ಅಮರಾವತಿ: ವ್ಯಕ್ತಿಯೊಬ್ಬ ಪತ್ನಿ ಹಾಗೂ ತಾಯಿಯನ್ನು ಕತ್ತು ಹಿಸುಕಿ ಕೊಂದು ಬಳಿಕ ಇಬ್ಬರು ಮಕ್ಕಳೊಂದಿಗೆ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ ಘಟನೆ ಆಂಧ್ರಪ್ರದೇಶದ ತಿರುಪತಿ ಜಿಲ್ಲೆಯ ವೆಂಕಟಕೃಷ್ಣಪಲೆಂನಲ್ಲಿ ನಡೆದಿದೆ.
ವೆಂಕಟಕೃಷ್ಣಪಲೆಂ ಪಂಚಾಯತ್ ವ್ಯಾಪ್ತಿಯ ನಿವಾಸಿ ಮೋಹನ್ ತನ್ನ ತಾಯಿ ಚಂದ್ರಕಲಾ ಹಾಗೂ ಪತ್ನಿ ಹರಿತಾ ಅವರನ್ನು ಮನೆಯಲ್ಲಿ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ.
ಬಳಿಕ ಅಲ್ಲಿಂದ ಇಬ್ಬರು ಮಕ್ಕಳಾದ ಕೌಶಿಕ್ ಹಾಗೂ ಹರಿಣಿ ಓದುತ್ತಿದ್ದ ಶಾಲೆಗೆ ಹೋಗಿ ಮನೆಯಲ್ಲಿ ಕುಟುಂಬದ ಸದಸ್ಯರೊಬ್ಬರು ನಿಧನ ಹೊಂದಿದ್ದಾರೆ ಎಂದು ಮಕ್ಕಳನ್ನು ಕರೆದುಕೊಂಡು ಬಂದಿದ್ದ. ಆದರೆ ಆತ ಮನೆಗೆ ವಾಪಸ್ ಆಗಿರಲಿಲ್ಲ.
ಪೊಲೀಸರು ಹುಡುಕಾಟ ನಡೆಸಿದಾಗ ಮೋಹನ್ ಮಕ್ಕಳೊಂದಿಗೆ ಪುತ್ತೂರು ತಾಲ್ಲೂಕಿನ ವೇಪಗುಂಟ ಬಳಿಯ ರೈಲ್ವೆ ಹಳಿಯ ಮೇಲೆ ಮಲಗಿ ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದು ಬಂದಿದೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಲಗುಮೂಲೆ ಗ್ರಾಮದಲ್ಲಿ 3 ವರ್ಷಕ್ಕೊಮ್ಮೆ ನಡೆಯುವ ಶ್ರೀ ಬಸವೇಶ್ವರ…
ನಂಜನಗೂಡು: ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕೆಲಸಗಳಿಗೂ ಆದ್ಯತೆ ನೀಡಲಾಗುತ್ತಿದ್ದು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು…
ಬೆಂಗಳೂರು: ಪ್ರಸಕ್ತ ಎಸ್ಎಸ್ಎಲ್ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾಗಿರುವ ಎಲ್ಲಾ ವಿದ್ಯಾರ್ಥಿಗಳನ್ನು ಮುಂಬರುವ ಪರೀಕ್ಷೆ-2ಕ್ಕೆ ಕಡ್ಡಾಯವಾಗಿ ನೋಂದಾಯಿಸಿ, ಅವರನ್ನು ಶೈಕ್ಷಣಿಕವಾಗಿ ಸಜ್ಜುಗೊಳಿಸಲು ಅಗತ್ಯ…
ರಾಮನಗರ: ಮೇ.15ಕ್ಕೆ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗುವುದು ಫಿಕ್ಸ್ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು,…
ಮಂಡ್ಯ: ಮಳವಳ್ಳಿ ಕ್ಷೇತ್ರದ ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ ಅವರ ಸಹೋದರ ಪಿ.ಎಂ. ಪರಶಿವಮೂರ್ತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪರಶಿವಮೂರ್ತಿ ಅವರ…
ನವದೆಹಲಿ: ಭಾರತದ ಮೋಸ್ಟ್ ವಾಂಟೆಡ್ ಭೂಗತಪಾತಕಿ ಹಾಗೂ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ರೂವಾರಿ ದಾವುದ್ ಇಬ್ರಾಹಿಂನ ಆಪ್ತ…