ ಮಾಸಿಕ ಮನ್‌ ಕಿ ಬಾತ್‌ ರೇಡಿಯೋ ಕಾರ್ಯಕ್ರಮದ 117ನೇ ಸಂಚಿಕೆಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಇಡೀ ದೇಶವನ್ನು ಒಗ್ಗೂಡಿಸುವುದು ಈ ಮಹಾಕುಂಭ ಮೇಳದ ಬಹುಮುಖ್ಯ ಸಂದೇಶವಾಗಿರಬೇಕು ಎಂದರು.

ಪ್ರತಿ 12 ವರ್ಷಕ್ಕೊಮ್ಮೆ ಈ ಮಹಾ ಕುಂಭಮೇಳ ನಡೆಯಲಿದೆ. ಈ ಬಾರಿ ಜನವರಿ.13 ರಂದು ಪ್ರಯಾಗ್‌ರಾಜ್‌ನಲ್ಲಿ ಈ ಬೃಹತ್‌ ಧಾರ್ಮಿಕ ಕಾರ್ಯಕ್ರಮ ನಡೆಸಲಾಗುತ್ತಿದೆ.

ಈ ಕುಂಭ ಮೇಳದಲ್ಲಿ ಭಾಗವಹಿಸುವ ಜನತೆಯನ್ನು ಉದ್ದೇಶಿಸಿ ʼವಿವಿಧತೆಯಲ್ಲಿ ಏಕತೆʼ ಎಂಬುದು ನಮ್ಮ ದೇಶದ ವೈಶಿಷ್ಟ್ಯ. ಇದನ್ನು ಪ್ರಚಾರ ಮಾಡುವುದಕ್ಕಿಂತ ಬೇರೆ ವಿಷಯ ಯಾವುದು ಇಲ್ಲ ಸಂತಸ ವ್ಯಕ್ತಪಡಿಸಿದರು.

ಮುಂದಿನ ಗಣರಾಜ್ಯೋತ್ಸವಕ್ಕೆ ಭಾರತದ ಸಂವಿಧಾನ ಜಾರಿಯಾಗಿ 75ನೇ ವಾರ್ಷಿಕೋತ್ಸವ ಆಗಿದೆ. ಸಂವಿಧಾನದಿಂದಲೇ ನಾನು ಈ ಸ್ಥಾನಕ್ಕೆ ಬರಲು ಸಾಧ್ಯವಾಯಿತು. ಸಂವಿಧಾನ ಜಾರಿಯಾದ ದಿನದಿಂದ ಇಲ್ಲಿಯವರೆಗೂ ಪ್ರತಿಯೊಬ್ಬ ವ್ಯಕ್ತಿಗೂ ಮಾರ್ಗದರ್ಶನ ನೀಡುವ ಬೆಳಕಾಗಿದೆ ಎಂದರು.

ಜನರನ್ನು ಸಂವಿಧಾನದ ನಿಬಂಧನೆಗಳು ಮತ್ತು ಆತ್ಮದೊಂದಿಗೆ ಸಂಪರ್ಕಿಸಲು constitution75.com ಎಂಬ ವೆಬ್‌ಸೈಟ್‌ ಪ್ರಾರಂಭಿಸಲಾಗಿದೆ ಎಂದು ಮಾಹಿತಿ ನೀಡಿದ ಅವರು, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಸಂವಿಧಾನವನ್ನು ದುರ್ಬಲಗೊಳಿಸುತ್ತಿದೆ ಎಂಬ ವಿರೋಧ ಪಕ್ಷಗಳ ಆರೋಪಗಳನ್ನು ತಳ್ಳಿಹಾಕಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಸಾಂವಿಧಾನಿಕ ಮೌಲ್ಯಗಳು ಮತ್ತು ಚೈತನ್ಯವನ್ನು ಬಲಪಡಿಸುವ ತಮ್ಮ ಸರ್ಕಾರದ ಪ್ರಯತ್ನಗಳು ನಿರಂತರವಾಗಿವೆ. ಕಾಂಗ್ರೆಸ್‌ ಅಧಿಕಾರದಲ್ಲಿದ್ದಾಗ ದೇಶದ ಮಾರ್ಗದರ್ಶಿ ದಾಖಲೆಯನ್ನೇ ಬುಡಮೇಲು ಮಾಡಿದ್ದರು ಎಂದು ಆರೋಪಿಸಿದರು.

