ಬೀಜಿಂಗ್: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನರಾಗಿದ್ದು, ಈ ಹಿನ್ನೆಲೆಯಲ್ಲಿ ಭಾರತ-ಚೀನಾ ಅಭಿವೃದ್ಧಿಗೆ ಸಿಂಗ್ ಅವರ ಕಾರ್ಯ ವೈಖರಿಯನ್ನು ನೆನೆದುಕೊಂಡು ಶ್ಲಾಘಿಸುವ ಮೂಲಕ ಚೀನಾ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು, 10 ವರ್ಷಗಳ ಕಾಲ ದೇಶದ ಪ್ರಧಾನಿಯಾಗಿದ್ದ ವೇಳೆ ಭಾರತ ಮತ್ತು ಚೀನಾ ದೇಶಗಳ ಗೊಂದಲಗಳನ್ನು ನಿವಾರಿಸಿ, ಈ ದೇಶಗಳ ಅಭಿವೃದ್ಧಿಗಾಗಿ ಒಪ್ಪಂದಗಳನ್ನು ಮಾಡಿಕೊಂಡಿದ್ದನ್ನು ನೆನೆದು ಅಭಿನಂದಿಸಿ ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಮಾವೋನಿಂಗ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಭಾರತ ಹಾಗು ಇಡೀ ಪ್ರಪಂಚ ಕಂಡ ಹೆಸರಾಂತ ಆರ್ಥಿಕ ತಜ್ಞ ಮನಮೋಹನ್ ಸಿಂಗ್ ಅವರು ಅಂದಿನ ಕಾಲದಲ್ಲಿ ಪ್ರಧಾನಿಯಾಗಿದ್ದಾಗ ಚೀನಾ ಮತ್ತು ಭಾರತದ ಸಂಬಂಧದ ವೃದ್ಧಿಗಾಗಿ ಶಾಂತಿ ಹಾಗೂ ಸಮೃದ್ಧಿಗಾಗಿ ಆರ್ಥಿಕವಾಗಿ ಅಪಾರ ಕೊಡುಗೆಗಳನ್ನು ನೀಡಿದ್ದಾರೆ ಎಂದು ಸಂತಾಪ ವ್ಯಕ್ತಪಡಿಸಿದ್ದಾರೆ.
ಇನ್ನೂ ಸಿಂಗ್ ಅವರ ನಿಧನದಿಂದ ಚೀನಾ ದೇಶ ತೀವ್ರ ಸಂತಾಪ ಸೂಚಿಸುತ್ತಿದ್ದು, ಭಾರತ ಸರ್ಕಾರ, ಕುಟುಂಬಸ್ಥರು, ಅಭಿಮಾನಿಗಳು ಹಾಗೂ ಸಾರ್ವಜನಿಕರಿಗೆ ತನ್ನ ಸಂತಾಪಗಳನ್ನು ಸೂಚಿಸುತ್ತದೆ ಎಂದು ಹೇಳಿದ್ದಾರೆ.
ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…
ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…
ವೈದ್ಯರು ಮೊಬೈಲ್ ಟಾರ್ಚ್ ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…
ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…