ದೇಶ- ವಿದೇಶ

ಮನಮೋಹನ ಸಿಂಗ್‌ ನಿಧನ: ಸೋನಿಯಾ, ಸಂಸದರಾದ ಪ್ರಿಯಾಂಕಾ ಗಾಂಧಿ, ರಾಹುಲ್‌ ಸೇರಿದಂತೆ ಅಂತಿಮ ದರ್ಶನ ಪಡೆದ ಗಣ್ಯರು

ನವದೆಹಲಿ: ದೇಶದ ಆರ್ಥಿಕ ತಜ್ಞ ಹಾಗೂ ಮಾಜಿ ಪ್ರಧಾನಿ ಡಾ.ಮನಮೋಹನ ಸಿಂಗ್‌ ಅವರು ಉಸಿರಾಟದ ತೊಂದರೆಯಿಂದ ನಿಧನರಾಗಿದ್ದು, ಇವರ ಪಾರ್ಥಿವ ಶರೀರದ ಅಂತಿಮ ದರ್ಶನವನ್ನು ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ, ಸಂಸದರಾದ ಪ್ರಿಯಾಂಕಾ ಗಾಂಧಿ ಹಾಗೂ ರಾಹುಲ್‌ ಗಾಂಧಿ ಸೇರಿದಂತೆ ಅನೇಕ ರಾಜಕೀಯ ಗಣ್ಯರು ಪಡೆದಿದ್ದಾರೆ.

ಮನಮೋಹನ ಸಿಂಗ್‌ ಅವರು ಗುರುವಾರ(ಡಿಸೆಂಬರ್‌.26) ಅನಾರೋಗ್ಯ ಸಮಸ್ಯೆಯಿಂದ ನಿಧನರಾಗಿದ್ದಾರೆ. ದೆಹಲಿಯ ಮೋತಿಲಾಲ್‌ ನೆಹರು ಮಾರ್ಗದಲ್ಲಿರುವ ಅವರ ನಿವಾಸದಲ್ಲಿ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕೆ ಇಡಲಾಗಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ, ಸಂಸದರಾದ ಪ್ರಿಯಾಂಕಾ ಗಾಂಧಿ, ರಾಹುಲ್‌ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ನಮನ ಸಲ್ಲಿಸಿದ್ದಾರೆ.

ಇನ್ನು ನಾಳೆ(ಡಿಸೆಂಬರ್‌.28) ಎಐಸಿಸಿ ಕಚೇರಿಯ ಮುಂಭಾಗದಲ್ಲಿ ಬೆಳಿಗ್ಗೆ 8.30 ರಿಂದ 9.30 ಗಂಟೆಯವರೆಗೂ ಸಾರ್ವಜನಿಕರಿಗಾಗಿ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಅಲ್ಲದೇ ದೆಹಲಿಯ ರಾಜ್‌ಘಾಟ್‌ ಭವನದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ಅರ್ಚನ ಎಸ್‌ ಎಸ್

Recent Posts

ಮೈ-ಬೆಂ ಹೆದ್ದಾರಿ ಅಪಘಾತ | 2 ವರ್ಷದಲ್ಲಿ 1,674 ಅಪಘಾತ, 215ಮಂದಿ ಸಾವು

ಮಂಡ್ಯ : ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ-275 ರಲ್ಲಿ 2023ರಿಂದ 2025 ರವರೆಗೆ ಒಟ್ಟು 1,674 ಅಪಘಾತಗಳು ನಡೆದಿದ್ದು, 215 ಮಂದಿ…

8 mins ago

ಮೈ-ಬೆಂ ಹೆದ್ದಾರಿ |ರೂ.855 ಕೋಟಿ ಟೋಲ್‌ ಸಂಗ್ರಹ

ಮಂಡ್ಯ : ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ-275 ವಾಹನಗಳ ಸಂಚಾರಕ್ಕೆ ಮುಕ್ತವಾದ ದಿನದಿಂದ ಈವರೆಗೆ 855.79 ಕೋಟಿ ರೂ. ಟೋಲ್ ಶುಲ್ಕ…

12 mins ago

ಸಾಮಾಜಿಕ ಬಹಿಷ್ಕಾರ : ಶಿಕ್ಷೆ ಪ್ರಮಾಣ 7 ವರ್ಷಕ್ಕೆ ಹೆಚ್ಚಿಸಲು ಆಗ್ರಹ

ಮಂಡ್ಯ : ಸಾಮಾಜಿಕ ಬಹಿಷ್ಕಾರ ನಿಷೇಧ ವಿಧೇಯಕದಡಿ ಶಿಕ್ಷೆ ಪ್ರಮಾಣ 7 ವರ್ಷಕ್ಕೆ ಹೆಚ್ಚಿಸಬೇಕು. ಎಸ್ಸಿ, ಎಸ್ಟಿ ಸಮುದಾಯ ಪ್ರತಿ…

16 mins ago

ಪತ್ನಿ ಕೊಲೆಗೆ ಪತಿಯಿಂದಲೇ ಸುಫಾರಿ..!

ಮೈಸೂರು : ಪತ್ನಿಯ ವರ್ತನೆಯಿಂದ ಬೇಸತ್ತಿದ್ದ ಪತಿ ಆಕೆಯನ್ನು ಹತ್ಯೆ ಮಾಡಲು ಯುವಕರಿಬ್ಬರಿಗೆ ಸುಫಾರಿ ನೀಡಿರುವ ಅಘಾತಕಾರಿ ಘಟನೆ ಬೆಳಕಿಗೆ…

19 mins ago

ಹುಲಿ ದಾಳಿಗೆ ಹಸು ಬಲಿ

ಹುಣಸೂರು : ತಾಲ್ಲೂಕಿನ ಗುರುಪುರ ಹುಣಸೇಕಟ್ಟೆ ಬಳಿಯ ಟಿಬೆಟ್ ಕ್ಯಾಂಪ್‌ನ ಬಿ.ವಿಲೇಜ್‌ನ ಜಮೀನಿನಲ್ಲಿ ಹುಲಿಯೊಂದು ಹಸುವನ್ನು ಕೊಂದು ಹಾಕಿದೆ. ಟಿಬೆಟ್…

22 mins ago

ಹೊಸ ವರ್ಷ ಸಂಭ್ರಮ | ಮಾರ್ಗಸೂಚಿ ಪ್ರಕಟ ; ಉಲ್ಲಂಘಿಸಿದರೆ ಕಠಿಣ ಕ್ರಮದ ಎಚ್ಚರಿಕೆ

ಬೆಂಗಳೂರು : 2027ರ ಹೊಸ ವರ್ಷಾಚರಣೆಯ ಸಂಭ್ರಮಕ್ಕೆ ದಿನಗಣನೆ ಶುರುವಾಗಿರುವ ಬೆನ್ನಲ್ಲೇ ಬೆಂಗಳೂರು ಪೊಲೀಸರು ಹೊಸ ಮಾರ್ಗಸೂಚಿ ಪ್ರಕಟಿಸಿದ್ದಾರೆ. ಗೋವಾದ…

1 hour ago