 

ಆಂದೋಲನ ಡೆಸ್ಕ್

Recent Posts

ಬಡವರ ಮತಗಳನ್ನು ತೆಗೆಯಲು ಎಸ್‌ಐಆರ್‌ ಸಂಚು: ಡಿಸಿಎಂ ಡಿ.ಕೆ.ಶಿವಕುಮಾರ್‌ ಕಿಡಿ

ಬೆಂಗಳೂರು: ಬಡವರ ಮತಗಳನ್ನು ತೆಗೆಯಲು ಎಸ್‌ಐಆರ್‌ ಮೂಲಕ ಸಂಚು ಮಾಡಲಾಗಿದೆ. ನಾವುಗಳು ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ನಮ್ಮ ಪಕ್ಷದ…

46 mins ago

ವಾಟಾಳ್‌ ನಾಗರಾಜ್‌ಗೆ ಬಿಗ್‌ ರಿಲೀಫ್:‌ 10 ಕೇಸ್‌ಗಳು ವಾಪಸ್‌

ಬೆಂಗಳೂರು: ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ಗೆ ರಾಜ್ಯ ಸರ್ಕಾರ ರಿಲೀಫ್‌ ನೀಡಿದೆ. ವಾಟಾಳ್‌ ನಾಗರಾಜ್‌ ಮೇಲಿನ ಕೇಸ್‌ಗಳನ್ನು ಸರ್ಕಾರ ಹಿಂಪಡೆಯಲು…

1 hour ago

52 ಪ್ರಕರಣಗಳನ್ನು ಹಿಂಪಡೆಯಲು ಸಂಪುಟ ಸಭೆಯಲ್ಲಿ ತೀರ್ಮಾನ: ಸಚಿವ ಪರಮೇಶ್ವರ್

ಬೆಂಗಳೂರು: ಕಾನೂನಾತ್ಮಕವಾಗಿ 52 ಪ್ರಕರಣಗಳನ್ನು ಹಿಂಪಡೆಯಬಹುದು ಎಂದು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್‌…

2 hours ago

ಆತ್ಮಹತ್ಯೆಯ ಹಾಟ್‌ಸ್ಪಾಟ್ ಆಗುತ್ತಿದೆ ಪ್ರಸಿದ್ದ ವೆಲ್ಲೆಸ್ಲಿ ಸೇತುವೆ

ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣದ ಪ್ರಸಿದ್ಧ ವೆಲ್ಲೆಸ್ಲಿ ಸೇತುವೆ ಆತ್ಮಹತ್ಯೆ ಹಾಟ್‌ಸ್ಪಾಟ್‌ ಆಗುತ್ತಿದ್ದು, ಸೇತುವೆ ಮೇಲಿಂದ ನದಿಗೆ ಧುಮುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವವರ ಸಂಖ್ಯೆ…

3 hours ago

ಕೋವಿಡ್‌ಗಿಂತಲೂ ಡೆಡ್ಲಿ ಎಬೋಲಾ ವೈರಸ್:‌ ರಾಜ್ಯಗಳಲ್ಲಿ ಕಟ್ಟೆಚ್ಚರ ವಹಿಸಲು ಕೇಂದ್ರ ಸೂಚನೆ

ನವದೆಹಲಿ: ಆಫ್ರಿಕಾದ ಹಲವು ಭಾಗಗಳಲ್ಲಿ ಕೋವಿಡ್‌ಗಿಂತಲೂ ಡೆಡ್ಲಿಯಾದ ಎಬೋಲಾ ವೈರಸ್‌ ಹಾವಳಿ ಕಂಡುಬಂದಿರುವ ಹಿನ್ನೆಲೆಯಲ್ಲಿ ಭಾರತದಲ್ಲೂ ಕಟ್ಟೆಚ್ಚರಕ್ಕೆ ಆದೇಶ ನೀಡಲಾಗಿದೆ.…

3 hours ago

24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆ

ನವದೆಹಲಿ: ಕರ್ನಾಟಕ ನಾಲ್ಕು ಸೇರಿದಂತೆ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಮಲ್ಲಿಕಾರ್ಜುನ ಖರ್ಗೆ, ಎಚ್.ಡಿ.ದೇವೇಗೌಡ, ಈರಣ್ಣ ಕಡಾಡಿ,…

5 hours ago